Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದೇಶದ್ರೋಹಿಗಳು ದೇಶಪ್ರೇಮದ ಪಾಠ...

ದೇಶದ್ರೋಹಿಗಳು ದೇಶಪ್ರೇಮದ ಪಾಠ ಮಾಡುತ್ತಿರುವುದು ಇಂದಿನ ದುರಂತ: ಡಿಸಿಎಂ ಡಿ. ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ15 Aug 2024 11:37 AM IST
share
ದೇಶದ್ರೋಹಿಗಳು ದೇಶಪ್ರೇಮದ ಪಾಠ ಮಾಡುತ್ತಿರುವುದು ಇಂದಿನ ದುರಂತ: ಡಿಸಿಎಂ ಡಿ. ಕೆ. ಶಿವಕುಮಾರ್

ಬೆಂಗಳೂರು, ಆ. 15: "ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬ್ರಿಟಿಷರ ಜೊತೆ ಕೈಜೋಡಿಸಿದ್ದ ದೇಶದ್ರೋಹಿಗಳು, ಇಂದು ಅಧಿಕಾರ ಸಿಕ್ಕ ತಕ್ಷಣ ನಮಗೆ ದೇಶ ಭಕ್ತಿಯ ಪಾಠ ಮಾಡುತ್ತಿರುವುದು ದುರಂತ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಆವರಣದಲ್ಲಿ 78ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ನಡೆದ ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು "ಇಂತಹ ಗೋಮುಖ ವ್ಯಾಘ್ರಗಳಿಂದ ದೇಶವನ್ನು ರಕ್ಷಿಸಬೇಕು. ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷದ ಮಹತ್ವವನ್ನು ಹೊಸ ಜನಾಂಗಕ್ಕೆ ತಿಳಿಸಬೇಕು" ಎಂದು ಕರೆ ನೀಡಿದರು.

"ಸ್ವಾತಂತ್ರ ಹೋರಾಟದಲ್ಲಿ ಸುಮಾರು 6.5 ಲಕ್ಷ ಜನ ಕಾಂಗ್ರೆಸ್ಸಿಗರು ಪ್ರಾಣ ತ್ಯಾಗ ಮಾಡಿದ್ದಾರೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು ನಮ್ಮ ಕಾಂಗ್ರೆಸ್ ಪಕ್ಷ ಎಂಬುದು ನಮ್ಮ ಹೆಗ್ಗಳಿಕೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರುಗಳು ಧೈರ್ಯದಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪಕ್ಷ ಎಂದು ಹೇಳಬೇಕು" ಎಂದು ಹೇಳಿದರು.

"ಶಾಮ ಪ್ರಸಾದ ಮುಖರ್ಜಿ ಅವರು ಕ್ವಿಟ್ ಇಂಡಿಯಾ ಚಳುವಳಿ ಹತ್ತಿಕ್ಕಬೇಕು ಎಂದು ಬ್ರಿಟಿಷರಿಗೆ ಪತ್ರ ಬರೆದಿದ್ದರು. ಇವರ ಹಿಂಬಾಲಕರು ದೇಶಕ್ಕೆ ಕಾಂಗ್ರೆಸ್ ಕೊಡುಗೆ ಏನು ಎಂದು ಕೇಳುತ್ತಾರೆ. ಬಿಜೆಪಿ ಸರ್ಕಾರ ಖಾಸಗಿಯವರಿಗೆ ಮಾರುತ್ತಿರುವ ಸಾರ್ವಜನಿಕ ವಲಯ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದೇ ಕಾಂಗ್ರೆಸ್. ಬಿಜೆಪಿ ಈ ದೇಶಕ್ಕೆ ಕೊಟ್ಟ ಕೊಡುಗೆ ಏನು. ಅಂದು ಬ್ರಿಟೀಷರ ಪರವಾಗಿ ನಿಂತು ಷಡ್ಯಂತ್ರ ರೂಪಿಸಿದ ಶಕುನಿಗಳು" ಎಂದು ಹೇಳಿದರು.

