Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಇರಾನ್ ಮೇಲೆ ಅಮೆರಿಕದ ಬಾಂಬ್ ದಾಳಿ:...

ಇರಾನ್ ಮೇಲೆ ಅಮೆರಿಕದ ಬಾಂಬ್ ದಾಳಿ: ಎಡಪಕ್ಷಗಳ ಖಂಡನೆ

ವಾರ್ತಾಭಾರತಿವಾರ್ತಾಭಾರತಿ22 Jun 2025 11:25 PM IST
share
ಇರಾನ್ ಮೇಲೆ ಅಮೆರಿಕದ ಬಾಂಬ್ ದಾಳಿ: ಎಡಪಕ್ಷಗಳ ಖಂಡನೆ

ಬೆಂಗಳೂರು : ಅಮೆರಿಕ ಸಂಯುಕ್ತ ಸಂಸ್ಥಾನವು ಇರಾನ್ ಮೇಲೆ ಬಾಂಬ್ ದಾಳಿ ನಡೆಸಿದ್ದು, ಇದಕ್ಕೆ ಭಾರತದ ಎಡಪಕ್ಷಗಳಾದ ಸಿಪಿಎಂ, ಸಿಪಿಐ ಸಿಪಿಐ(ಎಂಎಲ್), ಆರ್‌ಎಸ್‌ಪಿ ಹಾಗೂ ಫಾರ್ವರ್ಡ್ ಬ್ಲಾಕ್ ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ.

ರವಿವಾರ ಸಿಪಿಎಂನ ಪ್ರಧಾನ ಕಾರ್ಯದರ್ಶಿ ಎಂ.ಎ.ಬೇಬಿ, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ, ಸಿಪಿಐ(ಎಂಎಲ್)ನ ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ, ಆರ್‌ಎಸ್‌ಪಿ ಪ್ರಧಾನ ಕಾರ್ಯದರ್ಶಿ ಮನೋಜ್ ಹಾಗೂ ಫಾರ್ವರ್ಡ್ ಬ್ಲಾಕ್ ಪ್ರಧಾನ ಕಾರ್ಯದರ್ಶಿ ದೇವರಾಜನ್ ಜಂಟಿ ಪ್ರಕಟನೆಯನ್ನು ಹೊರಡಿಸಿದ್ದು, ಇರಾನ್ ಮೇಲಿನ ದಾಳಿಯು ಪಶ್ಚಿಮ ಏಷ್ಯಾವನ್ನು ಅಸ್ಥಿರಗೊಳಿಸುತ್ತದೆ. ಹಾಗೆಯೇ ತೀವ್ರ ಆರ್ಥಿಕ ದುಷ್ಪರಿಣಾಮಗಳನ್ನು ಬೀರುತ್ತದೆ ಎಂದು ಹೇಳಿದ್ದಾರೆ.

ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಅಭಿವೃದ್ಧಿಪಡಿಸಲಿದೆ ಎಂದು ತಿಳಿಸಿ ಅಮೆರಿಕ ಮತ್ತು ಇಸ್ರೇಲ್ ತಮ್ಮ ದಾಳಿಗಳನ್ನು ಸಮರ್ಥಿಸಿಕೊಳ್ಳುತ್ತಿವೆ. ಆದರೆ, ಅಂತರ್‌ರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆಯ ಮಹಾನಿರ್ದೇಶಕ ರಾಫೆಲ್ ಗ್ರೋಸಿ ಜೂ.19ರಂದು ‘ಪರಮಾಣು ಶಸ್ತ್ರಾಸ್ತ್ರದ ಪ್ರಯತ್ನದ ಬಗ್ಗೆ ನಮಗೆ ಯಾವುದೇ ಪುರಾವೆಯೂ ಇರಲಿಲ್ಲ’ ಎಂದು ಹೇಳಿರುವುದನ್ನು ಗಮನಿಸುವುದು ಮುಖ್ಯ ಎಂದು ಎಡಪಕ್ಷಗಳು ಹೇಳಿವೆ.

ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ಸೂಚಿಸುವ ಯಾವುದೇ ಪುರಾವೆಗಳನ್ನು ತಮ್ಮ ಬಳಿ ಇಲ್ಲ ಎಂದು ಅಮೆರಿಕದ ಗುಪ್ತಚರ ಸಂಸ್ಥೆಗಳೂ ಒಪ್ಪಿಕೊಂಡಿವೆ. ಇದಲ್ಲದೆ, ಇರಾನ್ ಈಗಲೂ ಪರಮಾಣು ನಿಷೇಧ ಒಪ್ಪಂದಕ್ಕೆ ಸಹಿದಾರನಾಗಿಯೇ ಇದೆ ಎಂದು ಎಡಪಕ್ಷಗಳು ಸ್ಪಷ್ಟಪಡಿಸಿವೆ.

