Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಬೆಳಗಾವಿ ಅಧಿವೇಶನ | ಪಂಚಮಸಾಲಿ...

ಬೆಳಗಾವಿ ಅಧಿವೇಶನ | ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಪ್ರಹಾರ : ‘ನ್ಯಾಯಾಂಗ ತನಿಖೆ’ಗೆ ಪಟ್ಟು ಹಿಡಿದು ಬಿಜೆಪಿ ಸಭಾತ್ಯಾಗ

ವಾರ್ತಾಭಾರತಿವಾರ್ತಾಭಾರತಿ16 Dec 2024 8:01 PM IST
share
ಬೆಳಗಾವಿ ಅಧಿವೇಶನ | ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಪ್ರಹಾರ : ‘ನ್ಯಾಯಾಂಗ ತನಿಖೆ’ಗೆ ಪಟ್ಟು ಹಿಡಿದು ಬಿಜೆಪಿ ಸಭಾತ್ಯಾಗ

ಬೆಳಗಾವಿ : ಪಂಚಮಸಾಲಿ ಸಮುದಾಯದ ಮೀಸಲಾತಿಗಾಗಿ ಕೂಡಲಸಂಗಮದ ಬಸವ ಜಯಮೃತ್ಯಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ಲಾಠಿ ಪ್ರಹಾರದ ವಿಚಾರ ಸೋಮವಾರ ವಿಧಾನ ಪರಿಷತ್ ಕಲಾಪದಲ್ಲಿ ಭಾರೀ ಚರ್ಚೆಗೆ ಕಾರಣವಾಯಿತು.

ಲಾಠಿ ಚಾರ್ಜ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಿರೋಧ ಪಕ್ಷದ ಸದಸ್ಯರು ಪಟ್ಟು ಹಿಡಿದರೆ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಯಾವುದೇ ತನಿಖೆಗೆ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಇದರಿಂದಾಗಿ ಕಲಾಪ ಬಹಿಷ್ಕರಿಸಿ ಲಾಠಿ ಬೀಸುವ ಸರಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿ ವಿರೋಧ ಪಕ್ಷದ ನಾಯಕರು ಸಭಾತ್ಯಾಗ ಮಾಡಿದರು.

ಪಂಚಮಸಾಲಿ ಹೋರಾಟಗಾರರ ಮೇಲೆ ಸರಕಾರ ಲಾಠಿ ಚಾರ್ಜ್ ಮಾಡಿಸಿದ ಪ್ರಕರಣ ತನಿಖೆಗೆ ಒತ್ತಾಯಿಸಿ ವಿಧಾನ ಪರಿಷತ್‍ನಲ್ಲಿ ವಿರೋಧ ಪಕ್ಷದ ಸದಸ್ಯರು ಧರಣಿ ನಡೆಸಿದರು. ಇದಕ್ಕೆ ಸರಕಾರದ ಪರವಾಗಿ ಸೋಮವಾರ ಮಧ್ಯಾಹ್ನ ಸದನ ಆರಂಭವಾಗುತ್ತಿದ್ದಂತೆ ಉತ್ತರಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪಂಚಮಸಾಲಿ ಹೋರಾಟದಲ್ಲಿ 11 ಜನರಿಗೆ ಗಾಯಳಾಗಿದ್ದವು. ಅವರಿಗೆ ನೀಡಬೇಕಾದ ಅಗತ್ಯ ಚಿಕಿತ್ಸೆ ನೀಡಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಇನ್ನು 23 ಪೊಲೀಸರಿಗೆ ಕಲ್ಲೇಟು ಬಿದ್ದಿದೆ. ಇವರಿಗೆ ಚಿಕಿತ್ಸೆ ನೀಡಲಾಗಿದೆ. ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿ ಬಂತು. ಆದರೆ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅವರು ಕರ್ತವ್ಯ ನಿರ್ವಹಿಸಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇದಕ್ಕೆ ವಿರೋಧಿಸಿದ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ನಾಲ್ವರು ಗಾಯಾಳುಗಳು ಐಸಿಯುದಲ್ಲಿದ್ದರು. ರಾತ್ರೋರಾತ್ರಿ ಅವರನ್ನು ಬೇರೆ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂಬ ಮಾಹಿತಿ ತಿಳಿದಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು. ಆದರೆ, ನಮ್ಮ ಹಕ್ಕು ಕೇಳಿ ಪ್ರತಿಭಟಿಸುವಾಗ ಈ ರೀತಿ ಲಾಠಿ ಚಾರ್ಜ್ ಮಾಡಿದ್ದು ಸರಿಯಲ್ಲ. ನಮ್ಮ ಮೇಲೆ ಗೋಲಿಬಾರ್ ಮಾಡಲೂ ಸರಕಾರ ಸಿದ್ಧವಾಗಿತ್ತು ಎಂದು ಪಂಚಮಸಾಲಿ ಸ್ವಾಮೀಜಿ ಹೇಳಿದ್ದಾರೆ. ಹಾಗಾಗಿ, ಸರಕಾರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಸದಸ್ಯ ಸಿ.ಟಿ.ರವಿ ಮಾತನಾಡಿ, ಪಂಚಮಸಾಲಿ ಹೋರಾಟ ಏಕಾಏಕಿ ಶುರುವಾಗಿದ್ದಲ್ಲ. ಸರಕಾರವೇ ಅನುಮತಿ ನೀಡಿದೆ. ಅಲ್ಲದೇ ನಾಲ್ಕೈದು ವರ್ಷಗಳಿಂದ ನಡೆಯುತ್ತಿರುವ ಹೋರಾಟವಿದು. ಸರಕಾರ ನಡೆಸಿರುವ ಲಾಠಿ ಚಾರ್ಜ್ ಸಮರ್ಥಿಸಿಕೊಂಡು, ತನಿಖೆ ಮಾಡುವ ಅಗತ್ಯವಿಲ್ಲ ಎನ್ನುವುದು ಸರ್ವಾಧಿಕಾರಿ ಮನೋಭಾವನೆ ಆಗುತ್ತದೆ. ಪಂಚಮಸಾಲಿಗರು ಯಾವುದೇ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಬಂದಿರಲಿಲ್ಲ. ಮಾರಕಾಸ್ತ್ರಗಳನ್ನು ತೆಗೆದುಕೊಂಡು ಪೊಲೀಸ್ ಠಾಣೆಗಳ ಮೇಲೆ ದಾಳಿ ಮಾಡಿದವರಿಗೆ ಅಮಾಯಕರು ಎನ್ನುತ್ತೀರಿ. ಅವರನ್ನು ಜೈಲಿನಿಂದ ಬಿಡುಗಡೆಗೊಳಿಸಿದ್ದಿರಿ ಎಂದು ಕಿಡಿಕಾರಿದರು.

