Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಸ್‍ಐಆರ್ ಎನ್ನುವುದು ರಕ್ತ ರಹಿತ ಯುದ್ಧ...

ಎಸ್‍ಐಆರ್ ಎನ್ನುವುದು ರಕ್ತ ರಹಿತ ಯುದ್ಧ : ಶಿವಸುಂದರ್

ವಾರ್ತಾಭಾರತಿವಾರ್ತಾಭಾರತಿ14 Jun 2026 8:20 PM IST
share
ಎಸ್‍ಐಆರ್ ಎನ್ನುವುದು ರಕ್ತ ರಹಿತ ಯುದ್ಧ : ಶಿವಸುಂದರ್

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದಾಗಿಂದಲೂ ನಿರಂತರವಾಗಿ ದೇಶದ ದಲಿತ, ದಮನಿತರ ಮೇಲೆ ಯುದ್ಧ ಮಾಡುತ್ತಲೇ ಇದ್ದಾರೆ. ಇರಾನ್ ಮೇಲೆ ಅಮೆರಿಕಾ, ಇಸ್ರೇಲ್ ಮಾಡುತ್ತಿರುವ ಯುದ್ಧಕ್ಕಾದರೂ ಕದನ ವಿರಾಮ ಇದೆ. ಆದರೆ, ಈ ದೇಶದ ಜನರ ಮೇಲೆ ಮೋದಿ ಮಾಡುತ್ತಿರುವ ಯುದ್ಧಕ್ಕೆ ಕದನ ವಿರಾಮವೇ ಇಲ್ಲ. ಅದರಲ್ಲೂ ಅವರ ಅತಿದೊಡ್ಡ ಸಮರ ಎಂದರೆ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ(ಎಸ್‍ಐಆರ್)ಯಾಗಿದೆ ಎಂದು ಅಂಕಣಕಾರ, ಚಿಂತಕ ಶಿವಸುಂದರ್ ಲೇವಡಿ ಮಾಡಿದ್ದಾರೆ.

ರವಿವಾರ ನಗರದ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ‘ರಾಜ್ಯ ನದಾಫ್ ಪಿಂಜಾರ ಸಂಘ’ ಆಯೋಜಿಸಿದ್ದ ಎಸ್‍ಐಆರ್ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಸ್‍ಐಆರ್ ಎನ್ನುವುದು ರಕ್ತ ರಹಿತ ಯುದ್ಧ. ಎಸ್‍ಐಆರ್‌ನಿಂದ ಅತಿಹೆಚ್ಚು ದಾಳಿಗೆ ಗುರಿಯಾಗಿರುವುದು ಎಲ್ಲ ಜಾತಿ, ಧರ್ಮಗಳ ಮಹಿಳೆಯರು. ಭಾರತದಲ್ಲಿ ದಲಿತ, ದಮನಿತ ಹಾಗೂ ಬ್ರಾಹ್ಮಣರಲ್ಲದ ಇತರೇ ಸಮುದಾಯಗಳ ಮೇಲೆ ಮೂರು ಸಾವಿರ ವರ್ಷಗಳಿಂದಲೂ ಯುದ್ಧ ನಡೆಯುತ್ತಲೇ ಇದೆ ಎಂದರು.

ನಮ್ಮ ದೇಶದಲ್ಲಿ ಸ್ವಾತಂತ್ರ್ಯ ನಡೆದಾಗ ಎರಡು ಸಿದ್ದಾಂತಗಳ ನಡುವೆ ಸಂಘರ್ಷ ಆಯಿತು. ಈ ದೇಶದಲ್ಲಿ ಎಲ್ಲರು ಸಮಾನರು, ಎಲ್ಲಿರಿಗೂ ಸಮಾನವಾದ ರಾಜಕೀಯ ಹಕ್ಕು ಇರಬೇಕು ಎಂದು ಹೇಳುವ ಅಂಬೇಡ್ಕರ್‌ ವಾದ. ಮತ್ತೊಂದು ಈ ದೇಶ ಹಿಂದೂಗಳಿಗೆ ಮಾತ್ರ ಸೇರಬೇಕು. ಉಳಿದವರು ಇಲ್ಲಿ ಅನ್ಯರಾಗಿ ಎರಡನೇ ದರ್ಜೆ ಪ್ರಜೆಗಳಾಗಿ ಬದುಕಬೇಕು ಎನ್ನುವ ಸಾವರ್ಕರ್‌ ವಾದ. ಈ ಎರಡೂ ಸಂಘರ್ಷಗಳ ನಡುವೆ ಅಂಬೇಡ್ಕರ್ ಗೆದ್ದರು ಎಂದು ಶಿವಸುಂದರ್ ತಿಳಿಸಿದರು.

ಎಸ್‍ಐಆರ್ ಪೌರತ್ವ ಪರಿಶೀಲನೆ ಮಾಡುತ್ತಿದೆ. ಚುನಾವಣಾ ಆಯೋಗ ಎಸ್‍ಐಆರ್ ತಂದಿದ್ದೇ ಸಾಧ್ಯವಾದಷ್ಟು ಹೆಚ್ಚು ಜನರನ್ನು ಹೊರಗೆ ತಳ್ಳಬೇಕೆಂದು. ಅದರಲ್ಲೂ ಮುಖ್ಯವಾಗಿ ಯಾವಯಾವ ರಾಜ್ಯಗಳಲ್ಲಿ ಬಿಜೆಪಿ ಗೆಲ್ಲಲು ಕಷ್ಟ ಇದಿಯೋ, ಅಂತಹ ಕಡೆ ಎಸ್‍ಐಆರ್ ಬಳಸಿ ಸಂಬವನೀಯ ಬಿಜೆಪಿಗರನ್ನು ಹೆಚ್ಚು ಮಾಡುವುದು ಇದರ ಹಿಂದಿನ ಉದ್ದೇಶವಾಗಿದೆ ಎಂದು ಶಿವಸುಂದರ್ ಹೇಳಿದರು.

ಕಾರ್ಯಕ್ರಮದಲ್ಲಿ ಪಿಂಜಾರ ಸಂಘದ ಹಿನಾಯತುಲ್ಲಾ, ರಹಮಾನ್ ಪಿ., ಮುನಾಫ್, ರಿಯಾಝ್, ಜಿ.ಡಿ. ನದಾಫ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

Shivasunder
share
ವಾರ್ತಾಭಾರತಿ
ವಾರ್ತಾಭಾರತಿ
Next Story
X