Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದಲಿತ ಹೋರಾಟಕ್ಕೆ ಕಮ್ಯುನಿಸ್ಟರ ಬೆಂಬಲ...

ದಲಿತ ಹೋರಾಟಕ್ಕೆ ಕಮ್ಯುನಿಸ್ಟರ ಬೆಂಬಲ ಅಗತ್ಯ : ಡಾ.ಬಂಜಗೆರೆ ಜಯಪ್ರಕಾಶ್

ವಾರ್ತಾಭಾರತಿವಾರ್ತಾಭಾರತಿ16 Nov 2024 9:53 PM IST
share
Photo of program

ಬೆಂಗಳೂರು : ದಲಿತ ಸಮುದಾಯದವರು ಮಾಡುವ ಹೋರಾಟಕ್ಕೆ ಕಮ್ಯುನಿಸ್ಟರು ಬೆಂಬಲಿಸಬೇಕು ಎಂದು ಹಿರಿಯ ಚಿಂತಕ ಡಾ.ಬಂಜಗೆರೆ ಜಯಪ್ರಕಾಶ್ ಸಲಹೆ ನೀಡಿದ್ದಾರೆ.

ಶನಿವಾರ ನಗರದ ಸೌಹಾರ್ದ ಸಭಾಂಗಣದಲ್ಲಿ ಕ್ರಿಯಾ ಮಾದ್ಯಮದ ವತಿಯಿಂದ ಆಯೋಜಿಸಿದ್ದ ‘ಆರ್.ಬಿ.ಮೋರೆ- ಮೊದಲ ದಲಿತ ಕಮ್ಯುನಿಸ್ಟ್’ ಅವರ ಸ್ವ ಚರಿತ್ರೆ ಮತ್ತು ಜೀವನ ಚರಿತ್ರೆ ಪುಸ್ತಕ ಬಿಡುಗಡೆ ಹಾಗೂ ಅಂಬೇಡ್ಕರ್, ಮೋರೆ ಮತ್ತು ಇಂದಿನ ಸಮರಶೀಲ ದಲಿತ ಚಳವಳಿ ಸವಾಲುಗಳು, ಸಾಧ್ಯತೆಗಳು ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಕ್ರಾಂತಿಗೆ ಪೂರಕವಾಗಿರದಿದ್ದರೂ, ಪ್ರಜಾತಾಂತ್ರಿಕ ಸುಧಾರಣೆವಾದಿಯ ಹಂತಕ್ಕೆ ಬೇಕಾಗಿರುವ ಹೆಜ್ಜೆಯಾಗಿರುವುದರಿಂದ ಪ್ರಜಾಪ್ರಭುತ್ವ ದೃಷ್ಟಿಯಿಂದ ಎಲ್ಲರೂ ಮುಂದಾದಾಗ ಮಾತ್ರ ಸಂಪೂರ್ಣ ಕ್ರಾಂತಿ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಎಲ್ಲೇ ದಲಿತರ ಮೇಲೆ ದೌರ್ಜನ್ಯ ನಡೆದಾಗ ಅವರ ಜತೆಗೆ ಕಮ್ಯುನಿಸ್ಟರು ಎಡಬಿಡೆದೆ ನಿಂತಾಗ ಮಾತ್ರ ಅವರಿಗೆ ನಂಬಿಕೆ ಹುಟ್ಟಿಸಲು ಸಾಧ್ಯವಾಗುತ್ತದೆ. ಆರ್.ಬಿ.ಮೋರೆ ಅವರ ಜೀವನ ಕಥನ ದಲಿತರ ಹೋರಾಟದ ಬಗೆಗಿನ ಪುನಾರಾವಲೋಕನ, ಮತ್ತು ಕಮ್ಯುನಿಸ್ಟ್ ಕಾರ್ಯಕರ್ತರ ಜಾತಿಯ ಪ್ರಶ್ನೆಯ ಕುರಿತ ಪುನರಾವಲೋಕನವನ್ನು ಕಾಣಬಹುದು ಎಂದು ತಿಳಿಸಿದರು.

