Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ತೆರಿಗೆ ಹಣ ವಿಚಾರ: ಪರಿಷತ್ತಿನಲ್ಲಿ...

ತೆರಿಗೆ ಹಣ ವಿಚಾರ: ಪರಿಷತ್ತಿನಲ್ಲಿ ಗದ್ದಲದ ವಾತಾವರಣ

ವಾರ್ತಾಭಾರತಿವಾರ್ತಾಭಾರತಿ14 Feb 2024 10:30 PM IST
share
ತೆರಿಗೆ ಹಣ ವಿಚಾರ: ಪರಿಷತ್ತಿನಲ್ಲಿ ಗದ್ದಲದ ವಾತಾವರಣ

ಬೆಂಗಳೂರು: ರಾಜ್ಯಕ್ಕೆ ಬರಬೇಕಾದ ತೆರಿಗೆ ಹಣವನ್ನು ನೀಡಲು ಮೀನಾಮೇಷ ಎಣಿಸುತ್ತಿರುವ ಕೇಂದ್ರ ಸರಕಾರಕ್ಕೆ ಮಾನ ಮಾರ್ಯಾದೆ ಇಲ್ಲ ಎಂದು ಆಡಳಿತ ಪಕ್ಷದ ಸದಸ್ಯ ಯು.ಬಿ.ವೆಂಕಟೇಶ್ ಹೇಳುತ್ತಿದ್ದಂತೆ ಪರಿಷತ್ತಿನಲ್ಲಿ ಗದ್ದಲದ ವಾತಾವರಣ ಉಂಟಾಯಿತು.

ಬುಧವಾರ ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ ಮೇಲಿನ ಚರ್ಚೆ ನಡೆಸಿದ ಆಡಳಿತ ಪಕ್ಷದ ಸದಸ್ಯ ಯು.ಬಿ.ವೆಂಕಟೇಶ್, ನಡೆದಂತೆ ನುಡಿದಂತೆ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದ್ದೇವೆ. ಆದರೆ ಕೇಂದ್ರ ರಾಜ್ಯದ ತೆರಿಗೆ ಪಾಲನ್ನು ಪಾವತಿಸಿಲ್ಲ ಎಂದರು.

ಈ ವೇಳೆ ಮಾತನಾಡಿದ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ, ರಾಜ್ಯಪಾಲರ ಭಾಷಣ ವೇಳೆ ರಾಜ್ಯ ಸರ್ಕಾರದ ಸಾಧನೆಗಳ ಬಗ್ಗೆ ಹೇಳಬೇಕು. ಕೇಂದ್ರದ ವಿರುದ್ಧ ಅವಹೇಳನಕಾರಿ ಮಾತನಾಡುವುದು ಸರಿಯಲ್ಲ. ರಾಜ್ಯಕ್ಕೆ ಬರಬೇಕಾದ ತೆರಿಗೆ ಹಣ ಕೇಂದ್ರ ನೀಡಿದೆ. ಒಂದು ಸುಳ್ಳನ್ನು ಸಾವಿರ ಬಾರಿ ಹೇಳಿ ನಿಜ ಮಾಡಲು ಹೊರಟ್ಟಿದ್ದೀರಾ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಬಿ.ಕೆ.ಹರಿಪ್ರಸಾದ್, ತೆರಿಗೆ ಹಣ ನೀಡುವ ವಿಚಾರದಲ್ಲಿ ರಾಜ್ಯಕ್ಕೆ ಕೇಂದ್ರ ಸರಕಾರವು ಮಲತಾಯಿ ಧೋರಣೆ ಅನುಸರಿಸುವ ಮೂಲಕ ಜನತೆಗೆ ಮೋಸ ಮಾಡಿದೆ ಎಂದು ಆಪಾದಿಸಿದರು.

