ಸಚಿವ ಸುಧಾಕರ್ ನಿಧನಕ್ಕೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಸಂತಾಪ

ಬೆಂಗಳೂರು, ಮೇ 10: ಕರ್ನಾಟಕ ವಿಧಾನಸಭೆಯ ಹಿರಿಯ ಸದಸ್ಯ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಸುಧಾಕರ್ ಡಿ. ನಿಧನಕ್ಕೆ ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಚಿವ ಸುಧಾಕರ್ ನಿಧನದ ಸುದ್ದಿ ತಿಳಿದು ಅಪಾರ ದುಃಖವಾಗಿದೆ. ಸುಧಾಕರ್ ಡಿ. 4 ಬಾರಿ ವಿಧಾನಸಭಾ ಸದಸ್ಯರಾಗಿ, ಸಮಾಜ ಕಲ್ಯಾಣ ಸಚಿವರಾಗಿ ಹಾಗೂ ವಿವಿಧ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದ, ಸರಳ ವ್ಯಕ್ತಿತ್ವ ಮತ್ತು ಜನಪರ ಕಾರ್ಯಗಳಿಂದ ಅವರು ಜನಮನದಲ್ಲಿ ವಿಶೇಷ ಸ್ಥಾನ ಪಡೆದಿದ್ದರು. ಅವರ ಅಗಲಿಕೆ ರಾಜ್ಯಕ್ಕೆ ಮತ್ತು ಹಿರಿಯೂರು ಕ್ಷೇತ್ರದ ಜನತೆಗೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಸರ್ವ ಶಕ್ತಿಯನ್ನು ಅವರ ಕುಟುಂಬದವರಿಗೆ, ಬಂಧುಗಳಿಗೆ ಮತ್ತು ರಾಜ್ಯದ ಜನತೆಗೆ ನೀಡಲಿ ಹಾಗೂ ಅಗಲಿದ ಆತ್ಮಕ್ಕೆ ಚಿರ ಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆಂದು ಸಭಾಧ್ಯಕ್ಷ ಯು.ಟಿ.ಖಾದರ್ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
Next Story




