Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಮುನಿರತ್ನ ವಿರುದ್ಧದ ಅತ್ಯಾಚಾರ, ಜಾತಿ...

ಮುನಿರತ್ನ ವಿರುದ್ಧದ ಅತ್ಯಾಚಾರ, ಜಾತಿ ನಿಂದನೆ ವಿಷಯ ಪ್ರಸ್ತಾಪಕ್ಕೆ ಆಡಳಿತ ಪಕ್ಷದ ಸದಸ್ಯರ ಪಟ್ಟು : ಪ್ರತಿಪಕ್ಷಗಳ ಸಭಾತ್ಯಾಗ

ವಾರ್ತಾಭಾರತಿವಾರ್ತಾಭಾರತಿ13 Dec 2024 4:17 PM IST
share
ಮುನಿರತ್ನ ವಿರುದ್ಧದ ಅತ್ಯಾಚಾರ, ಜಾತಿ ನಿಂದನೆ ವಿಷಯ ಪ್ರಸ್ತಾಪಕ್ಕೆ ಆಡಳಿತ ಪಕ್ಷದ ಸದಸ್ಯರ ಪಟ್ಟು : ಪ್ರತಿಪಕ್ಷಗಳ ಸಭಾತ್ಯಾಗ

ಬೆಳಗಾವಿ : ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ, ಜಾತಿ ನಿಂದನೆ ಮತ್ತು ಎಚ್‍ಐವಿ ರೋಗ ಸೋಂಕಿಸಿ ವಿವಿಧ ಗಣ್ಯರ ಜೀವಕ್ಕೆ ಅಪಾಯ ತರುವ ಪ್ರಯತ್ನ ಹಾಗೂ ವಕ್ಫ್ ವಿಚಾರ ಪ್ರಸ್ತಾಪ ಸಂಬಂಧ ಆಡಳಿತ-ವಿಪಕ್ಷಗಳ ಸದಸ್ಯರ ನಡುವೆ ಏರಿದ ಧ್ವನಿಯಲ್ಲಿ ಮಾತಿನ ಚಕಮಕಿ ನಡೆದಿದ್ದು, ಆಡಳಿತ ಪಕ್ಷದ ನಡವಳಿಕೆಗೆ ಆಕ್ಷೇಪಿಸಿ ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದ ಪ್ರಸಂಗ ನಡೆಯಿತು.

ಶುಕ್ರವಾರ ವಿಧಾನಸಭೆಯಲ್ಲಿ ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಅಲ್ಪಾವಧಿ ಚರ್ಚೆಯಡಿ ವಿಪಕ್ಷ ನಾಯಕ ಆರ್.ಅಶೋಕ್, ವಕ್ಫ್ ಆಸ್ತಿ ಗೊಂದಲ ಪ್ರಸ್ತಾಪಿಸಲು ಮುಂದಾದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಆಡಳಿತ ಪಕ್ಷದ ಸದಸ್ಯರಾದ ಪಿ.ಎಂ.ನರೇಂದ್ರಸ್ವಾಮಿ, ನಯನ ಮೋಟಮ್ಮ, ಶರತ್ ಬಚ್ಚೇಗೌಡ, ನಾವು ನಿಲುವಳಿ ಸೂಚನೆಯಡಿ ನೋಟಿಸ್ ನೀಡಿದ್ದು, ಮುನಿರತ್ನ ಜಾತಿನಿಂದನೆ ಪ್ರಕರಣ ಚರ್ಚೆಗೆ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದರು.

ಈ ಮಧ್ಯೆ ಕಂದಾಯ ಸಚಿವ ಕೃಷ್ಣಭೈರೇಗೌಡ ಮಳೆಹಾನಿ ಕುರಿತು ಸ್ವಯಂ ಪ್ರೇರಿತ ಹೇಳಿಕೆ ನೀಡಬೇಕು. ಹೀಗಾಗಿ ಅವಕಾಶ ಕಲ್ಪಿಸಿ ಎಂದು ಸ್ಪೀಕರ್‌ ಗೆ ಮನವಿ ಮಾಡಿದರು. ಸ್ಪೀಕರ್ ಖಾದರ್, ಕಂದಾಯ ಸಚಿವರ ಹೇಳಿಕೆಗೆ ಅವಕಾಶ ಮಾಡಿಕೊಟ್ಟರು. ಈ ವೇಳೆಗ ಆಡಳಿತ ಪಕ್ಷದ ಶಾಸಕರು ಏರಿದ ಧ್ವನಿಯಲ್ಲಿ ಗದ್ದಲ ಎಬ್ಬಿಸಿದರು. ಇದಕ್ಕೆ ಪ್ರತಿಯಾಗಿ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್‍ನಿಂದಲೂ ಪ್ರತಿಯಾಗಿ ಗದ್ದಲಕ್ಕೆ ಮುಂದಾದರು. ಈ ಹಂತದಲ್ಲಿ ಗದ್ದಲ ಹೆಚ್ಚಾಯಿತು.

ಆಗ ವಿಪಕ್ಷ ನಾಯಕ ಆರ್.ಅಶೋಕ್ ಈ ಸರಕಾರಕ್ಕೆ ಸರಿಯಾಗಿ ಸದನ ನಡೆಸಲು ಬರುವುದಿಲ್ಲ. ವಿಪಕ್ಷವಾಗಿ ನಾವು ಸಹಕಾರ ಕೊಡುತ್ತೇವೆಂದರೂ ಆಡಳಿತ ಪಕ್ಷದ ಶಾಸಕರೇ ಅತಿರೇಕದ ವರ್ತನೆ ಮಾಡುತ್ತಿದ್ದಾರೆ ಎಂದು ದೂರಿದರು. ಈ ವೇಳೆ ಮಾತಿನ ಚಕಮಕಿ, ಗದ್ದಲ ಹೆಚ್ಚಾದ ಹಿನ್ನೆಲೆಯಲ್ಲಿ ಆಡಳಿತ ಪಕ್ಷದ ಶಾಸಕರ ನಡವಳಿಕೆ ವಿರೋಧಿಸಿ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು. ಜೆಡಿಎಸ್ ಶಾಸಕರು ಅವರನ್ನು ಅನುಸರಿಸಿದರು.

ಬಿಜೆಪಿ ಸದಸ್ಯ ಎಸ್.ಟಿ.ಸೋಮಶೇಖರ್ ಮಾತ್ರ ಸಭಾತ್ಯಾಗ ಮಾಡದೆ ಸದನದಲ್ಲಿ ಕುಳಿತಿದ್ದರು. ಶಿವರಾಮ್ ಹೆಬ್ಬಾರ್ ಅವರ ಬಳಿ ಬಂದು ಕುಳಿತುಕೊಂಡರು. ಕಂದಾಯ ಸಚಿವ ಕೃಷ್ಣಭೈರೇಗೌಡ, ಇದು ಮಹತ್ವದ ವಿಚಾರ. ಮಳೆ ಹಾನಿಯಾಗಿದೆ. ವಿಪಕ್ಷಗಳು ಸಹಕಾರ ಮಾಡಬೇಕು. ಸಭಾತ್ಯಾಗ ಮಾಡಬಾರದು. ಹಾನಿ ಬಗ್ಗೆ ಮಾಹಿತಿ ತಿಳಿದುಕೊಳ್ಳುವ ಅಗತ್ಯವಿದೆ ಎಂದು ಮನವಿ ಮಾಡಿದರು.

Tags

Belgaum session
share
ವಾರ್ತಾಭಾರತಿ
ವಾರ್ತಾಭಾರತಿ
Next Story
X