Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು ನಗರದಲ್ಲಿ ಮುಂದುವರೆದ ಮಳೆ,...

ಬೆಂಗಳೂರು ನಗರದಲ್ಲಿ ಮುಂದುವರೆದ ಮಳೆ, ಜಲದಿಗ್ಬಂಧನದಲ್ಲಿ ಜನತೆ

ವಾರ್ತಾಭಾರತಿವಾರ್ತಾಭಾರತಿ20 May 2025 8:45 PM IST
share
ಬೆಂಗಳೂರು ನಗರದಲ್ಲಿ ಮುಂದುವರೆದ ಮಳೆ, ಜಲದಿಗ್ಬಂಧನದಲ್ಲಿ ಜನತೆ

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದಲ್ಲಿ ಸತತ ನಾಲ್ಕನೇ ದಿನವೂ ಮಳೆಯಾಗಿದ್ದು, ಮಂಗಳವಾರದಂದು ಸುರಿದ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದವು. ನಿರಂತರ ಮಳೆಯಿಂದಾಗಿ ನಗರದ ಬಹುತೇಕ ಬಡಾವಣೆಗಳು ಜಲಾವೃತಗೊಂಡು, ಮನೆಗಳಿಗೆ ನೀರು ನುಗ್ಗಿದ್ದು, ಸಾವಿರಾರು ಜನರು ಜಲದಿಗ್ಬಂಧನದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.

ನಗರದಲ್ಲಿ ನಾಲ್ಕು ದಿನಗಳಿಂದ ರಾತ್ರಿಯಾಗುತ್ತಿದ್ದಂತೆ ಮಳೆ ಆರಂಭವಾಗುತ್ತಿದ್ದು, ಮುಂಜಾನೆ 5 ಗಂಟೆಯ ವರೆಗೆ ಮಳೆ ಸುರಿಯುತ್ತಿದೆ. ನಂತರ ಮಧ್ಯಾಹ್ನ 3 ಗಂಟೆಯ ವರೆಗೆ ಬಿಡುವು ನೀಡಿ ಮತ್ತೆ ಮಳೆ ಶುರುವಾಗುತ್ತಿದೆ. ಹೀಗಾಗಿ ನಗರದ ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ಮಳೆನೀರು ನುಗ್ಗಿದೆ. ರಸ್ತೆ ಬದಿಯಲ್ಲಿದ್ದ ಚಂರಂಡಿಗೆ ನೀರು ಹೋಗದೆ ರಸ್ತೆಗಳ ಮೇಲೆ ನೀರು ಬರುತ್ತಿದ್ದ ದೃಶ್ಯಗಳು ಕಂಡುಬಂದಿತು.

ಮಳೆನೀರು ನಿಂತು ಭಾರೀ ಸುದ್ದಿಯಾಗಿದ್ದ ಸಿಲ್ಕ್ ಬೋರ್ಡ್ ಮೆಟ್ರೋ ಸ್ಟೇಶನ್ ಬಳಿಯ ರಸ್ತೆಯು ಮಂಗಳವಾರ ಬೆಳಗ್ಗೆ ಮಳೆ ಸುರಿದ ಕಾರಣ ಮತ್ತೆ ಜಲಾವೃತಗೊಂಡಿತ್ತು. ಪಂಪ್‍ಸೆಟ್ ಮತ್ತು ಮೋಟಾರುಗಳನ್ನು ಬಳಸಿ ನೀರನ್ನು ಪಕ್ಕದಲ್ಲೇ ಹರಿಯುವ ರಾಜಾ ಕಾಲುವೆಗೆ ಹಾಕಲಾಗುತ್ತಿತ್ತು. ಈ ರಸ್ತೆಯನ್ನು ಬಂದ್ ಮಾಡಿ, ಪರ್ಯಾಯ ಮಾರ್ಗದಲ್ಲಿ ವಾಹನಗಳಿಗೆ ಸಂಚರಿಸಲು ಸೂಚನೆ ನೀಡಲಾಗಿತ್ತು.

ಮಧ್ಯಾಹ್ನ ಸುರಿದ ಮಳೆಗೆ ನಗರದ ಕೆ.ಆರ್. ಮಾರ್ಕೆಟ್‍ನಲ್ಲಿ ಗ್ರಾಹಕರು, ವ್ಯಾಪಾರಿಗಳು ಪರಾದಾಡಿದರು. ಕೆ.ಆರ್. ಮಾರುಕಟ್ಟೆಯಲ್ಲಿ ಸುಮಾರು 500ಕ್ಕೂ ಅಧಿಕ ಬೀದಿಬದಿ ವ್ಯಾಪಾರಿಗಳು ತಾತ್ಕಾಲಿಕ ಮಳಿಗೆಗಳನ್ನು ನಿರ್ಮಿಸಿಕೊಂಡು, ಸರಕುಗಳನ್ನು ಮಾರಾಟ ಮಾಡುತ್ತಾರೆ. ಮಳೆ ಬಿದ್ದ ತಕ್ಷಣ ವ್ಯಾಪಾರಿಗಳು ಮಳಿಗೆಗಳನ್ನು ಮುಚ್ಚಿ ಕಾಂಪ್ಲೇಕ್ಸ್ ಗಳಲ್ಲಿ ಆಶ್ರಯ ಪಡೆದರು. ಇನ್ನು ತಳ್ಳುವ ಬಂಡಿಗಳಲ್ಲಿ ವ್ಯಾಪಾರ ಮಾಡುವವರ ಪೈಕಿ ಅರ್ಧ ಮಂದಿ ವ್ಯಾಪಾರಕ್ಕೆ ಬಂದಿರಲಿಲ್ಲ. ಹೂವಿನ ವ್ಯಾಪಾರಿಗಳ ಸ್ಥಿತಿ ಭಿನ್ನವಾಗಿದ್ದು, ಗ್ರಾಹಕರ ಸುಳಿವಿಲ್ಲದ ಕಾರಣ ವ್ಯಾಪಾರವಿಲ್ಲದೆ ಹತಾಶರಾಗಿದ್ದರು.

ಎಡೆಬಿಡದೆ ಸುರಿದ ಭಾರಿ ಮಳೆಗೆ ನಾಡಪ್ರಭು ಕೆಂಪೇಗೌಡ ಲೇಔಟ್‍ನ ಬಹುತೇಕ ಭಾಗಗಳಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಕೆಂಪೇಗೌಡ ಲೇಔಟ್ ಕಾಮಗಾರಿ ಶೇಕಡ 90ರಷ್ಟು ಪೂರ್ಣಗೊಂಡಿದೆ. ಆದರೆ ಇದು ವಾಸಯೋಗ್ಯವಾಗಿಲ್ಲ ಎಂಬುದು ಮಳೆಯಿಂದ ಸಾಬೀತಾಗಿದೆ ಎಂದು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X