ಈ ವೇಳೆ ಕಾಂಗ್ರೆಸ್‍ನ ಹರಿಪ್ರಸಾದ್, ನಜೀರ್ ಅಹ್ಮದ್, ಯತೀಂದ್ರ ಸೇರಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸಿ.ಟಿ.ರವಿ ಮಾತಿಗೆ ಕೆಂಡಾಮಂಡಲರಾದರು. ಡಾ.ಜಿ.ಪರಮೇಶ್ವರ್ ಅವರು ಪ್ರತಿಕ್ರಿಯಿಸಿ, ನ್ಯಾಯಾಂಗ ತನಿಖೆ ಅಥವಾ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ಅಗತ್ಯವಿಲ್ಲ ಎಂದು ಪುನರುಚ್ಚರಿಸಿದರು. ನ್ಯಾಯಾಂಗ ತನಿಖೆ ಸೇರಿ ಯಾವುದೇ ತನಿಖೆ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವರು ಹೇಳುತ್ತಿದ್ದಂತೆ ಪ್ರತಿಪಕ್ಷದ ಸದಸ್ಯರು ವಿರೋಧ ವ್ಯಕ್ತಪಡಿಸಿ, ಕಲಾಪ ಬಹಿಷ್ಕರಿಸಿ ಸದನದದಿಂದ ಹೊರನಡೆದರು.

‘ಪಂಚಮಸಾಲಿ ಹೋರಾಟದ ಲಾಠಿ ಚಾರ್ಜ್ ಬಗ್ಗೆ ಯಾವುದೇ ತನಿಖೆ ಇಲ್ಲ. ಪಂಚಮಸಾಲಿ ಹೋರಾಟದ ಕುರಿತಂತೆ ಪ್ರತಿಭಟನಾಕಾರರಿಗೆ ಪ್ರತಿಭಟನೆಗೆ ಜಾಗ ನಿಗದಿಪಡಿಸಲಾಗಿತ್ತು, 10ಸಾವಿರ ಮಂದಿ ಸೇರಲು ಅವಕಾಶ ನೀಡಲಾಗಿತ್ತು. ಅವರ ಮನವಿ ಆಲಿಸಲು 3 ಮಂದಿ ಸಚಿವರನ್ನು ಕಳುಹಿಸಲಾಗಿತ್ತು. ಆದರೆ ಪ್ರತಿಭಟನೆ ಸ್ಥಳಕ್ಕೆ ಮುಖ್ಯಮಂತ್ರಿಗಳು ಬರಬೇಕೆಂದು ಪಟ್ಟು ಹಿಡಿದು, ಸುವರ್ಣ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದಾಗ ಕಾನೂನು ಸುವ್ಯವಸ್ಥೆ ಕಾಪಾಡಲು ಲಘು ಲಾಠಿ ಪ್ರಹಾರ ನಡೆಸಲಾಗಿದ್ದು, ಈ ಪ್ರಕರಣದಲ್ಲಿ ಕೈಗೊಂಡ ಕ್ರಮ ತೆರೆದ ಪುಸ್ತಕದಂತೆ ಇದ್ದು ಯಾವುದೇ ತನಿಖೆ ನಡೆಸುವ ಅಗತ್ಯವೇ ಇಲ್ಲ’

-ಡಾ.ಜಿ.ಪರಮೇಶ್ವರ್, ಗೃಹ ಸಚಿವ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X