Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸರ್ಕಾರ, ಸೊಸೈಟಿಗಳಿಂದ ಪಡೆದ...

ಸರ್ಕಾರ, ಸೊಸೈಟಿಗಳಿಂದ ಪಡೆದ ನಿವೇಶನದಲ್ಲಿ 5 ವರ್ಷಗಳಲ್ಲಿ ಮನೆ ಕಟ್ಟದಿದ್ದರೆ ನಿವೇಶನ ವಾಪಸ್: ಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ1 Aug 2026 12:24 PM IST
share
ಸರ್ಕಾರ, ಸೊಸೈಟಿಗಳಿಂದ ಪಡೆದ ನಿವೇಶನದಲ್ಲಿ 5 ವರ್ಷಗಳಲ್ಲಿ ಮನೆ ಕಟ್ಟದಿದ್ದರೆ ನಿವೇಶನ ವಾಪಸ್: ಸಿಎಂ ಡಿ.ಕೆ.ಶಿವಕುಮಾರ್
► "ಎಲ್ಲೆಂದರಲ್ಲಿ ಕಸ ಸುರಿಯುವ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಿ" ► 'ತ್ಯಾಜ್ಯದಿಂದ ಸ್ವಾತಂತ್ರ್ಯ'ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಬೆಂಗಳೂರು: ಬಿಡಿಎ, ಸಿಐಟಿಬಿ, ಕಾರ್ಪೊರೇಷನ್ ಅಥವಾ ಸೊಸೈಟಿಗಳಿಂದ ಪಡೆದ ನಿವೇಶನಗಳಲ್ಲಿ ಐದು ವರ್ಷಗಳೊಳಗೆ ಮನೆ ನಿರ್ಮಿಸಬೇಕು. ನಿಯಮ ಪಾಲಿಸದಿದ್ದರೆ ದುಪ್ಪಟ್ಟು ತೆರಿಗೆ ವಿಧಿಸುವುದರ ಜೊತೆಗೆ ಅಗತ್ಯವಿದ್ದರೆ ನಿವೇಶನವನ್ನೇ ಹಿಂಪಡೆಯಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದರು.

ಹೆಬ್ಬಾಳ ಜಂಕ್ಷನ್‌ನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನಕ್ಕೆ ಚಾಲನೆ ನೀಡಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿವೇಶನಗಳನ್ನು ವರ್ಷಗಳ ಕಾಲ ಖಾಲಿ ಬಿಟ್ಟು ಕಸದ ತಾಣಗಳಾಗಲು ಅವಕಾಶ ನೀಡಲಾಗುವುದಿಲ್ಲ ಎಂದರು.

“20-30 ವರ್ಷಗಳಾದರೂ ಕೆಲವರು ಮನೆ ಕಟ್ಟಿಲ್ಲ. ಅಂತಹವರಿಗೆ ಅವರು ಪಾವತಿಸಿರುವ ಹಣವನ್ನು ಬಡ್ಡಿ ಸಮೇತ ಹಿಂದಿರುಗಿಸಿ ನಿವೇಶನವನ್ನು ಸರ್ಕಾರ ವಾಪಸ್ ಪಡೆಯಲಿದೆ. ನಿವೇಶನ ಪಡೆದವರು ಮನೆ ನಿರ್ಮಿಸಿ, ಸ್ವಚ್ಛತೆ ಕಾಪಾಡುವುದು ಅವರ ಜವಾಬ್ದಾರಿ” ಎಂದು ಹೇಳಿದರು.

ಬೆಂಗಳೂರಿನ ಸ್ವಚ್ಛತೆ ಕಾಪಾಡುವುದು ಸರ್ಕಾರದಷ್ಟೇ ನಾಗರಿಕರ ಕರ್ತವ್ಯವೂ ಆಗಿದೆ. “ಬೆಂಗಳೂರು ಸರ್ಕಾರದ ಆಸ್ತಿಯಲ್ಲ, ಪ್ರತಿಯೊಬ್ಬ ನಾಗರಿಕರ ಆಸ್ತಿ. ನಿಮ್ಮ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟರೆ ನಗರವೂ ಸ್ವಚ್ಛವಾಗಿರುತ್ತದೆ” ಎಂದು ತಿಳಿಸಿದರು.

