Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜಾ ವೆಂಕಟಪ್ಪ ನಾಯಕ ಅವರು ಅಜಾತ ಶತ್ರು,...

ರಾಜಾ ವೆಂಕಟಪ್ಪ ನಾಯಕ ಅವರು ಅಜಾತ ಶತ್ರು, ಆದರ್ಶ ವ್ಯಕ್ತಿತ್ವ: ಡಿಸಿಎಂ ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ26 Feb 2024 12:57 PM IST
share
ರಾಜಾ ವೆಂಕಟಪ್ಪ ನಾಯಕ ಅವರು ಅಜಾತ ಶತ್ರು, ಆದರ್ಶ ವ್ಯಕ್ತಿತ್ವ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : "ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ತಾಲೂಕಿನ ಶಾಸಕರಾಗಿದ್ದ ದಿವಂಗತ ರಾಜಾ ವೆಂಕಟಪ್ಪ ನಾಯಕ ಅವರು ಅಜಾತ ಶತ್ರು ಹಾಗೂ ಆದರ್ಶ ವ್ಯಕ್ತಿತ್ವ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದರು.

ವಿಧಾನಸಭೆಯಲ್ಲಿ ಸಂತಾಪ ಸೂಚಕ ನಿರ್ಣಯದ ವೇಳೆ ಮಾತನಾಡಿದ ಶಿವಕುಮಾರ್ ಅವರು "ರಾಜಾ ವೆಂಕಟಪ್ಪ ನಾಯಕ ಅವರು ನನಗೆ 1987ರಿಂದ ಪರಿಚಯ. ನಾನು ಗ್ರಾನೈಟ್ ವ್ಯವಹಾರ ಮಾಡುತ್ತಿದ್ದಾಗ ಅವರು ತಮ್ಮ ಸ್ನೇಹಿತರೊಂದಿಗೆ ನಮ್ಮ ಊರಿಗೆ ಬಂದಿದ್ದರು. ನಮ್ಮನ್ನು ಅವರ ಊರಿಗೆ ಕರೆದುಕೊಂಡು ಹೋಗಿ ಅಲ್ಲಿನ ಭಾಗದ ಕಲ್ಲಿನ ಬಗ್ಗೆ ತೋರಿಸಿದ್ದರು. ಆ ಸಂದರ್ಭದಲ್ಲಿ ನಾನು ಅವರನ್ನು ಕೇಳಿದೆ. ನಾನು ಈಗಾಗಲೇ ವಿಧಾನಸಭೆಗೆ ಸ್ಪರ್ಧಿಸಿ ಸೋತಿದ್ದೇನೆ. ನೀವು ರಾಜ ಮನೆತನದವರು, ನಿಮ್ಮ ಕುಟುಂಬದವರು ಶಾಸಕರಾಗಿದ್ದಾರೆ. ನೀವು ಯಾಕೆ ಇನ್ನು ಸ್ಪರ್ಧೆ ಮಾಡಿಲ್ಲ ಎಂದು ಕೇಳಿದೆ. ನಂತರ ಅವರು 1994ರಲ್ಲಿ ಸ್ಪರ್ಧಿಸಿ, ನಮ್ಮ ಜತೆ ನಾಲ್ಕು ಬಾರಿ ಶಾಸಕರಾಗಿ ಕೆಲಸ ಮಾಡಿದ್ದಾರೆ " ಎಂದರು.

ಯಾವುದೇ ರಾಜ ಸದಾ ರಾಜನಾಗಿ, ಯಾವುದೇ ಶ್ರೀಮಂತ ಸದಾ ಶ್ರೀಮಂತನಾಗಿ, ಯಾವುದೇ ಬಡವ ಸದಾ ಬಡವನಾಗಿ ಇರಲು ಸಾಧ್ಯವಿಲ್ಲ. ಯಾರು ಯಾವಾಗ ಬೇಕಾದರೂ ಏನು ಬೇಕಾದರೂ ಆಗಬಹುದು. ದೇವರು ನಮಗೆ ಕೊಟ್ಟಿರುವುದು ಶಾಶ್ವತವಲ್ಲ. ನಮ್ಮ ಸಂಬಂಧಗಳು ಮಾತ್ರ ಶಾಶ್ವತ ಎಂದು ಹೇಳಿದರು.