ಎಸ್‌ಯುಸಿಐ ಖಂಡನೆ

ಬೆಂಗಳೂರು : ಅಮೆರಿಕನ್ ಸಾಮ್ರಾಜ್ಯಶಾಹಿಗಳು ಎಲ್ಲ ಅಂತರ್‌ರಾಷ್ಟ್ರೀಯ ನಿಯಮಗಳನ್ನು ಉಲ್ಲಂಘಿಸಿ, ಪರಮಾಣು ಶಕ್ತಿ ಸಂಸ್ಥೆಯ ಎಚ್ಚರಿಕೆಗಳನ್ನು ನಿರ್ಲಕ್ಷಿಸಿ, ಶಾಂತಿಪ್ರಿಯ ಜಗತ್ತಿನ ಜನರ ಅಭಿಪ್ರಾಯವನ್ನು ತಿರಸ್ಕರಿಸಿ ಇರಾನ್ ಮೇಲೆ ನಡೆಸಿರುವ ಮಿಲಿಟರಿ ದಾಳಿಯನ್ನು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಖಂಡಿಸುತ್ತದೆ ಎಂದು ಕಾರ್ಯದರ್ಶಿ ಕೆ.ಉಮಾ ಹೇಳಿದ್ದಾರೆ.

ರವಿವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಮೆರಿಕನ್ ಸಾಮ್ರಾಜ್ಯಶಾಹಿ ರಾಕ್ಷಸರು ಮೊದಲು ಮಧ್ಯಪ್ರಾಚ್ಯದಲ್ಲಿ ತಮ್ಮ ಮುಂಚೂಣಿ ಕಚೇರಿಯಾದ ಝಿಯೋನಿಸ್ಟ್ ಇಸ್ರೇಲ್‌ಗೆ ಸಹಾಯ ಮಾಡಿ, ಪ್ರಚೋದಿಸಿ, ಗಾಝಾದಲ್ಲಿ ಲಕ್ಷಾಂತರ ನಿರಪರಾಧಿಗಳಾದ ಫೆಲೆಸ್ತೀನಿಯರನ್ನು ಕೊಂದು ಸಾಮೂಹಿಕ ನರಮೇಧವನ್ನು ಆಯೋಜಿಸಿದರು ಎಂದು ತಿಳಿಸಿದ್ದಾರೆ.

ಇದೀಗ ಇರಾನ್ ತಮ್ಮ ಆದೇಶಗಳಿಗೆ ಬಗ್ಗುವಂತೆ ಮಾಡಲು, ತಮ್ಮ ಪ್ರಾಬಲ್ಯವನ್ನು ವಿಸ್ತರಿಸಲು ಮತ್ತು ಮಧ್ಯಪ್ರಾಚ್ಯದಲ್ಲಿ ತಮ್ಮ ಹಿಡಿತ ಕಾಪಾಡಿಕೊಳ್ಳುವ ಯೋಜನೆಗೆ ಯಾವುದೇ ಸವಾಲು ಎದುರಾಗದಂತೆ ಖಾತ್ರಿಪಡಿಸಿಕೊಳ್ಳಲು, ಇರಾನ್ ಮೇಲೆ ಅಪ್ರಚೋದಿತವಾದ ಮಾರಕ ಮಿಲಿಟರಿ ದಾಳಿಯನ್ನು ಅಮೆರಿಕ ಆರಂಭಿಸಿದೆ. ಆದರೆ ಇರಾನ್ ಜನರ ದಿಟ್ಟ ಪ್ರತಿರೋಧವು ಈ ಘೋರ ಷಡ್ಯಂತ್ರವನ್ನು ವಿಫಲಗೊಳಿಸುತ್ತಿದೆ. ಇಸ್ರೇಲ್‌ನ ಮಿಲಿಟರಿ ದಾಳಿಯಿಂದ ಇರಾನ್‌ನ್ನು ಸದೆಬಡಿಯಲು ವಿಫಲವಾದ ಅಮೆರಿಕ, ಈಗ ನೇರವಾಗಿ ಇರಾನ್ ಮೇಲೆ ದಾಳಿ ಮಾಡಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X