Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಿಡದಿ ಟೌನ್‍ಶಿಪ್ ವಿಚಾರ;...

ಬಿಡದಿ ಟೌನ್‍ಶಿಪ್ ವಿಚಾರ; ವಿಧಾನಸೌಧದಲ್ಲಿ ಚರ್ಚಿಸಿ ಇತ್ಯರ್ಥಪಡಿಸಬೇಕು : ಎಸ್.ಟಿ.ಸೋಮಶೇಖರ್

ವಾರ್ತಾಭಾರತಿವಾರ್ತಾಭಾರತಿ25 Jun 2026 6:32 PM IST
share
ಬಿಡದಿ ಟೌನ್‍ಶಿಪ್ ವಿಚಾರ; ವಿಧಾನಸೌಧದಲ್ಲಿ ಚರ್ಚಿಸಿ ಇತ್ಯರ್ಥಪಡಿಸಬೇಕು : ಎಸ್.ಟಿ.ಸೋಮಶೇಖರ್
"ಅಡ್ಡ ಮತದಾನವಾಗಲು ವಿಜಯೇಂದ್ರ, ಆರ್.ಅಶೋಕ್ ಅವರ ನಡುವಿನ ಒಳಜಗಳವೇ ಕಾರಣ"

ಬೆಂಗಳೂರು : ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬಿಡದಿ ಟೌನ್‍ಶಿಪ್ ವಿಚಾರವಾಗಿ ವಿಧಾನಸೌಧದಲ್ಲೇ ಸಭೆ ನಡೆಸಿ ಇತ್ಯರ್ಥಪಡಿಸುವುದು ಸೂಕ್ತ ಎಂದು ಯಶವಂತಪುರ ಕ್ಷೇತ್ರದ ಬಿಜೆಪಿ ಉಚ್ಛಾಟಿತ ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈವರೆಗೂ ಯಾವುದೇ ವಿವಾದಗಳು ಪ್ರತಿಭಟನೆ, ಧರಣಿಯ ಸ್ಥಳದಲ್ಲಿ ಇತ್ಯರ್ಥವಾಗಿಲ್ಲ. ಈ ಹಿಂದೆ ಕಾವೇರಿ ನೀರಿನ ವಿಚಾರದ ಸಂದರ್ಭದಲ್ಲಿ ವಿಧಾನಸೌಧದಲ್ಲೇ ಸರ್ವಪಕ್ಷ ಸಭೆ ಮಾಡಲಾಗಿದೆ. ಅದೇ ರೀತಿಯಲ್ಲಿ ಕೆಂಪೇಗೌಡ ಬಡಾವಣೆಯ ವಿವಾದದ ಸಂದರ್ಭದಲ್ಲೂ ವಿಧಾನಸೌಧದಲ್ಲಿ ಸಭೆಯಾಗಿತ್ತು ಎಂದು ಹೇಳಿದರು.

ಬಿಡದಿಯ ಉಪನಗರ ವಿವಾದದ ವಿಚಾರವಾಗಿಯೂ ವಿಧಾನಸೌಧದಲ್ಲೇ ಚರ್ಚೆಯಾಗಬೇಕು. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ 5 ಮಂದಿ ತಮ್ಮ ಪ್ರತಿನಿಧಿಗಳ ಜೊತೆ ವಿಧಾನಸೌಧದ ಸಭೆಗೆ ಆಗಮಿಸುವುದು ಒಳ್ಳೆಯದು. ಎಲ್ಲ ರೈತರ ಸಮ್ಮುಖದಲ್ಲಿ ಬಗೆ ಹರಿಯಬೇಕೆಂಬುದು ಸೂಕ್ತವಲ್ಲ ಎಂದುಅವರು ತಿಳಿಸಿದರು.

ಒಳ ಜಗಳವೇ ಕಾರಣ: ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಏಳು ಸದಸ್ಯರ ಆಯ್ಕೆ ಚುನಾವಣೆಯಲ್ಲಿ ಅಡ್ಡ ಮತದಾನವಾಗಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನಡುವಿನ ಒಳ ಜಗಳವೇ ಕಾರಣ. ಇಬ್ಬರಿಗೂ ಪರಸ್ಪರ ಬೆಂಬಲಿತ ಅಭ್ಯರ್ಥಿಗಳನ್ನು ಸೋಲಿಸಬೇಕೆಂಬ ಪೈಪೋಟಿ ಇದೆ ಎಂದು ಅವರು ದೂರಿದರು.

ಹೀಗಾಗಿ ವಿಜಯೇಂದ್ರ ಮತ್ತು ಅಶೋಕ್ ಇಬ್ಬರೇ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಹೋಗಿ ಆಣೆ-ಪ್ರಮಾಣ ಮಾಡಿದರೆ ಸಾಕು. ಬಿಜೆಪಿಯ 63 ಮಂದಿ ಶಾಸಕರೂ ಹೋಗಿ ಪ್ರಮಾಣ ಮಾಡುವ ಅಗತ್ಯ ಇಲ್ಲ. ಅಡ್ಡ ಮತದಾನದ ಕಾರಣಕ್ಕೆ ಬೇರೆ ಯಾರನ್ನು ಅಮಾನತು ಮಾಡಿ ಗೂಬೆ ಕೂರಿಸುವ ಪ್ರಯತ್ನ ಸರಿಯಲ್ಲ ಎಂದು ಸೋಮಶೇಖರ್ ಆಕ್ಷೇಪಿಸಿದರು.

ಬಿಜೆಪಿಯ ಶಾಸಕರನ್ನು ಮೊದಲೇ ಸಭೆ ಕರೆದು, ಚರ್ಚಿಸಿ ಬಿಗಿ ಮಾಡಬೇಕಿತ್ತು. ಕಾಂಗ್ರೆಸ್ ಪಕ್ಷವು ಮೊದಲೇ ಎಚ್ಚೆತ್ತುಕೊಂಡು 135 ಮಂದಿ ಶಾಸಕರನ್ನು ಒಂದು ಕಡೆ ಸೇರಿಸಿ, ಚುನಾವಣೆಗೆ ಸೂಕ್ತ ತರಬೇತಿ ನೀಡಿದ್ದರು. ಅಡ್ದ ಮತದಾನ ಅಥವಾ ಮತ ಅಸಿಂಧುವಾದರೆ ಏನೆಲ್ಲಾ ಸಮಸ್ಯೆಗಳಾಗುತ್ತದೆ ಎಂದು ಜಾಗೃತಿ ಮೂಡಿಸಿದ್ದರು. ಬಿಜೆಪಿ ಇಂತಹ ಯಾವುದೇ ಕ್ರಮವನ್ನು ಕೈಗೊಂಡಿರಲಿಲ್ಲ ಎಂದು ಅವರು ಆರೋಪಿಸಿದರು.

Tags

S.T.Somashekar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X