Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಬೆಳಗಾವಿ ಅಧಿವೇಶನ | ತುಳಸೀಗೌಡ ನಿಧನಕ್ಕೆ...

ಬೆಳಗಾವಿ ಅಧಿವೇಶನ | ತುಳಸೀಗೌಡ ನಿಧನಕ್ಕೆ ಉಭಯ ಸದನಗಳಲ್ಲಿ ಸಂತಾಪ

ವಾರ್ತಾಭಾರತಿವಾರ್ತಾಭಾರತಿ17 Dec 2024 6:20 PM IST
share
ಬೆಳಗಾವಿ ಅಧಿವೇಶನ | ತುಳಸೀಗೌಡ ನಿಧನಕ್ಕೆ ಉಭಯ ಸದನಗಳಲ್ಲಿ ಸಂತಾಪ

ಬೆಳಗಾವಿ (ಸುವರ್ಣ ವಿಧಾನಸೌಧ) : ವೃಕ್ಷಮಾತೆ ಎಂದೇ ಖ್ಯಾತಿಗಳಿದ್ದ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕು ಮೂಲದ ತುಳಸೀ ಗೌಡ ಅವರ ನಿಧನಕ್ಕೆ ವಿಧಾನ ಮಂಡಲ ಉಭಯ ಸದನಗಳಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಮಂಗಳವಾರ ಬೆಳಗ್ಗೆ ಸದನ ಸೇರಿದಾಗ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸಂತಾಪ ಸೂಚನೆ ನಿರ್ಣಯವನ್ನು ಮಂಡಿಸಿ ತುಳಿಸೀ ಗೌಡ ಅವರು ನಿಧನ ಹೊಂದಿರುವುದನ್ನು ವಿಷಾದದಿಂದ ಸದನಕ್ಕೆ ತಿಳಿಸಿದರು. ಅಂಕೋಲ ತಾಲೂಕಿನ ಹೊನ್ನಹಳ್ಳಿಯ ತುಳಸೀ ಗೌಡ ಹಾಲಕ್ಕಿ ಬುಡಕಟ್ಟು ಸಮುದಾಯದ ಬಡ ಕುಟುಂಬದಲ್ಲಿ ಜನಿಸಿದ್ದು ಪರಿಸರದ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು.

ಮರಗಳೊಂದಿಗೆ ಅನುಭವ ಹಾಗೂ ಅಪಾರ ಜ್ಞಾನ ಹೊಂದಿದ್ದ ಅವರು, ಅರಣ್ಯದ ಎನ್‍ಸೈಕ್ಲೋಪಿಡಿಯಾ, ವೃಕ್ಷಮಾತೆ ಎಂದೇ ಪ್ರಖ್ಯಾತರಾಗಿದ್ದರು. 300ಕ್ಕೂ ಹೆಚ್ಚು ಮರಗಳ ಪ್ರಭೇದಗಳನ್ನು ತಿಳಿದಿದ್ದ ಅವರು, ನಿಂತ ಜಾಗದಲ್ಲೇ ಅವುಗಳ ಬಗ್ಗೆ ವಿವರಿಸುವಷ್ಟು ಜ್ಞಾನ ಹೊಂದಿದ್ದರು. ಅರಣ್ಯ ಇಲಾಖೆ ಜೊತೆ ಕೈಜೋಡಿಸಿ 65 ವರ್ಷಗಳಿಂದ ಪರಿಸರ ಸಂರಕ್ಷಣೆ ಮತ್ತು ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿದ್ದರು ಎಂದು ಸ್ಮರಿಸಿದರು.

