ಪೊಕ್ಸೋ ಪ್ರಕರಣದ ಆರೋಪಿಯನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡುವುದು ಯಾವಾಗ : ಪ್ರಿಯಾಂಕ್ ಖರ್ಗೆ ಪ್ರಶ್ನೆ

ಪ್ರಿಯಾಂಕ್ ಖರ್ಗೆ
ಬೆಂಗಳೂರು : ಪೊಕ್ಸೋ ಪ್ರಕರಣದ ಆರೋಪಿಯನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡುವುದು ಯಾವಾಗ? ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಸೋಮವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಸುಮಾರು 27 ಸಾವಿರ ರೂ. ಮೌಲ್ಯದ ಕಾಫ್ ಸಿರಪ್ ದೊರಕಿದ ಹಿನ್ನೆಲೆಯಲ್ಲಿ ಕಲಬುರಗಿ ದಕ್ಷಿಣ ಮತ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಪೊಲೀಸರು ಸ್ವತಂತ್ರರಿದ್ದಾರೆ, ಪ್ರಕರಣ ದಾಖಲಾಗುತ್ತಿದ್ದಂತೆಯೇ ಕಾಂಗ್ರೆಸ್ ಪಕ್ಷದಿಂದ ಅವರನ್ನು ಉಚ್ಚಾಟಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷವಾಗಲಿ, ಸರಕಾರವಾಗಲಿ ಇದನ್ನು ಸಮರ್ಥಿಸುವುದಿಲ್ಲ. ಆದರೆ, 27 ಸಾವಿರ ರೂ. ಮೌಲ್ಯದ ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿ ಯವರು ಅದಕ್ಕಿಂತ ಗಂಭೀರ ಪ್ರಕರಣಗಳನ್ನು ಎದುರಿಸುತ್ತಿರುವ ತಮ್ಮ ಪಕ್ಷದವರ ಬಗ್ಗೆ ಕ್ರಮ ಕೈಗೊಳ್ಳುವ ನೈತಿಕತೆ ತೋರುವುದು ಯಾವಾಗ? ಪೊಕ್ಸೋ ಪ್ರಕರಣದ ಆರೋಪಿಯನ್ನು ಬಿಜೆಪಿ ಪಕ್ಷವು ಉಚ್ಚಾಟನೆ ಮಾಡುವುದು ಯಾವಾಗ? ಎಂದು ಪ್ರಶ್ನಿಸಿದ್ದಾರೆ.
ಪುತ್ತೂರಿನಲ್ಲಿ ಬಿಜೆಪಿ ನಾಯಕನ ಪುತ್ರನೊರ್ವ ಯುವತಿಯೊಬ್ಬರಿಗೆ ವಂಚಿಸಿ ಅತ್ಯಾಚಾರವೆಸಗಿದ ಬಗ್ಗೆ ಕ್ರಮ ಕೈಗೊಳ್ಳುವುದು ಯಾವಾಗ? ವಿಧಾನಸೌಧದ ಆವರಣದಲ್ಲೇ ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ, ಏಡ್ಸ್ ಇಂಜೆಕ್ಷನ್ ನೀಡಿದ ಶಾಸಕರನ್ನು ಪಕ್ಷದಿಂದ ಉಚ್ಚಾಟಿಸುವುದು ಯಾವಾಗ? ಮಹಿಳಾ ಅಧಿಕಾರಿಗಳನ್ನು ಅವಮಾನಕರವಾಗಿ ನಿಂಧಿಸುವುದನ್ನೇ ಕಾಯಕ ಮಾಡಿಕೊಂಡಿರುವ ವಿಧಾನ ಪರಿಷತ್ ಸದಸ್ಯರ ಮೇಲೆ ಕ್ರಮ ಕೈಗೊಳ್ಳುವುದು ಯಾವಾಗ, ಗಣಿ ಹಗರಣದ ಪ್ರಕರಣಗಳನ್ನು ಎದುರಿಸುತ್ತಿರುವವರನ್ನು ಬಿಜೆಪಿ ಉಚ್ಚಾಟನೆ ಮಾಡುವುದು ಯಾವಾಗ? ಎಂದು ಪ್ರಶ್ನಿಸಿದ್ದಾರೆ.
ಸುಮಾರು 27 ಸಾವಿರ ರೂಪಾಯಿ ಮೌಲ್ಯದ ಕಾಫ್ ಸಿರಪ್ ದೊರಕಿದ ಹಿನ್ನೆಲೆಯಲ್ಲಿ ಕಲಬುರಗಿ ದಕ್ಷಿಣ ಮತ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಈ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಪೊಲೀಸರು ಸ್ವತಂತ್ರರಿದ್ದಾರೆ, ಪ್ರಕರಣ ದಾಖಲಾಗುತ್ತಿದ್ದಂತೆಯೇ ಕಾಂಗ್ರೆಸ್ ಪಕ್ಷದಿಂದ ಅವರನ್ನು… https://t.co/EFVtI5oWrx
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) July 14, 2025







