Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಬೆಳಗಾವಿ | ಬಿಡಿಸಿಸಿ ಬ್ಯಾಂಕ್ ವರ್ಕರ್ಸ್...

ಬೆಳಗಾವಿ | ಬಿಡಿಸಿಸಿ ಬ್ಯಾಂಕ್ ವರ್ಕರ್ಸ್ ಯೂನಿಯನ್ ಅಧ್ಯಕ್ಷರ ಮೇಲೆ ಶಾಸಕ ಲಕ್ಷ್ಮಣ ಸವದಿ ಪುತ್ರ, ಬೆಂಬಲಿಗನಿಂದ ಹಲ್ಲೆ: ಆರೋಪ

ವಾರ್ತಾಭಾರತಿವಾರ್ತಾಭಾರತಿ4 Jan 2026 11:52 AM IST
share
ಬೆಳಗಾವಿ | ಬಿಡಿಸಿಸಿ ಬ್ಯಾಂಕ್ ವರ್ಕರ್ಸ್ ಯೂನಿಯನ್ ಅಧ್ಯಕ್ಷರ ಮೇಲೆ ಶಾಸಕ ಲಕ್ಷ್ಮಣ ಸವದಿ ಪುತ್ರ, ಬೆಂಬಲಿಗನಿಂದ ಹಲ್ಲೆ: ಆರೋಪ

ಬೆಳಗಾವಿ: ಬಿಡಿಸಿಸಿ ಬ್ಯಾಂಕ್(ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್) ವರ್ಕರ್ಸ್ ಯೂನಿಯನ್ ಅಧ್ಯಕ್ಷ ನಿಂಗಪ್ಪ ಕರೆಣ್ಣವರ ಅವರ ಮೇಲೆ ಬ್ಯಾಂಕಿನ ನಿರ್ದೇಶಕರೂ ಆಗಿರುವ ಶಾಸಕ ಲಕ್ಷ್ಮಣ ಸವದಿಯವರ ಮನೆ ಆವರಣದಲ್ಲಿ ಶನಿವಾರ ಹಲ್ಲೆ ನಡೆದಿದ್ದು, ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬ್ಯಾಂಕ್ ಕೆಲಸದ ವಿಚಾರವಾಗಿ ಚರ್ಚಿಸಲು ಶಾಸಕ ಲಕ್ಷ್ಮಣ ಸವದಿ ಮನೆಗೆ ತೆರಳಿದ್ದೆ. ಈ ವೇಳೆ ಲಕ್ಷ್ಮಣ ಸವದಿ, ಅವರ ಪುತ್ರ ಚಿದಾನಂದ ಹಾಗೂ ಬೆಂಬಲಿಗರು ಅವಾಚ್ಯ ಪದ ಬಳಸಿ ನಿಂದಿಸಿದ್ದಲ್ಲದೆ, ಹಲ್ಲೆ ನಡೆಸಿದ್ದಾರೆ ಎಂದು ನಿಂಗಪ್ಪ ಕರೆಣ್ಣವರ ಆರೋಪಿಸಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಿಂಗಪ್ಪ ಕರೆಣ್ಣ ಈ ಬಗ್ಗೆ ಪೊಲೀಸ್ ದೂರು ನೀಡಿಲ್ಲ.

ಹಲ್ಲೆಗೂ ನಮಗೂ ಸಂಬಂಧವಿಲ್ಲ: ಸವದಿ

ಯೂನಿಯನ್ ಒಳಗಿನ ಭಿನ್ನಾಭಿಪ್ರಾಯಗಳ ವಿಚಾರವಾಗಿ ನಿಂಗರಾಜ ನಮ್ಮ ಮನೆಗೆ ಬಂದಿದ್ದರು. “ಅಧ್ಯಕ್ಷರು ಹಣ ನೀಡಬೇಕು ಎಂದು ಹೇಳುತ್ತಿದ್ದಾರೆ ಎಂಬ ವಿಷಯವನ್ನು ನನ್ನ ಮುಂದಿಟ್ಟರು. ಈ ವಿಚಾರವಾಗಿ ನನ್ನ ಬಳಿ ಹೇಳಬೇಡಿ, ನಿಮ್ಮ ಒಳಜಗಳವನ್ನು ನೀವೇ ಬಗೆಹರಿಸಿಕೊಳ್ಳಿ ಎಂದು ತಿಳಿಸಿ ಹೇಳಿದ್ದೇನೆ” ಎಂದು ಸವದಿ ಹೇಳಿದರು.

