Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹಿಂದಿನ ಬಜೆಟ್ ಅನುದಾನವೇ ಖರ್ಚು ಮಾಡದ...

ಹಿಂದಿನ ಬಜೆಟ್ ಅನುದಾನವೇ ಖರ್ಚು ಮಾಡದ ಸರಕಾರ: ಆರ್.ಅಶೋಕ್ ಆರೋಪ

ವಾರ್ತಾಭಾರತಿವಾರ್ತಾಭಾರತಿ22 Feb 2024 9:29 PM IST
share
ಹಿಂದಿನ ಬಜೆಟ್ ಅನುದಾನವೇ ಖರ್ಚು ಮಾಡದ ಸರಕಾರ: ಆರ್.ಅಶೋಕ್ ಆರೋಪ

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ 15ನೆ ಬಜೆಟ್ ಒಡೆದ ಕನ್ನಡಿಯಂತಿದೆ. ಪ್ರತಿಯೊಂದರಲ್ಲೂ ಬಿಂಬ ಕಾಣುತ್ತದೆ. ಆದರೆ, ಪೂರ್ಣ ಪ್ರಮಾಣದ ಮುಖ ಮಾತ್ರ ಕಾಣುವುದಿಲ್ಲ. ಹಾಗೆಯೇ ಕಳೆದ ಸಾಲಿನ ಬಜೆಟ್ ನಲ್ಲಿ ಇಲಾಖೆಗಳಿಗೆ ಅಭಿವೃದ್ಧಿಗಾಗಿ ಒದಗಿಸಿದ್ದ ಹಣ ಖರ್ಚಾಗದೆ ಬಾಕಿ ಉಳಿದಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಗುರುವಾರ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರಕಾರವಿದ್ದಾಗ ದೇವಾಲಯ ಮತ್ತು ಧಾರ್ಮಿಕ ಸಂಸ್ಥೆಗಳಿಗೆ 274 ಕೋಟಿ ರೂ. ಖರ್ಚು ಮಾಡಲಾಗಿತ್ತು. ಜೊತೆಗೆ ಸಿಎಂ ವಿಶೇಷ ಅನುದಾನದಡಿ, ಮಠ ಹಾಗೂ ದೇವಾಲಯಗಳಿಗೆ 2022-23 ರಲ್ಲಿ 154.80 ಕೋಟಿ ರೂ. ಖರ್ಚು ಮಾಡಲಾಗಿತ್ತು. ಈಗ ಕಾಂಗ್ರೆಸ್ ಸರಕಾರ ಕೇವಲ 17 ಕೋಟಿ ರೂ.ಮೀಸಲಿಟ್ಟಿದೆ ಎಂದರು.

ವಕ್ಫ್ ಮಂಡಳಿಗೆ 100 ಕೋಟಿ ರೂ.ಅನುದಾನ ನೀಡಲಾಗಿದೆ. ಹಿಂದೂ ರುದ್ರಭೂಮಿಗಳ ಅಭಿವೃದ್ಧಿಗೆ ಬಿಜೆಪಿ ಸರಕಾರ 24.7 ಕೋಟಿ ರೂ.ಖರ್ಚು ಮಾಡಿದ್ದರೆ ಈಗಿನ ಸರಕಾರ 10 ಕೋಟಿ ರೂ. ಮೀಸಲಿಟ್ಟಿದೆ. ದೇವಸ್ಥಾನಗಳ ಆಸ್ತಿ ಕೋಟ್ಯಂತರ ರೂಪಾಯಿ ಬೆಲೆ ಬಾಳುತ್ತಿದ್ದು, ಅದನ್ನು ನಿರ್ವಹಿಸಲು ಹೆಚ್ಚು ಅನುದಾನ ಬೇಕಾಗುತ್ತದೆ ಎಂದು ಅವರು ಹೇಳಿದರು.

ನಾನು ಸಾರಿಗೆ ಸಚಿವನಾಗಿದ್ದಾಗ 1,200 ಎಕರೆ ಸರಕಾರಿ ಜಮೀನನ್ನು ಹರಾಜು ಹಾಕುವುದನ್ನು ತಪ್ಪಿಸಿ ಸಾರಿಗೆ ಇಲಾಖೆಗೆ ಕೊಡಲು ಕ್ರಮ ವಹಿಸಿ ಯಶಸ್ವಿಯಾಗಿದ್ದೆ. ಈ ರೀತಿ ಸರಕಾರಿ ಜಮೀನನ್ನು ಉಳಿಸಲು ಕ್ರಮ ವಹಿಸಿ ಎಂದು ಅಶೋಕ್ ಕಿವಿಮಾತು ಹೇಳಿದರು.

