Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಶಿಕ್ಷಣ ಪದವಿಗಾಗಿ ಮಾತ್ರವಲ್ಲ, ಸಮಾಜ...

ಶಿಕ್ಷಣ ಪದವಿಗಾಗಿ ಮಾತ್ರವಲ್ಲ, ಸಮಾಜ ರೂಪಿಸುವ ಶಕ್ತಿಯಾಗಬೇಕು : ಸೈಯದ್ ಬ್ಯಾರಿ

ಅಬ್ಬಾಸ್ ಖಾನ್ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆ, ಪದವಿ ಪ್ರದಾನ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ29 Aug 2026 7:19 PM IST
share
ಶಿಕ್ಷಣ ಪದವಿಗಾಗಿ ಮಾತ್ರವಲ್ಲ, ಸಮಾಜ ರೂಪಿಸುವ ಶಕ್ತಿಯಾಗಬೇಕು : ಸೈಯದ್ ಬ್ಯಾರಿ

ಬೆಂಗಳೂರು : ಶಿಕ್ಷಣವು ಕೇವಲ ಪದವಿ ಹಾಗೂ ಉದ್ಯೋಗ ಪಡೆಯುವ ಸಾಧನವಲ್ಲ, ಅದು ವ್ಯಕ್ತಿತ್ವ ನಿರ್ಮಾಣ, ನಾಯಕತ್ವದ ಗುಣ ಬೆಳೆಸುವ ಮತ್ತು ಸಮಾಜದ ಜವಾಬ್ದಾರಿಯನ್ನು ಅರಿತುಕೊಳ್ಳುವ ಶಕ್ತಿಯಾಗಬೇಕು ಎಂದು ಬ್ಯಾರೀಸ್ ಗ್ರೂಪ್ ಅಧ್ಯಕ್ಷ ಸೈಯದ್ ಮುಹಮ್ಮದ್ ಬ್ಯಾರಿ ಹೇಳಿದರು.

ಶನಿವಾರ ನಗರದ ಅಬ್ಬಾಸ್ ಖಾನ್ ಮಹಿಳಾ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಪರಿಷತ್ ಉದ್ಘಾಟನೆ ಹಾಗೂ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಪದವಿ ಶಿಕ್ಷಣದ ಅಂತ್ಯವಲ್ಲ, ಜೀವನದ ನೈಜ ಪಾಠಗಳನ್ನು ಕಲಿಯುವ ಹೊಸ ಅಧ್ಯಾಯದ ಆರಂಭವಾಗಿದೆ ಎಂದರು.

‘ಯಶಸ್ಸನ್ನು ವಿನಯದಿಂದ ಸ್ವೀಕರಿಸಿ, ವೈಫಲ್ಯವನ್ನು ಧೈರ್ಯದಿಂದ ಎದುರಿಸಿ. ಜೀವನದಲ್ಲಿ ಕನಸು, ಶಿಸ್ತು ಹಾಗೂ ದೃಢಸಂಕಲ್ಪ ಬಹಳ ಮುಖ್ಯ’ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ ಅವರು, ನೂತನ ವಿದ್ಯಾರ್ಥಿ ಪರಿಷತ್ ಸದಸ್ಯರಿಗೆ ಶುಭ ಹಾರೈಸಿದರು. ನಾಯಕತ್ವವೆಂದರೆ ಅಧಿಕಾರವಲ್ಲ, ಜವಾಬ್ದಾರಿ. ವಿದ್ಯಾರ್ಥಿ ನಾಯಕರು ತಮ್ಮ ಸಹಪಾಠಿಗಳ ಸಮಸ್ಯೆಗಳನ್ನು ಆಲಿಸಿ, ಎಲ್ಲರನ್ನೂ ಸಮಾನವಾಗಿ ಕಾಣುವ ಮೂಲಕ ಮಾದರಿಯಾಗಬೇಕು ಎಂದರು.