ನಾಲ್ಕು ದಿನಗಳ ಹಿಂದೆ ನಾನು, ಜಿ.ಸಿ ಚಂದ್ರಶೇಖರ್, ಎಸ್ ಟಿ ಸೋಮಶೇಖರ್, ಶ್ರೀನಿವಾಸ್ ಅವರ ಜತೆ ಆಸ್ಪತ್ರೆಗೆ ಹೋಗಿ ರಾಜಾ ವೆಂಕಟಪ್ಪ ನಾಯಕ ಅವರ ಆರೋಗ್ಯ ವಿಚಾರಿಸಿ ಬಂದಿದ್ದೆ. ಅವರನ್ನು ಐಸಿಯುನಿಂದ ಸಾಮಾನ್ಯ ವಾರ್ಡ್ ಗೆ ಕರೆತಂದಿದ್ದರು. ನಾನು ಖಾಸಗಿಯಾಗಿ ಅವರ ಜೊತೆ ಮಾತನಾಡಿದೆ. ಅವರು ಕಾಗದ ಮೇಲೆ ಬರೆದು ನನ್ನ ಜೊತೆ ಮಾತನಾಡಲು ಪ್ರಯತ್ನಿಸಿದರು. ರಾಜ್ಯಸಭೆ ಚುನಾವಣೆ ಬಗ್ಗೆ ಮಾತನಾಡಿದಾಗ, ಮತದಾನದ ವೇಳೆಗೆ ಬರುತ್ತೇನೆ ಎಂದು ಸನ್ನೆ ಮೂಲಕ ಹೇಳಿದರು. ಅವರಿಂದ ಸಹಿ ಹಾಕಿಸಲು ಹೋದಾಗ ಅವರ ಸಹಿ ಸರಿಯಾಗಿ ಬರಲಿಲ್ಲ. ಆಗ ವೈದ್ಯರು ನಾವು ಪ್ರಮಾಣ ಪತ್ರ ನೀಡುತ್ತೇವೆ ಎಂದು ತಿಳಿಸಿದರು. ನಾನು ಅವರ ಕುಟುಂಬದ ಸದಸ್ಯರ ಜೊತೆ ಮಾತನಾಡಿದೆ ಎಂದು ತಿಳಿಸಿದರು.

ನಾನು ನಿನ್ನೆ ಕಾರ್ಯಕ್ರಮದಲ್ಲಿ ಇದ್ದಾಗ ಅವರು ವಿಧಿವಶರಾದ ಬಗ್ಗೆ ಮಾಹಿತಿ ತಿಳಿಯಿತು. ಆಗ ನಾನು ತಕ್ಷಣ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದೆ. ರಾಜಕಾರಣ ಏನೇ ಇರಲಿ, ರಾಜಾ ವೆಂಕಟಪ್ಪ ನಾಯಕ ಅವರು ನಮಗೆ ತೊಂದರೆ ಕೊಟ್ಟಿದ್ದಾರೆ ಎಂದು ಯಾರೊಬ್ಬರೂ ಹೇಳುವುದಿಲ್ಲ.

ಸಾಧನೆ ಇಲ್ಲದೆ ಸತ್ತರೆ ಸಾವಿಗೆ ಅವಮಾನ, ಆದರ್ಶ ಇಲ್ಲದೆ ಬದುಕಿದರೆ ಬದುಕಿಗೆ ಅವಮಾನ ಎಂಬ ವಿವೇಕಾನಂದರ ಮಾತಿನಂತೆ ಅವರು ಯಾವುದೇ ವೈರತ್ವ ಇಲ್ಲದೆ ಜೀವನ ಮಾಡಿದ್ದಾರೆ. ರಾಜಾ ವೆಂಕಟಪ್ಪ ಅವರ ನಿಧನದ ಸುದ್ದಿ ಕೇಳಿ ಅವರ ಅಭಿಮಾನಿ ಕೂಡ ಹೃದಯಾಘಾತದಿಂದ ಮೃತರಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಆ ಕ್ಷೇತ್ರದಿಂದ ಬೇರೆ ಪಕ್ಷದವರು ಪಕ್ಷ ಸೇರುವ ಸನ್ನಿವೇಶ ಇತ್ತು. ಆಗ ಖರ್ಗೆ ಅವರು, ರಾಜಾ ವೆಂಕಟಪ್ಪ ನಾಯಕ ಅವರು ಉತ್ತಮ ವ್ಯಕ್ತಿತ್ವ ಹೊಂದಿದ್ದು ಅವರು ಗೆದ್ದೇ ಗೆಲ್ಲುತ್ತಾರೆ ಎಂದು ಹೇಳಿದರು. ಖರ್ಗೆ ಅವರು ರಾಜಾ ವೆಂಕಟಪ್ಪ ಅವರಿಗೆ ರಾಜ್ಯ ಮಟ್ಟದ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ನೀಡುವಂತೆ ಸೂಚಿಸಿದರು.

ರಾಜಾ ವೆಂಕಟಪ್ಪ ನಾಯಕ ಅವರು ನಮ್ಮಿಂದ ದೂರವಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X