Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ತಮಿಳುನಾಡಿಗೆ ನೀರು ಹರಿಸುವಂತೆ CWRC...

ತಮಿಳುನಾಡಿಗೆ ನೀರು ಹರಿಸುವಂತೆ CWRC ಆದೇಶ ಸಂಪೂರ್ಣ ಅವೈಜ್ಞಾನಿಕ : ಟಿ.ಎ.ನಾರಾಯಣಗೌಡ

ವಾರ್ತಾಭಾರತಿವಾರ್ತಾಭಾರತಿ29 July 2026 7:12 PM IST
share
ತಮಿಳುನಾಡಿಗೆ ನೀರು ಹರಿಸುವಂತೆ CWRC ಆದೇಶ ಸಂಪೂರ್ಣ ಅವೈಜ್ಞಾನಿಕ : ಟಿ.ಎ.ನಾರಾಯಣಗೌಡ
ನೀರು ಹರಿಸುವ ಆದೇಶ ಖಂಡಿಸಿ ಪ್ರತಿಭಟನೆ

ಬೆಂಗಳೂರು : ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ಕರ್ನಾಟಕವು ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ನೀಡಿರುವ ಆದೇಶವು ಸಂಪೂರ್ಣವಾಗಿ ಅವೈಜ್ಞಾನಿಕವಾಗಿದ್ದು, ಇದಕ್ಕೆ ರಾಜ್ಯ ಸರಕಾರ ತಲೆಬಾಗಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ.

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವ ನಿರ್ಧಾರವನ್ನು ಖಂಡಿಸಿ, ಕರವೇ ವತಿಯಿಂದ ನಗರದ ಫ್ರೀಡಂ ಪಾರ್ಕ್‍ನಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ತಮಿಳುನಾಡಿಗೆ ಕಾವೇರಿ ನೀರು ಹರಿಸುವ ನಿರ್ದೇಶನವು ವಾಸ್ತವ ಪರಿಸ್ಥಿತಿಯನ್ನು ನಿರ್ಲಕ್ಷಿಸಿರುವ ಹಾಗೂ ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾಗಿದೆ. ಈ ನಿರ್ದೇಶನವನ್ನು ಕರ್ನಾಟಕ ಸರಕಾರ ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಬಾರದು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದ್ದು, ಕೆಆರ್‌ ಎಸ್, ಕಬಿನಿ, ಹೇಮಾವತಿ, ಹಾರಂಗಿ ಸೇರಿದಂತೆ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಆತಂಕಕಾರಿ ಮಟ್ಟಕ್ಕೆ ಕುಸಿದಿದೆ. ಇಂತಹ ಸಂದರ್ಭದಲ್ಲಿ ಕರ್ನಾಟಕದ ಜನರಿಗೆ ಕುಡಿಯಲು ಕೂಡ ನೀರು ಇಲ್ಲದಿರುವಾಗ ತಮಿಳುನಾಡಿಗೆ ಸುಮಾರು 4.5 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಸೂಚಿಸಿರುವುದು ವಾಸ್ತವ ಸ್ಥಿತಿಯನ್ನು ಸಂಪೂರ್ಣವಾಗಿ ಕಡೆಗಣಿಸಿದ ಕ್ರಮವಾಗಿದೆ ಎಂದು ಕಿಡಿಕಾರಿದರು.

ರಾಜ್ಯ ಸರ್ಕಾರ ತಕ್ಷಣವೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಿ, ಕರ್ನಾಟಕದ ನೀರಿನ ನೈಜ ಸ್ಥಿತಿಯನ್ನು ವೈಜ್ಞಾನಿಕ ಅಂಕಿ-ಅಂಶಗಳೊಂದಿಗೆ ಮಂಡಿಸಬೇಕು. ಅಗತ್ಯವಿದ್ದರೆ ಸುಪ್ರೀಂ ಕೋರ್ಟ್ ಸೇರಿದಂತೆ ಲಭ್ಯವಿರುವ ಎಲ್ಲ ಕಾನೂನು ವೇದಿಕೆಗಳಲ್ಲಿ ಹೋರಾಟ ನಡೆಸಿ, ರಾಜ್ಯದ ನೀರಿನ ಹಕ್ಕನ್ನು ರಕ್ಷಿಸಬೇಕು ಎಂದು ಅವರು ಒತ್ತಾಯಿಸಿದರು.

ಕರ್ನಾಟಕ ಬಂದ್ ಮಾಡುವಲ್ಲಿ ಕರ್ನಾಟಕ ರಕ್ಷಣಾ ವೇದಿಕೆಗೆ ಯಾವುದೇ ಆಸಕ್ತಿಯಿಲ್ಲ. ಬಂದ್ ಎನ್ನುವುದು ಹೋರಾಟಗಾರರ ಕೊನೆಯ ಅಸ್ತ್ರ. ಜನಜೀವನಕ್ಕೆ ತೊಂದರೆಯಾಗುವ ಅಂತಹ ಹಂತಕ್ಕೆ ನಾವು ಈಗಲೇ ಹೋಗುವುದಿಲ್ಲ. ರಾಜ್ಯದ ಹಿತಾಸಕ್ತಿ ಕಾಪಾಡಲು ಕಾನೂನುಬದ್ಧ, ಪ್ರಜಾಸತ್ತಾತ್ಮಕ ಹಾಗೂ ಜನಾಂದೋಲನದ ವಿವಿಧ ಹೋರಾಟದ ಮಾರ್ಗಗಳನ್ನು ಕರ್ನಾಟಕ ರಕ್ಷಣಾ ವೇದಿಕೆ ಅನುಸರಿಸಲಿದೆ ಎಂದು ಹೇಳಿದರು.

ಕಾವೇರಿ ನೀರು ನಿಯಂತ್ರಣ ಸಮಿತಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಈ ನಿರ್ದೇಶನ ನೀಡಿದಂತಾಗಿದೆ. ನಮ್ಮ ಜಲಾಶಯಗಳಲ್ಲಿ ರಾಜ್ಯದ ಜನರಿಗೆ ಕುಡಿಯಲು ಸಾಕಾಗುವಷ್ಟು ನೀರೇ ಇಲ್ಲ. ಅಂತಹ ಪರಿಸ್ಥಿತಿಯಲ್ಲಿ ಅದನ್ನೂ ತಮಿಳುನಾಡಿಗೆ ಕೊಡಿ ಎನ್ನುವುದು ಯಾವ ನ್ಯಾಯ? ಕರ್ನಾಟಕದ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸದೆ ನೀಡಿರುವ ಈ ನಿರ್ದೇಶನವನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.

Tags

T.A. Narayana Gowda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X