ತೆರಿಗೆ ಸಂಗ್ರಹ ಇಳಿಕೆ: 2023-24 ರಲ್ಲಿ ತೆರಿಗೆ ಸಂಗ್ರಹದ ಗುರಿ 1,75,653 ಕೋಟಿ ರೂ. ಇದ್ದು, 1,61,494 ಕೋಟಿ ರೂ.ಸಂಗ್ರಹವಾಗಿದೆ. ಅಂದರೆ ಗುರಿಗಿಂತ 14,159 ಕೋಟಿ ರೂ. ಸಂಗ್ರಹ ಕಡಿಮೆಯಾಗಿದೆ. ಇದು ಕಾಂಗ್ರೆಸ್ ಸರಕಾರದ ವೈಫಲ್ಯ. 2024-25 ರಲ್ಲಿ ತೆರಿಗೆ ಸಂಗ್ರಹದ ಗುರಿ 1,89,893 ಕೋಟಿ ರೂ. ಇದ್ದು, ಕಳೆದ ಬಾರಿಗಿಂತ 28,399 ಕೋಟಿ ರೂ. ಅಧಿಕ ಗುರಿ ನೀಡಲಾಗಿದೆ ಎಂದು ಅವರು ಹೇಳಿದರು.

2022-23 ರಲ್ಲಿ ಬಜೆಟ್ ಗಾತ್ರ 2,89,653 ಕೋಟಿ ರೂ. ಹಾಗೂ ಬಂಡವಾಳ ವೆಚ್ಚ 57,348 ಕೋಟಿ ರೂ. ಇತ್ತು. 2023-24 ರಲ್ಲಿ ಬಜೆಟ್ ಗಾತ್ರ 3,27,747 ಕೋಟಿ ರೂ. ಹಾಗೂ ಬಂಡವಾಳ ವೆಚ್ಚ 51,231 ಕೋಟಿ ರೂ. ಆಗಿತ್ತು. 2024-25 ರಲ್ಲಿ ಬಜೆಟ್ ಗಾತ್ರ 3,71,383 ಕೋಟಿ ರೂ. ಆಗಿದ್ದು, ಬಂಡವಾಳ ವೆಚ್ಚ 52,903 ಕೋಟಿ ರೂ. ಆಗಿದೆ. ಇದನ್ನು ನೋಡಿದರೆ ರಾಜ್ಯದ ಆರ್ಥಿಕ ಪರಿಸ್ಥಿತಿ ಒಂದು ರೀತಿಯಲ್ಲಿ ಪ್ರಪಾತಕ್ಕೆ ಹೋಗುತ್ತಿದೆ ಎಂದು ಅಶೋಕ್ ಬೇಸರ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ 15ನೆ ಬಜೆಟ್‍ಗೆ ಸಾಲದ ಮೊತ್ತವನ್ನು ಒಂದು ಲಕ್ಷ ಕೋಟಿ ರೂ.ಗಳ ಗಡಿ ತಲುಪಿಸಿದ್ದಾರೆ. ಈವರೆಗೆ ರಾಜ್ಯದ ಸಾಲ 6,65,095 ಕೋಟಿ ರೂ.ಗೆ ಸಾಲ ತಲುಪಿದೆ. ಅಂದರೆ ಒಬ್ಬ ಪ್ರಜೆಯ ಮೇಲೆ 95,013 ರೂ.ಸಾಲ ಬೀಳಲಿದೆ. ಇನ್ನು ಸಾಲ ಮಾಡಲು ಆಗಲ್ಲ, ತೆರಿಗೆ ಹಾಕಲೂ ಆಗಲ್ಲ ಎನ್ನುವ ಸ್ಥಿತಿ ಉಂಟಾಗಿದೆ ಎಂದು ಅವರು ಹೇಳಿದರು.

ವಿತ್ತೀಯ ಕೊರತೆ 2022-23 ರಲ್ಲಿ ಶೇ.2.14, 2023-24 ರಲ್ಲಿ ಶೇ.2.67ಆಗಿದ್ದು, 2024-25 ರಲ್ಲಿ ಶೇ.2.9ಗೆ ಹೋಗುವ ಸಾಧ್ಯತೆ ಇದೆ. ಕೇವಲ ಎರಡು ವರ್ಷದಲ್ಲಿ ಸಾಲದ ಪ್ರಮಾಣ ಶೇ.13.6ರಷ್ಟು ಏರಿಕೆಯಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಬಡ್ಡಿ ಪ್ರಮಾಣ 73 ಸಾವಿರ ಕೋಟಿ ರೂ. ತಲುಪುವ ಅಂದಾಜಿದೆ ಎಂದು ಅಶೋಕ್ ಆತಂಕ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X