Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಡಾಲರ್‌ನ ಮೌಲ್ಯ 90 ರೂ.ಗೆ...

ಡಾಲರ್‌ನ ಮೌಲ್ಯ 90 ರೂ.ಗೆ ತಲುಪಿರುವುದಕ್ಕಿಂತ ಅವಮಾನಬೇಕೇ? : ರಮೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ10 Jan 2026 11:40 PM IST
share
ಡಾಲರ್‌ನ ಮೌಲ್ಯ 90 ರೂ.ಗೆ ತಲುಪಿರುವುದಕ್ಕಿಂತ ಅವಮಾನಬೇಕೇ? : ರಮೇಶ್ ಕುಮಾರ್
‘ಸೌಹಾರ್ದ ಭಾರತ-ಸಮಾನತೆಯ ಸ್ನೇಹಿತ’ ಕೃತಿಯ ಜನಾರ್ಪಣೆ ಸಮಾರಂಭ

ಬೆಂಗಳೂರು : ಒಂದು ಅಮೆರಿಕನ್ ಡಾಲರ್‌ನ ಮೌಲ್ಯವು 90 ರೂಪಾಯಿಗೆ ತಲುಪಿದ್ದು, ಭಾರತಮಾತೆಗೆ ಇದಕ್ಕಿಂತ ಅವಮಾನಬೇಕೇ? ಎಂದು ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಇಂದಿಲ್ಲಿ ಖಾರವಾಗಿ ಪ್ರಶ್ನಿಸಿದ್ದಾರೆ.

ಶನಿವಾರ ಇಲ್ಲಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಜನ ಪ್ರಕಾಶನ, ಸೌಹಾರ್ದ ಕರ್ನಾಟಕ ಮತ್ತು ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿವಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ‘ಸೌಹಾರ್ದ ಭಾರತ-ಸಮಾನತೆಯ ಸ್ನೇಹಿತ’ ಕೃತಿಯ ಜನಾರ್ಪಣೆ ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಆರೆಸ್ಸೆಸ್‍ನವರು ಭಾರತಮಾತೆ, ಸಂಸ್ಕೃತಿ, ಹಿಂದೂ ಧರ್ಮ, ವಿವೇಕಾನಂದರನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ. ವಿವೇಕಾನಂದರು ಕೋಲ್ಕತ್ತಾದಲ್ಲಿ ಇಲ್ಲ, ಕನ್ಯಾಕುಮಾರಿಯಲ್ಲಿಯೂ ಇಲ್ಲ. ಕೊನೆಗೆ ಅವರು ಚಾಮರಾಜಪೇಟೆಯ ಕೇಶವಕೃಪಾದಲ್ಲಿದ್ದಾರೆ ಎಂದು ಗೊತ್ತಾಗಿದೆ. ಭಗತ್ ಸಿಂಗ್‍ಗೆ ಬಲವಂತವಾಗಿ ಜನಿವಾರವನ್ನು ಹಾಕಿದ್ದಾರೆ. ಹೀಗೆ ನಮ್ಮ ಪ್ರತಿರೋಧಿಗಳು, ಮತಾಂಧರು ಸುಳ್ಳನ್ನು ಸತ್ಯ ಮಾಡುವಲ್ಲಿ ನಿಸ್ಸೀಮರಾಗಿದ್ದಾರೆ. ಆದರೆ ಸತ್ಯವನ್ನು ಹೇಳಲು ಆಗದ ಸ್ಥಿತಿಯಲ್ಲಿ ನಾವು ಇದ್ದೇವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಮಾತನಾಡಿ, ಸೌಹಾರ್ದತೆಯ ಹಾಗೂ ಸಮಾನತೆಯ ಆಶಯಗಳು ಯುವಜನರಿಗೆ ತಲುಪಬೇಕು ಎಂದು ಏಕಕಾಲದಲ್ಲಿಯೇ 23 ಊರುಗಳಲ್ಲಿ ಕೃತಿ ಲೋಕಾರ್ಪಣೆಯಾಗುತ್ತಿದೆ. 20ನೇ ಶತಮಾನದಲ್ಲಿ ಸಮಾನತೆಯ ಬಗ್ಗೆ ಮಾತನಾಡುತ್ತಿದ್ದೇವು. 21ನೇ ಶತಮಾನದಲ್ಲಿ ಸೌಹಾರ್ಧತೆಯ ಬಗ್ಗೆ ಮಾತನಾಡುತ್ತಿದ್ದೇವೆ ಎಂದರು.

