Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅಂತರಂಗ ರೂಪುಗೊಳ್ಳಲು ರಂಗ ಚಟುವಟಿಕೆಗಳು...

ಅಂತರಂಗ ರೂಪುಗೊಳ್ಳಲು ರಂಗ ಚಟುವಟಿಕೆಗಳು ಅಗತ್ಯ: ಪ್ರೊ.ಕೆ.ವೈ. ನಾರಾಯಣಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ20 May 2025 11:51 PM IST
share
ಅಂತರಂಗ ರೂಪುಗೊಳ್ಳಲು ರಂಗ ಚಟುವಟಿಕೆಗಳು ಅಗತ್ಯ: ಪ್ರೊ.ಕೆ.ವೈ. ನಾರಾಯಣಸ್ವಾಮಿ

ಬೆಂಗಳೂರು: ಪ್ರಸ್ತುತ ಸಾಮಾಜಿಕ ಸುಧಾರಣೆಗೆ ಪೂರಕವಾದ ಪಠ್ಯಗಳ ಕೊರತೆ ಇದೆ. ಅಂತರಂಗವಿಲ್ಲದ ಮನುಷ್ಯರನ್ನು ಶಿಕ್ಷಣ ವ್ಯವಸ್ಥೆ ತಯಾರುಗೊಳಿಸುತ್ತಿದ್ದು, ಅಂತರಂಗ ರೂಪುಗೊಳ್ಳಲು ರಂಗ ಚಟುವಟಿಕೆಗಳು ಅಗತ್ಯ ಎಂದು ಪ್ರಾಧ್ಯಾಪಕ ಪ್ರೊ.ಕೆ.ವೈ.ನಾರಾಯಣಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಮಂಗಳವಾರ ಎಚ್‍ಎಸ್‍ಆರ್ ಬಡಾವಣೆಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಂಘ ಹಾಗೂ ಎನ್‍ಎಸ್‍ಎಸ್ ಸಮಿತಿ ವತಿಯಿಂದ ಆಯೋಜಿಸಿದ್ದ ರಂಗ ತರಬೇತಿ ಸಮಾರೋಪದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶಿಕ್ಷಣ ವ್ಯವಸ್ಥೆಯ ಕಲಿಕೆಯ ಒಂದು ಭಾಗವಾಗಿ ರಂಗ ಪಠ್ಯವನ್ನು ಅಳವಡಿಸಿ ವಿದ್ಯಾರ್ಥಿಗಳನ್ನು ಕಲಿಕೆಯಲ್ಲಿ ಭಾಗಿದಾರರನ್ನಾಗಿಸಬೇಕಿದೆ. ತರಗತಿಗಳಲ್ಲಿ ಪಠ್ಯಗಳನ್ನು ರಂಗಭೂಮಿ ಲಕ್ಷಣಗಳೊಂದಿಗೆ ಬೋಧಿಸಿದಾಗ ಹೆಚ್ಚು ಪರಿಣಾಮಕಾರಿಯಾಗುತ್ತದೆ ಎಂದು ಹೇಳಿದರು.

ವಿಭಿನ್ನ ಸಾಮಾಜಿಕ ಹಿನ್ನೆಲೆಗಳಿಂದ ಬರುವ ವಿದ್ಯಾರ್ಥಿಗಳು ಒಟ್ಟುಗೂಡಿ ಕಲಿಯುವ, ಕಲಿಸುವ ಅವಕಾಶವಿರುವುದು ರಂಗಭೂಮಿಯಲ್ಲಿ ಮಾತ್ರ. ಬರೀ ಕೇಳುಗರಾಗಿ ರೂಪುಗೊಳ್ಳುತ್ತಿರುವ ವಿದ್ಯಾರ್ಥಿಗಳನ್ನು ಭಾಗಿದಾರರನ್ನಾಗಿಸುವುದು ರಂಗಭೂಮಿಯ ವಿಶೇಷತೆ. ತನ್ನನ್ನು ತಾನು ಅರಿಯುವ, ಹೃದಯ ಹಾಗೂ ಭಾವಗಳ ಮನನ ಮಾಡಿಸುವ ಶಕ್ತಿ ರಂಗಭೂಮಿಗೆ ಇದೆ. ಅನೇಕ ಸಾಮಾಜಿಕ ಸುಧಾರಕರ ವಿಚಾರಗಳು, ಹೋರಾಟಗಳು ಇದ್ದಗಾಲೂ ಸಾಮಾಜಿಕ ಬದಲಾವಣೆ, ಸಾಮರಸ್ಯ ಸಾಧ್ಯವಾಗಿದಿರುವುದಕ್ಕೆ ಪ್ರಸ್ತುತವಿರುವ ಶಿಕ್ಷಣ ವ್ಯವಸ್ಥೆಯು ಒಂದು ಕಾರಣ ಎಂದು ನಾರಾಯಣಸ್ವಾಮಿ ನುಡಿದರು.

ಕಾಲೇಜಿನ ಪ್ರಾಂಶುಪಾಲೆ ಡಾ.ರಾಗಿಣಿ ಎನ್ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನಲ್ಲಿರುವ ರಂಗವೇದಿಕೆಗಳನ್ನು ಬಳಸಿಕೊಳ್ಳುವ ಮೂಲಕ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು. ರಂಗಭೂಮಿ ಮನುಷ್ಯರನ್ನು ಸಂವೇದನಾಶೀಲಗೊಳಿಸುತ್ತದೆ. ರಂಗಭೂಮಿ ಚಟುವಟಿಕೆಗಳು ಚಲನಶೀಲವಾದದ್ದು ಅರ್ಥೈಸಿ ಕಲಿಸುವಂಥ ಮನುಷ್ಯತ್ವದ ಎದೆಯ ದನಿಯೇ ರಂಗಭೂಮಿ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಡಾ.ಲಕ್ಷ್ಮಿ ಕೆ., ಶ್ರೀಪಾಪಣ್ಣ ಸಿ., ಪ್ರೊ.ಚಂದ್ರಕಲಾ, ಡಾ.ಭೈರೇಗೌಡ ಎಂ., ಸೇರಿದಂತೆ ಹಲವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X