ಮೋರೆ ಅವರ ಗ್ರಹಿಕೆ ಸೂಕ್ಷ್ಮವಾಗಿದೆ. ಅಂಬೇಡ್ಕರ್ ಮತ್ತು ಕಾರ್ಲ್ಮಾಕ್ರ್ಸ್ ಅವರ ಕುರಿತು ಅಧ್ಯಯನ ಮಾಡಿದ್ದರು. ಅವರು ಅಂಬೇಡ್ಕರ್ ಅವರ ಅಭಿಮಾನಿಯಾಗಿದ್ದು, ಸಮಗ್ರ ಕ್ರಾಂತಿಯ ಹೊರತಾಗಿ ದಲಿತರ ಎಲ್ಲ ಸಮಸ್ಯೆಗಳು ಪೂರ್ಣವಾಗಿ ಬಗೆಹರಿಯುದಿಲ್ಲ. ಜತೆಗೆ ಭಾರತದಲ್ಲಿ ಜಾತಿ ಸಮಸ್ಯೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದಿದ್ದರೆ ಕಮ್ಯುನಿಷ್ಟ್ ಪಕ್ಷ ಬೆಳೆಯುವದಿಲ್ಲ ಎಂಬುದು ಮೋರೆ ಅವರ ಅಭಿಪ್ರಾಯವಾಗಿತ್ತು ಎಂದು ತಿಳಿಸಿದರು.

ದಲಿತ ಕಾರ್ಯಕರ್ತರ ಆಕ್ರೋಶ ಮತ್ತು ಕಮ್ಯುನಿಸ್ಟ್ ಕಾರ್ಯಕರ್ತರ ಆಕ್ರೋಶ ಮತ್ತು ಆಳವಾದ ಅಧ್ಯಯನ ಒಂದಾಗಿದ್ದರೆ, ಚಳವಳಿಗಳ ಪರಿಸ್ಥಿತಿ ಬೇರೆ ಇರುತ್ತಿತ್ತು. ಬಿಜೆಪಿ- ಆರೆಸ್ಸೆಸ್ಗೆ ಅಧಿಕಾರ ಬಿಟ್ಟುಕೊಡುತ್ತಿರಲಿಲ್ಲ. ಅದಕ್ಕಾಗಿ ದಲಿತರು ಮಾಡುವ ಹೋರಾಟಕ್ಕೆ ಕಮ್ಯುನಿಸ್ಟರು ಬೆಂಬಲಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಖಿಲ ಭಾರತ ಕಿಸಾನ್ ಸಭಾದ ಅಧ್ಯಕ್ಷ ಅಶೋಕ್ ಧವಳೆ, ಹಿರಿಯ ಲೇಖಕ ಅಬ್ದುಲ್ ರೆಹಮಾನ್ ಪಾಷಾ, ಹೋರಾಟಗಾರ್ತಿ ಇಂದಿರಾ ಕೃಷ್ಣಪ್ಪ, ಆರ್.ಮೋಹನ್ ರಾಜ್, ಎನ್.ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

‘ಕಮ್ಯುನಿಸ್ಟ್ ಎಂದರೆ ಪಕ್ಷ ಬೇರೆ ಪಕ್ಷದ ಹಾಗೆ ಅದು ಕೂಡ ಒಂದು ಪಕ್ಷಾಗಿದೆ. ಅದರಲ್ಲಿರುವ ವಿಚಾರಗಳು ಪೂರಕವಾಗಿರಬಹುದು ಎನಿಸುತ್ತದೆ. ಮೀಸಲಾತಿ ಇಲ್ಲದೇ ಇದ್ದರೆ ನನಗೆ ಕೆಲಸ ಸಿಗುತ್ತಿರಲಿಲ್ಲ. ಇಲ್ಲಿ ನಿಂತು ಮಾತಾಡುತ್ತಿರಲಿಲ್ಲ. ಅಂಬೇಡ್ಕರ್ ಅವರು ಕಟ್ಟಿದ ಕನಸು ತುಂಬಾ ದೊಡ್ಡದು. ಮೋರೆ ಅವರ ಕನಸು ಕೂಡ ಅದೇ ಆಗಿತ್ತು. ಅಸ್ಪಶ್ಯತೆ ಮುಕ್ತ ಭಾರತ ಬೇಕಾಗಿದೆ. ಗಾಯಗೊಂಡರೇ ಮಾತನಾಡುತ್ತೇವೆ. ಗಾಯ ಮಾಡಿದವರಿಗೆ ಏನು ಅಲ್ಲವಾಗಿದೆ’

-ಸುಬ್ಬು ಹೊಲೆಯಾರ್, ಹಿರಿಯ ಸಾಹಿತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X