ಮಹಿಳಾ ಶಿಕ್ಷಣದ ಮಹತ್ವವನ್ನು ಒತ್ತಿ ಹೇಳಿದ ಸೈಯದ್ ಬ್ಯಾರಿ ಅವರು, ಶಿಕ್ಷಣ ಪಡೆದ ಮಹಿಳೆ ತನ್ನ ಕುಟುಂಬವನ್ನು ಮಾತ್ರವಲ್ಲದೆ ಇಡೀ ಸಮಾಜವನ್ನು ಬಲಪಡಿಸುವ ಸಾಮರ್ಥ್ಯ ಹೊಂದಿರುತ್ತಾಳೆ. ಯುವತಿಯರು ಉದ್ಯೋಗ ಪಡೆಯುವುದಕ್ಕಷ್ಟೇ ಸೀಮಿತವಾಗದೆ ಉದ್ಯಮ, ಸಂಶೋಧನೆ, ವೃತ್ತಿಪರ ಕ್ಷೇತ್ರ ಹಾಗೂ ಸಾಮಾಜಿಕ ನಾಯಕತ್ವದಲ್ಲೂ ತಮ್ಮ ಛಾಪು ಮೂಡಿಸುವ ಗುರಿ ಹೊಂದಬೇಕು ಎಂದು ಕರೆ ನೀಡಿದರು.

ಕೃತಕ ಬುದ್ಧಿಮತ್ತೆ ಸೇರಿದಂತೆ ತಂತ್ರಜ್ಞಾನ ಕ್ಷೇತ್ರದಲ್ಲಿ ವೇಗವಾಗಿ ಬದಲಾವಣೆಗಳು ನಡೆಯುತ್ತಿವೆ. ವಿದ್ಯಾರ್ಥಿಗಳು ಹೊಸ ಕೌಶಲಗಳನ್ನು ನಿರಂತರವಾಗಿ ಕಲಿಯಬೇಕು. ಆದರೆ ತಂತ್ರಜ್ಞಾನ ಎಷ್ಟೇ ಮುಂದುವರಿದರೂ ಮಾನವೀಯ ಮೌಲ್ಯಗಳು, ಪ್ರಾಮಾಣಿಕತೆ ಹಾಗೂ ಸಾಮಾಜಿಕ ಬದ್ಧತೆಯನ್ನು ಕಳೆದುಕೊಳ್ಳಬಾರದು ಎಂದು ಅವರು ಹೇಳಿದರು.

ಪದವಿ ನಿಮ್ಮ ಮೊದಲ ಬಾಗಿಲನ್ನು ತೆರೆಯಬಹುದು; ಆದರೆ ನಿಮ್ಮ ಜ್ಞಾನ, ವ್ಯಕ್ತಿತ್ವ ಮತ್ತು ಬದ್ಧತೆ ನೀವು ಎಷ್ಟು ದೂರ ಸಾಗುತ್ತೀರಿ ಎಂಬುದನ್ನು ನಿರ್ಧರಿಸುತ್ತದೆ ಎಂದು ಸೈಯದ್ ಬ್ಯಾರಿ ತಿಳಿಸಿದರು.

ಸಮಾರಂಭದಲ್ಲಿ ಬೆಂಗಳೂರು ಜಲ ಮಂಡಳಿ ಮುಖ್ಯ ಆಡಳಿತಾಧಿಕಾರಿ ಆಶಾ ಪರ್ವೀನ್, ಸೆಂಟ್ರಲ್ ಮುಸ್ಲಿಮ್ ಅಸೋಸಿಯೇಷನ್(ಸಿಎಂಎ) ಅಧ್ಯಕ್ಷ ಫಾರೂಕ್ ಮುಹಮ್ಮದ್, ಕಾರ್ಯದರ್ಶಿ ಅಫ್ತಾರ್ ಸೈಯದ್ ಮುರ್ತುಝಾ ಹುಸೇನ್, ಜಂಟಿ ಕಾರ್ಯದರ್ಶಿ ಹುಸೇನ್ ಶರೀಫ್, ಅಬ್ಬಾಸ್ ಖಾನ್ ಪದವಿ ಕಾಲೇಜಿನ ಪ್ರಾಂಶುಪಾಲೆ ಪ್ರೊ.ಎಂ.ಎಸ್.ವಿದ್ಯಾ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಆಯಿಷಾ ರುಕ್ಸಾರ್, ಉಪ ಪ್ರಾಂಶುಪಾಲೆ ಡಾ.ಸೈದಾ ತಬಸ್ಸುಮ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags

Syed Mohamed Beary
share
ವಾರ್ತಾಭಾರತಿ
ವಾರ್ತಾಭಾರತಿ
Next Story
X