ಇಂದು ಏಕಕಾಲಕ್ಕೆ ಮನುವಾದ ಮತ್ತು ಬಂಡವಾಳವಾದ ಇದೆ. ಇವನ್ನು ಎದುರಿಸಬೇಕಾಗಿದೆ. ಸಮಸ್ಯೆ ಸಂಕೀರ್ಣವಾಗಿದ್ದು, ಪರಿಹಾರ ಸರಳವಾಗಿರುವುದಿಲ್ಲ ಎಂದ ಅವರು, ಸೌಹಾರ್ದತೆ ಎಂದರೆ ಪಕ್ಷಪಾತ, ಪಕ್ಷ ರಾಜಕೀಯವಲ್ಲ, ಪೂರ್ವಗ್ರಹವಲ್ಲ. ಅವಿವೇಕತೆಯನ್ನು ಮೀರಿದ ವಿವೇಕದ ಹಾದಿಯಾಗಿದೆ. ಸತ್ಯ, ಅಹಿಂಸೆ, ಸಮಾನತೆ ಇದ್ದರೆ ಮಾತ್ರ ಸೌಹಾರ್ದತೆ ಜನರನ್ನು ತಲುಪುತ್ತದೆ ಎಂದು ಹೇಳಿದರು.

ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿವಿ ಕುಲಪತಿ ಡಾ.ಬಿ.ರಮೇಶ್ ಮಾತನಾಡಿ, ಧರ್ಮ, ಭಾಷೆ, ಗಡಿ ಹೆಸರಿನಲ್ಲಿ ಸಂಘರ್ಷಗಳು ನಡೆಯುತ್ತಿದ್ದು, ಸಾಮಾಜಿಕ ಸಾಮರಸ್ಯ ಹಾಳಾಗುತ್ತಿದೆ. ಅದಕ್ಕೆ ಔಷಧಿ ಎಂಬಂತೆ ಈ ಕೃತಿಯನ್ನು ರಚನೆ ಮಾಡಲಾಗಿದೆ. ಪ್ರಾಧ್ಯಾಪಕರಿಗೆ, ವಿದ್ಯಾರ್ಥಿಗಳಿಗೆ, ಚಳುವಳಿಗಾರರಿಗೆ ಈ ಕೃತಿ ಅನುಕೂಲವಾಗಿದೆ. ಸೌಹಾರ್ದ ಹಾಳು ಮಾಡುವವರ, ಅವರ ಸಂಘಟನೆಗಳ ಬಗ್ಗೆ ಈ ಕೃತಿಯಲ್ಲಿ ಮಾಹಿತಿ ಇದೆ ಎಂದರು.

ಲೇಖಕಿ ಎಚ್.ಎಲ್. ಪುಷ್ಪ ಮಾತನಾಡಿ, ತಂದೆಯೇ ಮಗಳನ್ನು ಕೊಲ್ಲುವ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣಗೊಂಡಿದೆ. ಸಂವಿಧಾನದ ಉಳಿವಿಗಾಗಿ ಬೀದಿಗೆ ಬಂದು ಮಾತನಾಡುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆ. ಅಮೇರಿಕ ದೇಶವು ವೆನಿಝುವೆಲಾ ದೇಶದ ಮೇಲೆ ದಾಳಿ ಮಾಡಿದೆ. ಇಂತಹ ಸಂದರ್ಭದಲ್ಲಿ ಬಿಡುಗಡೆಯಾಗುತ್ತಿರುವ ಬರಗೂರು ರಾಮಚಂದ್ರಪ್ಪ ಅವರ ‘ಸೌಹಾರ್ದ ಭಾರತ’ ಕೃತಿ ಅರ್ಥ ಪೂರ್ಣವಾಗಿದೆ ಎಂದರು.

ಸಮಾರಂಭದಲ್ಲಿ ನಾಡೋಜ ಬರಗೂರು ರಾಮಚಂದ್ರಪ್ಪ ಅವರ ‘ಸೌಹಾರ್ದ ಭಾರತ-ಸಮಾನತೆಯ ಸ್ನೇಹಿತ’ ಕೃತಿ ಜನಾರ್ಪಣೆ ಮಾಡಲಾಯಿತು. ದಲಿತ ಮುಖಂಡ ಮಾವಳ್ಳಿ ಶಂಕರ್, ಮೋಹನ್ ರಾಜ್, ಸೇರಿದಂತೆ ಮತ್ತಿತರರು ಇದ್ದರು.

Tags

Ramesh Kumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X