Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ...

ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ದೇವೇಗೌಡರಿಗೆ ಧನ್ಯವಾದಗಳು: ರಮೇಶ್ ಬಾಬು

ವಾರ್ತಾಭಾರತಿವಾರ್ತಾಭಾರತಿ25 March 2024 6:58 PM IST
share
ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ದೇವೇಗೌಡರಿಗೆ ಧನ್ಯವಾದಗಳು: ರಮೇಶ್ ಬಾಬು

ಬೆಂಗಳೂರು: “ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ಮಾಜಿ ಪ್ರಧಾನಿ ಎಚ್.ಡಿ ದೇವೆಗೌಡ ಅವರಿಗೆ ಧನ್ಯವಾದಗಳು. ಈ ಯೋಜನೆಗೆ ವಿರೋಧ ಮಾಡುತ್ತಿರುವ ಬಿಜೆಪಿಯ ಆರ್. ಅಶೋಕ್ ಹಾಗೂ ಇತರ ನಾಯಕರು ದೇವೇಗೌಡರಿಂದ ಸಲಹೆ ಪಡೆಯಲಿ” ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷರಾದ ರಮೇಶ್ ಬಾಬು ಅವರು ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು “ಮೇಕೆದಾಟು ಯೋಜನೆ ಜಾರಿಗೆ ಡಿ.ಕೆ.ಶಿವಕುಮಾರ್ ಅವರು ಮತ್ತು ಕಾಂಗ್ರೆಸ್ ಪಕ್ಷ ದೊಡ್ಡ ಹೋರಾಟ ಮಾಡಿತ್ತು. ಈ ಯೋಜನೆಗೆ ಅನುಮೋದನೆ ನೀಡಬೇಕು ಎಂದು ಕೇಂದ್ರ ಸರ್ಕಾರದ ಮುಂದೆ ಪ್ರಸ್ತಾವನೆ ಇಡಲಾಗಿದೆ. ಈ ಮಧ್ಯೆ ಹಿರಿಯರಾದ ದೇವೇಗೌಡರು ಈ ಯೋಜನೆ ಪರವಾಗಿ ಮಾತನಾಡಿದ್ದಾರೆ. ಪಕ್ಷಾತೀತವಾಗಿ ಈ ಯೋಜನೆ ಪರವಾಗಿ ಹೋರಾಟ ಮಾಡಬೇಕು ಎಂದು ಹೇಳಿದ್ದಾರೆ. ಅವರ ಈ ಬೆಂಬಲಕ್ಕೆ ಧನ್ಯವಾದಗಳು, ಅವರ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷದ ಪರವಾಗಿ ಸ್ವಾಗತಿಸುತ್ತೇನೆ" ಎಂದರು.

2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಾಗ 7 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದ್ದರು. ನಾವು ಯಾವುದೇ ಪಕ್ಷಗಳ ಮನೆ ಬಾಗಿಲಿಗೆ ಹೋಗಬಾರದು ಅವರೇ ನಮ್ಮ ಬಳಿ ಬರಬೇಕು ಎಂದು ದೇವೇಗೌಡರು ಪದೇ, ಪದೇ ಹೇಳುತ್ತಿದ್ದರು. ಈಗ ಪ್ರತಿದಿನ ಯಡಿಯೂರಪ್ಪ ಅವರ ಮನೆ ಬಾಗಿಲು ತಟ್ಟುವ ಪರಿಸ್ಥಿತಿ ಉಂಟಾಗಿದೆ ಎಂದು ಹೇಳಿದರು.

ಈ ಹಿಂದೆ ರಾಮಕೃಷ್ಣ ಹೆಗಡೆ ಅವರು ಲೋಕಶಕ್ತಿ ಪಕ್ಷ ಸ್ಥಾಪಿಸಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡು 3 ಸ್ಥಾನಗಳನ್ನು ಗೆದ್ದರು. ಕರ್ನಾಟಕದಲ್ಲಿ ಈ ಪಕ್ಷ ಇತ್ತು ಎಂಬುದೇ ಜನಕ್ಕೆ ಮರೆತು ಹೋಗಿದೆ. ಇದೇ ಪರಿಸ್ಥಿತಿ ಜೆಡಿಎಸ್ ಪಕ್ಷಕ್ಕೆ ಖಂಡಿತಾ ಬರಲಿದೆ. ಜೆಡಿಎಸ್ ಕರ್ನಾಟಕದಿಂದ ಕಣ್ಮರೆ ಆಗುತ್ತದೆ. ಕೇವಲ ಮೂರು ಸ್ಥಾನಕ್ಕೆ ಅಂಗಲಾಚುತ್ತಿದೆ. ಸಿ.ಎಸ್.ಪುಟ್ಟರಾಜು ಅವರನ್ನೇ ಅಭ್ಯರ್ಥಿ ಎಂದು ಹೇಳಿ ಈಗ ನಾನೇ ಸ್ಪರ್ಧೆ ಮಾಡುತ್ತೇನೆ ಎನ್ನುತ್ತಿದ್ದಾರೆ ಕುಮಾರಸ್ವಾಮಿ. ಅಂದರೆ ಇವರಿಗೆ ಕುಟುಂಬ ಮಾತ್ರ ಮುಖ್ಯ. 2013ರ ಲೋಕಸಭಾ ಉಪಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯದಲ್ಲಿ ಬಿಜೆಪಿ ಬೆಂಬಲದಿಂದ ಜೆಡಿಎಸ್ ಸ್ಪರ್ಧೆ ಮಾಡಿತ್ತು. ಆದರೆ ಗೆದಿದ್ದು ಮಾತ್ರ ಕಾಂಗ್ರೆಸ್ ಪಕ್ಷ. ಕನಿಷ್ಠ 20 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಜೆಡಿಎಸ್ ಪಕ್ಷದ ಆತ್ಮ ವಂಚನೆಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X