Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಡಾ.ಅಂಬೇಡ್ಕರ್ ಸರ್ವ ಕಾಲಕ್ಕೂ ಪ್ರಸ್ತುತ...

ಡಾ.ಅಂಬೇಡ್ಕರ್ ಸರ್ವ ಕಾಲಕ್ಕೂ ಪ್ರಸ್ತುತ : ಸಚಿವ ಸತೀಶ್ ಜಾರಕಿಹೊಳಿ

ವಾರ್ತಾಭಾರತಿವಾರ್ತಾಭಾರತಿ1 Jan 2026 7:27 PM IST
share
ಡಾ.ಅಂಬೇಡ್ಕರ್ ಸರ್ವ ಕಾಲಕ್ಕೂ ಪ್ರಸ್ತುತ : ಸಚಿವ ಸತೀಶ್ ಜಾರಕಿಹೊಳಿ
ಬೆಂವಿವಿಯಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮ

ಬೆಂಗಳೂರು : ಇತಿಹಾಸವನ್ನು ತಿರುಚುವ ಪ್ರಯತ್ನಗಳು ದೇಶದಲ್ಲಿ ಹೆಚ್ಚಾಗಿದೆ. ಡಾ.ಅಂಬೇಡ್ಕರ್, ಗಾಂಧಿಯವರ ಹೆಸರಿನಲ್ಲಿರುವ ಯೋಜನೆಗಳನ್ನು ಬದಲಾಯಿಸುವ ಮೂಲಕ ಅವರ ಸಾಧನೆಗಳನ್ನು ಇತಿಹಾಸದ ಪುಟದಿಂದ ಅಳಿಸಿ ಹಾಕಲಾಗುತ್ತಿದೆ. ಈ ಭೂಮಿ ಇರುವವರೆಗೂ ಅಂಬೇಡ್ಕರ್ ಹೆಸರು ಉಳಿದಿರುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಬುಧವಾರ ನಗರದ ಜ್ಞಾನಭಾರತಿ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಆಯೋಜಿಸಿದ್ದ ಐತಿಹಾಸಿಕ ಭೀಮಾ ಕೋರೆಗಾಂವ್ ಯುದ್ದದ ವಿಜಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದು ಸಂವಿಧಾನ ಇರದಿದ್ದರೆ ಈ ಸಮ ಸಮಾಜ ನಿರ್ಮಾಣವಾಗುತ್ತಿರಲಿಲ್ಲ. ಅನೇಕರು ಸಂವಿಧಾನ ಕೇವಲ ದಲಿತರಿಗೆ ಅಥವಾ ಒಂದು ವರ್ಗಕ್ಕೆ ಸೀಮಿತ ಎಂದು ಭಾವಿಸಿದ್ದಾರೆ. ಸಂವಿಧಾನದಿಂದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮಾನತೆ ದೊರೆತಿದೆ ಎಂದರು.

ಸಂವಿಧಾನ ಎಲ್ಲರಿಗೂ ಅನ್ವಯ. ಭೀಮಾ ಕೋರೆಗಾಂವ್ ರೀತಿಯ ಕಾರ್ಯಕ್ರಮ ಒಂದು ವರ್ಗಕ್ಕೆ ಮಾತ್ರ ಸೀಮಿತವಾಗಿದೆ. ಎಲ್ಲ ಸಮುದಾಯಗಳು ಈ ರೀತಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಇತಿಹಾಸವನ್ನು ನೆನೆಯಬೇಕು. ಜನರು ಧಾರವಾಹಿ, ಸಿನಿಮಾಗಳಲ್ಲಿ ಬರುವ ಪಾತ್ರ, ಸನ್ನೀವೇಶಗಳಿಗೆ ಕಣ್ಣೀರಿಡುತ್ತಾರೆ. ಆದರೆ ದಲಿತರ ಮೇಲೆ ನಡೆಯುವ ಅಸ್ಪೃಶ್ಯ, ಅಸಮಾನತೆ ಘಟನೆಗಳಿಗೆ ಕಣ್ಣೀರಿಡುವುದಿಲ್ಲ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಗೃತಿ, ಸಂವಿಧಾನದ ಅರಿವನ್ನು ಎಲ್ಲರಲ್ಲೂ ಮೂಡಿಸಬೇಕು ಎಂದು ಸತೀಶ್ ಜಾರಕಿಹೊಳಿ ಕರೆ ನೀಡಿದರು.

