ಪತ್ರಕರ್ತ ವೆಂಕಟೇಶ್ ಸಂಪ ಅವರಿಗೆ ʼಪಂಪ ಪ್ರಶಸ್ತಿʼ

ವೆಂಕಟೇಶ್ ಎಸ್ ಸಂಪ
ಬೆಂಗಳೂರು : ಅಕ್ಷರನಾದ ಸಂಸ್ಥೆ (ರಿ) ನೀಡುವ ರಾಜ್ಯಮಟ್ಟದ ʼಪಂಪ ಪ್ರಶಸ್ತಿʼಯನ್ನು ಪತ್ರಕರ್ತ, ಸಂಪದ ಸಾಲು ಪತ್ರಿಕೆಯ ಸಂಪಾದಕ ವೆಂಕಟೇಶ್ ಎಸ್ ಸಂಪ ಅವರಿಗೆ ಎ.12ರಂದು ಮೈಸೂರಿನಲ್ಲಿ ಪ್ರದಾನ ಮಾಡಲಾಗುವುದು ಎಂದು ಅಕ್ಷರನಾದ ಸಂಸ್ಥೆಯ ಮುಖ್ಯಸ್ಥೆ ಶ್ರುತಿ ಮಧುಸೂದನ್ ಅವರು ತಿಳಿಸಿದ್ದಾರೆ.
ವೆಂಕಟೇಶ ಸಂಪ ಅವರು ಕಳೆದ 18 ವರ್ಷಗಳಿಂದ ಸಂಪದ ಸಾಲು ಪತ್ರಿಕೆ ನಡೆಸುತ್ತಿದ್ದು, ಅವರ ಕತೆ, ಕವನ, ಲೇಖನಗಳು ರಾಜ್ಯದ ಎಲ್ಲಾ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸಂಪ ಅವರು ಟಿವಿ, ರೇಡಿಯೋಗಳಲ್ಲಿ ಕಾರ್ಯಕ್ರಮಗಳನ್ನು ನೆಡೆಸಿಕೊಟ್ಟಿದ್ದು, ಸಿನಿಮಾ ಧಾರವಾಹಿಗಳಲ್ಲಿ ನಟಿಸಿದ್ದಾರೆ.
ರಕ್ತದಾನ, ನೇತ್ರದಾನ, ಪರಿಸರ ಜಾಗೃತಿ ಅಭಿಯಾನ, ನೀರು ಉಳಿಸಿ ಅಭಿಯಾನ ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯದಲ್ಲಿ ಸಂಪ ಅವರು ತೊಡಗಿದ್ದಾರೆ. "ಸಂಪದ ಫೌಂಡೇಶನ್ ಫಾರ್ ಪಬ್ಲಿಕ್ ಅವೇರ್ನಸ್" ಸಂಸ್ಥೆ ಮೂಲಕ ಹಲವಾರು ಸಾಮಾಜಿಕ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸುತ್ತಿದ್ದಾರೆ. ಇದೆಲ್ಲವನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ವೆಂಕಟೇಶ್ ಸಂಪ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಶ್ರುತಿ ಮಧುಸೂದನ್ ಅವರು ತಿಳಿಸಿದ್ದಾರೆ.