ಇದಕ್ಕೆ ಕೋಟಾ ಪ್ರತಿಕ್ರಿಯಿಸಿ, ಮಂತ್ರಿಯಾಗುವ ಕನಸು ಈಡೇರಿಲ್ಲ ಎಂಬುವುದು ನಮಗೆ ಗೊತ್ತಿದ್ದು ಈ ಬಗ್ಗೆ ವಿಷಾದವಿದೆ ಎಂದಿದಕ್ಕೆ ತೀಕ್ಷವಾಗಿ ಪ್ರತಿಕ್ರಿಯಿಸಿದ ಹರಿಪ್ರಸಾದ್, ಮಂತ್ರಿಯಾಗುವ ಆಗುವುದಕ್ಕೆ ನಾನು ಬಂದಿಲ್ಲ. ನನಗೆ ಮಂತ್ರಿಯಾಗುವ ಅಜೆಂಡಾ ಇಟ್ಟುಕೊಂಡಿಲ್ಲ. ನಾನು ಹಲವರನ್ನು ಮಂತ್ರಿ ಮಾಡಿದ್ದೇನೆ. ಪಕ್ಷ ಸಂಘಟನೆ ಮಾಡುತ್ತೇನೆ ಎಂದರು.

ಮಾತು ಮುಂದುವರೆಸಿದ ವೆಂಕಟೇಶ್, ಸರಕಾರದ ಸಾಧನೆಗಳ ಭಾಷಣ ಮುಂದುವರೆಯುತ್ತಿದ್ದಂತೆ ಅಯೋಧ್ಯೆ ರಾಮಮಂದಿರವನ್ನು ಕೇಂದ್ರವು ಗುತ್ತಿಗೆ ಪಡೆದುಕೊಂಡಿದೆಯಾ ಎಂದು ಪ್ರಶ್ನಿಸಿದರು. ಇದಕ್ಕೆ ಬಿಜೆಪಿ ಸದಸ್ಯರು ಮತ್ತೆ ವಿರೋಧ ವ್ಯಕ್ತಪಡಿಸಿದರು.

ವಿಪಕ್ಷ ಸಚೇತಕ ರವಿಕುಮಾರ್ ಮಾತನಾಡಿ, ನಾವು ಎಲ್ಲಿಯೂ ರಾಮಮಂದಿರ ಗುತ್ತಿಗೆ ಪಡೆದುಕೊಂಡಿದ್ದೇವೆ ಹೇಳಿಲ್ಲ. ಶ್ರೀರಾಮ ಜನ್ಮಭೂಮಿ ಎಂದಷ್ಟೇ ಹೇಳಿದ್ದೇವೆ ಎಂದರು. ಮಧ್ಯಪ್ರವೇಶಿಸಿದ ಬಿ.ಕೆ.ಹರಿಪ್ರಸಾದ್ ಮಾತನಾಡಿ, ಸುಪ್ರೀಕೋರ್ಟ್ ಆದೇಶದಲ್ಲಿ ಅಯೋಧ್ಯೆಯು ಶ್ರೀರಾಮನ ಜನ್ಮಭೂಮಿಯಲ್ಲ ಎಂದು ಹೇಳಿದೆ. ಆದರೆ ರಾಮನನ್ನು ಗುತ್ತಿಗೆ ಪಡೆದುಕೊಂಡಿರುವ ರೀತಿ ಬಿಜೆಪಿ ವರ್ತಿಸುತ್ತಿದೆ. ಈ ಬಗ್ಗೆ ಹೋರಾಟ ನಡೆಸಿದ್ದ ಎಲ್.ಕೆ.ಅಡ್ವಾಣಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿವೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ರವಿಕುಮಾರ್, ಸುಪ್ರೀಕೋರ್ಟ್ ತೀರ್ಪು ಮತ್ತೊಮ್ಮೆ ಓದಿ, ಅಯೋಧ್ಯೆಯಲ್ಲಿ ಶ್ರೀರಾಮನ ಜನ್ಮಸ್ಥಳ ಎಂದು ಐವರು ನ್ಯಾಯಾಧೀಶರು ತೀರ್ಪು ನೀಡಿದ್ದಾರೆ ಎಂದರು. ಇದೇ ವಿಷಯವಾಗಿ ಉಭಯ ಪಕ್ಷದ ಸದಸ್ಯರ ನಡುವೆ ವಾಕ್ಸಮರ ಉಂಟಾಯಿತು. ಸಭಾಪತಿ ಬಸವರಾಜ ಹೊರಟ್ಟಿ ಮಧ್ಯೆ ಪ್ರವೇಶಿಸಿದರೂ ಗದ್ದಲ ನಿಲ್ಲಿಸದ ಕಾರಣ ಸದನವನ್ನು ನಾಳೆಗೆ ಮುಂದೂಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X