ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಸಂತೋಷ ಕುಮಾರ್ ನೇಮಕ

ಮೂವರು ಸದಸ್ಯರ ನೇಮಕ
ಬೆಂಗಳೂರು: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ಸಂತೋಷ್ ಕುಮಾರ್ ಆದರ್ಶ ನಗರ ಅವರನ್ನು ನೇಮಕ ಮಾಡಿ ಸರಕಾರ ಆದೇಶಿಸಿದೆ.
ಮೇ 27ರಿಂದ ಜಾರಿಗೆ ಬರುವಂತೆ ಮುಂದಿನ ಮೂರು ವರ್ಷಗಳ ಅವಧಿಗೆ ಸಂತೋಷ್ ರನ್ನು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಪ್ರಕಟನೆ ತಿಳಿಸಿದೆ.
ಮೂವರು ಸದಸ್ಯರ ನೇಮಕ
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರನ್ನಾಗಿ ಮೂವರನ್ನು ನೇಮಕ ಮಾಡಲಾಗಿದೆ.
ಸತ್ಯನಾರಾಯಣ ಶೆಟ್ಟಿ, ಜಗನ್ನಾಥ ಹಲಮಡಗಿ ಮತ್ತು ವೆಂಕಟೇಶ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಮೂರು ವರ್ಷಗಳ ಅವಧಿಗೆ ನೇಮಕ ಮಾಡಿ ಸರಕಾರ ಆದೇಶಿಸಿದೆ.
Next Story