"ನಮ್ಮೆಲ್ಲರ ಹಿಂಜರಿಕೆಯಿಂದ ಮಹಾತ್ಮಾ ಗಾಂಧೀಜಿ, ನೆಹರು, ಇಂದಿರಾಗಾಂಧಿ, ಸರ್ದಾರ್ ಪಟೇಲ್ ಸೇರಿದಂತೆ ಅನೇಕ ನಾಯಕರುಗಳು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಯೇ ಇಲ್ಲ ಎಂದು ಸುಳ್ಳುಸುದ್ದಿ ಹಬ್ಬಿಸುತ್ತಿದ್ದಾರೆ. ಇಂದು ಮತ್ತೊಮ್ಮೆ ಕಾಂಗ್ರೆಸ್ ನೇತೃತ್ವದಲ್ಲಿ ದೇಶವನ್ನು ಒಗ್ಗೂಡಿಸಬೇಕಾಗಿದೆ" ಎಂದರು.

"ಸ್ವಾತಂತ್ರ್ಯ ಹೋರಾಟದಲ್ಲಿ ದಾದಾಬಾಯಿ ನವರೋಜಿ, ಬಾಲಗಂಗಾಧರ ತಿಲಕ್, ಮಹಾತ್ಮಾ ಗಾಂಧೀಜಿ, ನೆಹರೂ, ವಲ್ಲಭಭಾಯಿ ಪಟೇಲ್, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಸರೋಜಿನಿ ನಾಯ್ಡು, ಲಾಲಲಜಪತ ರಾಯ್, ಗೋಪಾಲ ಕೃಷ್ಣ ಗೋಖಲೆ, ಬಿಪಿನ್ ಚಂದ್ರಪಾಲ್ ಸೇರಿದಂತೆ ಅನೇಕರ ಹೋರಾಟವಿದೆ" ಎಂದು ಮಹನೀಯರನ್ನು ಸ್ಮರಿಸಿದರು.

"ಸಾವಿರಾರು ಜನ ತಮ್ಮ ಮನೆ, ಮಠ, ಜೀವನವನ್ನೇ ತ್ಯಾಗ ಮಾಡಿದ್ದಾರೆ. ದೇಶಕ್ಕಾಗಿ ತನು, ಮನ, ಧನ, ಪ್ರಾಣ ಎಲ್ಲವನ್ನು ಅರ್ಪಿಸಿದವರು ಕಾಂಗ್ರೆಸ್ ನವರು. ಅಂದು ಬ್ರಿಟೀಷರ ಗುಲಾಮರಾಗಿದ್ದವರು ಇಂದು ನಕಲಿ ದೇಶಭಕ್ತಿಯ ಮುಖವಾಡ ಧರಿಸಿ ದೇಶವನ್ನು ನಾಶ ಮಾಡುತ್ತಿದ್ದಾರೆ" ಎಂದು ಆತಂಕ ವ್ಯಕ್ತಪಡಿಸಿದರು.

"ಬ್ರಿಟೀಷರ ವಿರುದ್ಧ ಮೊದಲು ಕ್ರಾಂತಿಯ ಕಿಚ್ಚು ಹಚ್ಚಿದ್ದೇ ಕರ್ನಾಟಕ. 1837 ರಲ್ಲಿ ನಡೆದ ಅಮರ ಸುಳ್ಯ ಹೋರಾಟ ಈ ದೇಶದ ಮೊದಲ ಸ್ವಾತಂತ್ರ್ಯ ಸಂಗ್ರಾಮ. ಶಿವಮೊಗ್ಗ ಜಿಲ್ಲೆಯ ಈಸೂರು ಸ್ವಾತಂತ್ರ್ಯವನ್ನು ಘೋಷಿಸಿದ ದೇಶದ ಮೊದಲ ಗ್ರಾಮ. ಕಾಂಗ್ರೆಸ್ ಮುಖಂಡ ಹನುಮಂತ ರಾವ್ ಅವರ ನೇತೃತ್ವದಲ್ಲಿ 1930 ರಲ್ಲಿ ಅಂಕೋಲಾದಲ್ಲಿ ಉಪ್ಪಿನ ಸತ್ಯಾಗ್ರಹ ನಡೆಯಿತು. ಸ್ವಾತಂತ್ರ್ಯ ಹೋರಾಟಕ್ಕೆ ಕರ್ನಾಟಕ ಮತ್ತು ಕನ್ನಡಿಗರ ಕೊಡುಗೆ ಅಪಾರ" ಎಂದರು.