ಜಾನಪದ ಅಕಾಡೆಮಿ ಅಧ್ಯಕ್ಷ ಡಾ.ಗೊಲ್ಲಹಳ್ಳಿ ಶಿವಪ್ರಸಾದ್ ಮಾತನಾಡಿ, ಈ ದೇಶದಲ್ಲಿ ಹೆಣ್ಣು, ಹೊನ್ನು, ಮಣ್ಣು, ಅಧಿಕಾರಕ್ಕಾಗಿ ಯುದ್ದಗಳು ನಡೆದಿದೆ. ಆದರೆ ಸ್ವಾಭಿಮಾನಕ್ಕಾಗಿ ನಡೆದ ಯುದ್ದ ಭೀಮಾ ಕೋರೆಗಾಂವ್. ಭೀಮಾ ಕೋರೆಗಾಂವ್ ಎಲ್ಲ ಯುದ್ದಗಳ ಸಾಲಿಗೆ ಸೇರುವುದಿಲ್ಲ. ಮರಾಠರ ಸೈನ್ಯದಲ್ಲಿ ದಲಿತರಿಗೆ ಅವಕಾಶ ಸಿಗದಿದ್ದಾಗ, ಅಸ್ಪೃಶ್ಯತೆಯಿಂದ ಅವಮಾನವಾದಗ ಅಸಮಾನತೆಯ ವಿರುದ್ದ ನಡೆದ ಯುದ್ದವೇ ಭೀಮಾ ಕೋರೆಗಾಂವ್. ಮಹರ್ ಸೈನಿಕರು 28 ಸಾವಿರ ಪೇಶ್ವೇ ಸೈನಿಕರನ್ನು ಬಗ್ಗು ಬಡಿದು ಯುದ್ದದಲ್ಲಿ ಗೆದ್ದು ಬೀಗಿದರು ಎಂದು ಹೇಳಿದರು.

ಬಾಬಾಸಾಹೇಬರು ಭೀಮಾ ಕೋರೆಗಾಂವ್ ಯುದ್ದದ ಬಗ್ಗೆ ತಿಳಿಸದಿದ್ದರೆ, ಕೋರೆಗಾಂವ್ ಇತಿಹಾಸದ ಪುಟದಿಂದ ಮರೆಯಾಗಿ ಕಳೆದು ಹೋಗುತ್ತಿತ್ತು. ನಮ್ಮೊಳಗಿನ ಕಥೆ, ವ್ಯಥೆ ಕೋರೆಗಾಂವ್ ಇತಿಹಾಸದಿಂದ ನೆನೆಯಬೇಕು. ಮನುಷ್ಯ ಮನುಷ್ಯನನ್ನು ಭೇದ-ಭಾವವಿಲ್ಲದೆ ಕಾಣಬೇಕು. ಎಲ್ಲ ಅಸ್ಪೃಶ್ಯತೆಗಳನ್ನು ದೂರಗೊಳಿಸಿ, ಸಮಾನತೆ ಸಂದೇಶ ಸಾರಿದವರು ಅಂಬೇಡ್ಕರ್. ಬುದ್ದ, ಬಸವ, ಅಂಬೇಡ್ಕರ್ ಇರದಿದ್ದರೆ ಭಾರತ ಬೆಳಕಿಲ್ಲದೆ, ಕತ್ತಲಲ್ಲಿ ಕಳೆದುಹೋಗುತ್ತಿತ್ತು. ಭೀಮಾ ಕೋರೆಗಾಂವ್ ಯುದ್ದ ಈಗಲೂ ಪ್ರಸ್ತುತವಾಗಿದ್ದು, ಪ್ರತಿಯೊಬ್ಬರ ಆದರ್ಶವಾಗಬೇಕು. ಸಂವಿಧಾನವನ್ನು ಉಳಿಸಿಕೊಳ್ಳದಿದ್ದರೆ ಭವಿಷ್ಯ ಕಠಿಣವಾಗುತ್ತದೆ ಎಂದು ಗೊಲ್ಲಹಳ್ಳಿ ಶಿವಪ್ರಸಾದ್ ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ಬೆಂವಿವಿ ಕುಲಪತಿ ಡಾ.ಜಯಕರ ಎಸ್.ಎಂ, ಕುಲಸಚಿವ(ಮೌಲ್ಯಮಾಪನ) ಪ್ರೊ.ಸಿ.ಎಸ್. ಕರಿಗಾರ್, ಪ್ರಧ್ಯಾಪಕರಾದ ಪ್ರೊ.ಜಿ.ಕೃಷ್ಣಮೂರ್ತಿ, ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿರ್ದೇಶಕ ಪ್ರೊ.ಪಿ.ಸಿ. ನಾಗೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X