ಕಸ ಸುರಿಯುವ ವಾಹನಗಳ ವಿರುದ್ಧ ಕಠಿಣ ಕ್ರಮ :

ನಗರದಲ್ಲಿ ನಿಗದಿತ ಸ್ಥಳಗಳ ಹೊರತಾಗಿ ಕಟ್ಟಡ ತ್ಯಾಜ್ಯ ಅಥವಾ ಕಸ ಸುರಿಯುವ ವಾಹನಗಳನ್ನು ಯಾವುದೇ ಮುಲಾಜಿಲ್ಲದೆ ಮುಟ್ಟುಗೋಲು ಹಾಕಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿರುವುದಾಗಿ ಸಿಎಂ ಹೇಳಿದರು. ಈ ಹಿಂದೆ ನೋಟಿಸ್ ಹಾಗೂ ಸಿಸಿಟಿವಿ ಕಣ್ಗಾವಲು ಮೂಲಕ ನಿಯಂತ್ರಣ ಸಾಧಿಸಲಾಗಿದ್ದರೂ ಮತ್ತೆ ನಿಯಮ ಉಲ್ಲಂಘನೆ ಹೆಚ್ಚಾಗಿದೆ ಎಂದು ಹೇಳಿದರು.

ಅಧಿಕಾರಿಗಳ ಮೇಲಿನ ದಾಳಿ ಸರ್ಕಾರದ ಮೇಲಿನ ದಾಳಿ :

ಶಿವಾಜಿನಗರದಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿದ ಮುಖ್ಯಮಂತ್ರಿ, “ಇದು ಕೇವಲ ಅಧಿಕಾರಿಗಳ ಮೇಲಿನ ದಾಳಿಯಲ್ಲ, ಸರ್ಕಾರ, ಸಚಿವರು ಮತ್ತು ಶಾಸಕರ ಮೇಲಿನ ದಾಳಿಯಾಗಿದೆ. ಗೂಂಡಾಗಿರಿಗೆ ಸರ್ಕಾರ ಮಣಿಯುವುದಿಲ್ಲ” ಎಂದು ಎಚ್ಚರಿಸಿದರು.

ಬೀದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ :

ಬೀದಿ ವ್ಯಾಪಾರಿಗಳಿಗೆ ಸೂಕ್ತ ಸ್ಥಳಗಳನ್ನು ಗುರುತಿಸಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲಾಗುವುದು. ಆದರೆ ಪಾದಚಾರಿಗಳು ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗುವ ರೀತಿಯಲ್ಲಿ ವ್ಯಾಪಾರ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಎನ್‌ಜಿಒಗಳು, ಸಂಘ-ಸಂಸ್ಥೆಗಳ ಸಹಕಾರಕ್ಕೆ ಆಹ್ವಾನ :

ಸ್ವಚ್ಛತಾ ಅಭಿಯಾನದಲ್ಲಿ ಎನ್‌ಜಿಒಗಳು ಹಾಗೂ ಸಂಘ-ಸಂಸ್ಥೆಗಳು ಒಂದೊಂದು ಪ್ರದೇಶ ಅಥವಾ ನಾಲ್ಕೈದು ರಸ್ತೆಗಳನ್ನು ದತ್ತು ಪಡೆದು ಸ್ವಚ್ಛತೆ ಕಾಪಾಡುವ ಜವಾಬ್ದಾರಿ ವಹಿಸಿದರೆ ಸರ್ಕಾರ ಸ್ವಾಗತಿಸುತ್ತದೆ ಎಂದು ಹೇಳಿದರು.

ಕಾವೇರಿ ನೀರಿನ ಕುರಿತು ಪ್ರತಿಕ್ರಿಯೆ :

ಕಾವೇರಿ ನೀರು ಹರಿಸುವ ವಿಚಾರವಾಗಿ ಮಾತನಾಡಿದ ಸಿಎಂ, “ರಾಜ್ಯದ ಒಂದು ಅಣೆಕಟ್ಟು ಇಂದು ಸಂಜೆ ವೇಳೆಗೆ ಭರ್ತಿಯಾಗುವ ಸಾಧ್ಯತೆಯಿದ್ದು, ನಂತರ ನೀರನ್ನು ಹಿಡಿದಿಡುವುದು ಕಷ್ಟವಾಗಲಿದೆ. ಒಳಹರಿವು, ನ್ಯಾಯಾಲಯದ ಬೆಳವಣಿಗೆ ಹಾಗೂ ವಿರೋಧ ಪಕ್ಷದ ನಾಯಕರು ಮತ್ತು ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್‌, ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ಶಾಸಕ ಎಸ್.ಆರ್.‌ ವಿಶ್ವನಾಥ್‌, ಜಿ.ಬಿ.ಎ. ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್‌ ಮೊದಲಾದವರು ಉಪಸ್ಥಿತರಿದ್ದರು.

Tags

D.K.ShivakumarsocietiesGovtsites
share
ವಾರ್ತಾಭಾರತಿ
ವಾರ್ತಾಭಾರತಿ
Next Story
X