"ಮಹಾತ್ಮಾ ಗಾಂಧಿ ಅವರು ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡು 100 ವರ್ಷಗಳಾಗುತ್ತಿರುವ ಈ ಸಂದರ್ಭದಲ್ಲಿ ಸಚಿವರಾದ ಎಚ್ ಕೆ ಪಾಟೀಲ್ ಅವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಯಾವ ರೀತಿಯ ಕಾರ್ಯಕ್ರಮ ರೂಪಿಸಬೇಕು ಎಂದು ಸರ್ಕಾರ ಚಿಂತನೆ ಮಾಡುತ್ತಿದೆ" ಎಂದರು.

"ಸ್ವಾತಂತ್ರ್ಯ ಎಂದರೆ ಬೆಲೆ ಕಟ್ಟಿ ಪಡೆಯುವ ವಸ್ತುವಲ್ಲ. ಅದು ಜೀವನದ ಉಸಿರು. ಸ್ವಾತಂತ್ರ್ಯಕ್ಕೆ ನಾವು ಬೆಲೆ ಕಟ್ಟಲು ಸಾಧ್ಯವೇ ಎಂದು ಮಹಾತ್ಮಾ ಗಾಂಧೀಜಿ ಅವರು ಹೇಳಿದ್ದಾರೆ. ಹೃದಯ ಅಸೂಯೆ ಅಥವಾ ದ್ವೇಷದಿಂದ ತುಂಬಿದ್ದರೆ ಅಲ್ಲಿ ಸ್ವಾತಂತ್ರ್ಯ ಇರುವುದಿಲ್ಲ ಎಂದು ನೆಹರು ಅವರು ಹೇಳಿದ್ದಾರೆ" ಎಂದು ತಿಳಿಸಿದರು.

"ಈ ದೇಶಕ್ಕೆ ನೆಹರು ಅವರು ಇಂದಿರಾಗಾಂಧಿಯವರ ಕೊಡುಗೆ ಅಪಾರ. ಉಳುವವನೆ ಭೂಮಿಯ ಒಡೆಯ, ನೂರಾರು ಸಾರ್ವಜನಿಕ ಉದ್ದಿಮೆಗಳು, ನರೇಗಾ ಯೋಜನೆ ಸೇರಿದಂತೆ ನೂರಾರು ಯೋಜನೆಗಳ ಮೂಲಕ ದೇಶ ಕಟ್ಟಿದ್ದಾರೆ" ಎಂದರು.

"ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ವಾತಂತ್ರ್ಯೋತ್ಸವದ ಸಂದೇಶವಾಗಿ, ಸ್ವಾತಂತ್ರ್ಯ ಎಂದರೆ ಸಮಾಜದ ಎಲ್ಲಾ ವರ್ಗದ ಜನರಿಗೆ ಹಸಿವಿನಿಂದ ಸ್ವಾತಂತ್ರ್ಯ, ಬಡತನದಿಂದ ಸ್ವಾತಂತ್ರ, ಕತ್ತಲೆಯಿಂದ ಸ್ವಾತಂತ್ರ್ಯ, ಸಂಕೋಲೆಯಿಂದ ಸ್ವಾತಂತ್ರ್ಯ, ನಿರುದ್ಯೋಗದಿಂದ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ನಿಜವಾದ ಸ್ವಾತಂತ್ರ್ಯವೆಂದು ಸಂದೇಶ ನೀಡಿದ್ದಾರೆ" ಎಂದರು.

"ಐದು ಗ್ಯಾರಂಟಿ ಯೋಜನೆಗಳನ್ನು ದೇಶದ ಅನೇಕ ರಾಜ್ಯಗಳು ಗಮನಿಸುತ್ತಿವೆ. ಪ್ರಪಂಚದ ಅನೇಕ ರಾಷ್ಟ್ರಗಳು ಅಧ್ಯಯನ ಮಾಡುತ್ತಿವೆ. ಐದು ಗ್ಯಾರಂಟಿಗಳ ಮೂಲಕ ಸಮಾಜದ ಎಲ್ಲಾ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ನೀಡಿದೆ" ಎಂದು ಅಭಿಪ್ರಾಯ ಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X