ಬಾಲ್ಯದಲ್ಲೇ ವಿಧವೆಯಾದ ತುಳಸಿಗೌಡ ಮರಗಳಲ್ಲೇ ಕುಟುಂಬ ಹಾಗೂ ಮಕ್ಕಳನ್ನು ಕಂಡವರು. ಒಂದು ಕಾಲದಲ್ಲಿ ಕಾಡಿನಿಂದ ಕಟ್ಟಿಗೆ ತರುತ್ತಿದ್ದ ಅವರು, ಇಂದು ಕಾಡನ್ನೇ ನಿರ್ಮಿಸಿ ಮಾದರಿಯಾಗಿದ್ದಾರೆ. ಲಕ್ಷಾಂತರ ಮರಗಳನ್ನು ನೆಟ್ಟು ಪೋಷಿಸಿದ್ದ ಅವರ ಪರಿಸರ ಪ್ರೇಮಕ್ಕಾಗಿ 2021ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಲಾಗಿತ್ತು. ರಾಜ್ಯೋತ್ಸವ, ಪ್ರಿಯದರ್ಶಿನಿ, ವೃಕ್ಷಮಿತ್ರ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಸಂದಿವೆ. ವೃಕ್ಷಗಳ ಆರೈಕೆ ಮೂಲಕ ಪ್ರಸಿದ್ದಿ ಪಡೆದಿದ್ದ 81 ವರ್ಷದ ತುಳಸೀ ಗೌಡ ನಿನ್ನೆ ನಿಧನ ಹೊಂದಿದ್ದಾರೆ ಎಂದು ತಿಳಿಸಿದರು.

ನಿರ್ಣಯವನ್ನು ಬೆಂಬಲಿಸಿ ಸರಕಾರದ ಪರವಾಗಿ ಮಾತನಾಡಿದ ಕಾನೂನು ಸಚಿವ ಎಚ್.ಕೆ.ಪಾಟೀಲ್, ‘ತುಳಸೀಗೌಡಗೆ ಅರಣ್ಯದ ಮೇಲೆ ಪ್ರೀತಿಯಿತ್ತು. 300ಕ್ಕೂ ಹೆಚ್ಚು ತಳಿಗಳ ಬಗ್ಗೆ ತಿಳುವಳಿಕೆ ಹೊಂದಿದ್ದರು. ವೃಕ್ಷ ಮಾತೆ ಎಂದು ಕರೆಯುವಷ್ಟರ ಮಟ್ಟಿಗೆ ಅವರು ವೃಕ್ಷಗಳ ಆರೈಕೆಗೆ ತಮ್ಮನ್ನು ತಾವು ಅರ್ಪಣೆ ಮಾಡಿಕೊಂಡಿದ್ದರು. ಅವರಿಗೆ ಶ್ರದ್ದಾಂಜಲಿ ಸಲ್ಲಿಸುತ್ತೇನೆ ಎಂದು ಹೇಳಿದರು.

ಇದಕ್ಕೆ ಧ್ವನಿಗೂಡಿಸಿದ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ‘ತುಳಸೀ ಗೌಡ ಇಂದು ನಮ್ಮ ನಡುವೆ ಇಲ್ಲ. ಬಡ ಕುಟುಂಬದಲ್ಲಿ ಜನಿಸಿದ್ದರೂ ವೃಕ್ಷ ಬೆಳೆಸುವ ಕಾರ್ಯಕ್ಕೆ ನಾಂದಿ ಹಾಡಿದ್ದಾರೆ. ಸತ್ತ ಮೇಲೂ ಕೆಲವರು ಬದುಕುತ್ತಾರೆ. ಅಂತಹವರ ಸಾಲಿಗೆ ಇವರು ಸೇರುತ್ತಾರೆ ಎಂದರು. ಅನಂತರ ಸದನದಲ್ಲಿ ಒಂದು ನಿಮಿಷ ಮೌನಾಚರಣೆ ಮಾಡಿ ಶ್ರದ್ದಾಂಜಲಿ ಸಲ್ಲಿಸಲಾಯಿತು. ಸಂತಾಪ ಸೂಚಕ ನಿರ್ಣಯವನ್ನು ಅವರ ಕುಟುಂಬ ವರ್ಗದವರಿಗೆ ಕಳುಹಿಸಿ ಕೊಡುವುದಾಗಿ ಸ್ಪೀಕರ್ ಖಾದರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X