ಬಳಿಕ ಮನೆ ಹೊರಗಡೆ ಇದ್ದ ತಮ್ಮ ಕಾರ್ಯಕರ್ತ ಶ್ರೀಕಾಂತ್ ಆಲಗೂರ “ಈ ವಿಚಾರವನ್ನು ಇಲ್ಲಿಗೆ ಯಾಕೆ ತಂದಿರಿ?” ಎಂದು ಪ್ರಶ್ನಿಸಿದಾಗ ನಿಂಗರಾಜ ಅವಾಚ್ಯ ಪದ ಬಳಸಿ ಜಾತಿ ನಿಂದನೆ ಮಾಡಿದ್ದಾರೆ. ಆ ಸಂದರ್ಭದಲ್ಲಿ ಇಬ್ಬರ ನಡುವೆ ನೂಕಾಟ ನಡೆದಿದೆ. ಇದು ಅವರಿಬ್ಬರ ನಡುವಿನ ಗಲಾಟೆ; ನನಗೂ ನನ್ನ ಕುಟುಂಬಕ್ಕೂ ಸಂಬಂಧ ಇಲ್ಲ ಎಂದು ಸವದಿ ಸ್ಪಷ್ಟನೆ ನೀಡಿದ್ದಾರೆ.

ನಿಂಗಪ್ಪ ಕರೆಣ್ಣವರ ವಿರುದ್ಧ ದೂರು

ಈ ಮಧ್ಯೆ ತನ್ನ ಮೇಲೆ ಬಿಡಿಸಿಸಿ ಬ್ಯಾಂಕ್ ವರ್ಕರ್ಸ್ ಯೂನಿಯನ್ ಅಧ್ಯಕ್ಷ ನಿಂಗಪ್ಪ ಕರೆಣ್ಣವರ ಹಲ್ಲೆ ಮಾಡಿರುವುದಾಗಿ ಶ್ರೀಕಾಂತ್ ಆಲಗೂರ ಎಂಬವರು ಪೊಲೀಸ್ ದೂರು ನೀಡಿದ್ದಾರೆ.

ಶಾಸಕ ಲಕ್ಷ್ಮಣ ಸವದಿಯವರ ಮನೆಯ ಆವರಣದಲ್ಲಿ ನಿಂಗಪ್ಪ ಕರೆಣ್ಣವರ ಅವಾಚ್ಯ ಪದ ಬಳಸಿ ಜಾತಿ ನಿಂದನೆ ಮಾಡಿದ್ದಲ್ಲದೆ, ತನ್ನ ಮೇಲೆ ಹಲ್ಲೆ ಮಾಡಿರುವುದಾಗಿ ದೂರಿನಲ್ಲಿ ಶ್ರೀಕಾಂತ್ ಆಲಗೂರ ಆರೋಪಿಸಿದ್ದಾರೆ.

ಬ್ಯಾಂಕ್ ನೌಕರರಿಂದ ಧರಣಿ

ನಿಂಗಪ್ಪ ಕರೆಣ್ಣವರ ಮೇಲಿನ ಹಲ್ಲೆಯನ್ನು ಖಂಡಿಸಿ, ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಬಿಡಿಸಿಸಿ ಬ್ಯಾಂಕ್ ನೌಕರರು ಶನಿವಾರ ಅಥಣಿ ಪೊಲೀಸ್ ಠಾಣೆ ಮುಂದೆ ಧರಣಿ ನಡೆಸಿದರು.

ನಗರದ ಪ್ರಮುಖ ರಸ್ತೆ ಮೂಲಕ ಮೆರವಣಿಗೆ ನಡೆಸಿದ ನೌಕರರು, ಲಕ್ಷ್ಮಣ ಸವದಿ ಕುಟುಂಬದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಅಥಣಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಿದರು.

Tags

BelagaviAssault
share
ವಾರ್ತಾಭಾರತಿ
ವಾರ್ತಾಭಾರತಿ
Next Story
X