Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಬೆಳಗಾವಿ | ಸುವರ್ಣಸೌಧದಲ್ಲಿ ಚಳಿಗಾಲದ...

ಬೆಳಗಾವಿ | ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭ

ಪ್ರಮಾಣವಚನ ಸ್ಪೀಕರಿಸಿದ ನೂತನ ಶಾಸಕರು

ವಾರ್ತಾಭಾರತಿವಾರ್ತಾಭಾರತಿ9 Dec 2024 11:57 AM IST
share
ಬೆಳಗಾವಿ | ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭ

ಬೆಳಗಾವಿ : ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನದ ಸೋಮವಾರದಿಂದ ಆರಂಭವಾಗಿದೆ. ಸ್ಪೀಕರ್ ಯು.ಟಿ.ಖಾದರ್ ನೇತೃತ್ವದಲ್ಲಿ ಕಲಾಪ ನಡೆಯಲಿದ್ದು, ʼವಂದೇ ಮಾತರಂʼ ಗಾಯನದ ಮೂಲಕ ಮೂಲಕ ಸದನಕ್ಕೆ ಚಾಲನೆ ದೊರೆಯಿತು.

ಅಧಿವೇಶನದ ಕಲಾಪಕ್ಕೂ ಮುನ್ನ ಅಗಲಿದ ವಿಧಾನ ಸಭೆಯ ಮಾಜಿ ಸದಸ್ಯರು ಹಾಗೂ ನಾಡಿನ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.

ಸಭಾಧ್ಯಕ್ಷ ಯು.ಟಿ.ಖಾದರ್ ಅವರು ವಿಧಾನಸಭೆಯ ಮಾಜಿ ಉಪ ಸಭಾಧ್ಯಕ್ಷ ಹಾಗೂ ಸಚಿವರಾಗಿದ್ದ ಮನೋಹರ ಹನುಮಂತಪ್ಪ ತಹಶೀಲ್ದಾರ್, ಮಾಜಿ ಸಚಿವ ಕೆ.ಹೆಚ್.ಶ್ರೀನಿವಾಸ್, ಮಾಜಿ ಸದಸ್ಯರುಗಳಾದ ಬಸವರಾಜು ಎ.ಎಸ್., ಲಕ್ಷ್ಮೀ ನಾರಾಯಾಣ.ಕೆ ಹಾಗೂ ವೆಂಕಟರೆಡ್ಡಿ ಮುದ್ನಾಳ್, ಖ್ಯಾತ ಕೈಗಾರಿಕೋದ್ಯಮಿ ರತನ್ ನವಾಲ್ ಟಾಟಾ ಹಾಗೂ ಕಲಬುರಗಿಯ ಸೈಯದ್ ಶಾಹ್‌ ಖುಸ್ರೋ ಹುಸೇನಿ ಅವರ ನಿಧನದ ಸಂತಾಪ ಸೂಚನೆ ನಿರ್ಣಯವನ್ನು ಸದನದ ಮುಂದೆ ಮಂಡಿಸಿದರು.

ಸಂತಾಪ ಸೂಚನೆ ನಿರ್ಣಯವನ್ನು ಬೆಂಬಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಎಚ್.ಕೆ.ಪಾಟೀಲ್, ವಿಪಕ್ಷ ನಾಯಕ ಆರ್.ಅಶೋಕ್, ಜೆಡಿಎಸ್ ನಾಯಕ ಸುರೇಶ್‍ಬಾಬು ಸೇರಿದಂತೆ ಇನ್ನಿತರ ಸದಸ್ಯರು ಅಗಲಿದ ಗಣ್ಯರ ಬಗ್ಗೆ ಮಾತನಾಡಿ , ಅವರ ಸರಳತೆ, ಮುತ್ಸದ್ಧಿತನ, ಅವರೊಂದಿಗಿನ ತಮ್ಮ ಒಡನಾಟವನ್ನು ಸ್ಮರಿಸಿದರು.

ಇತ್ತೀಚೆಗೆ 3 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರು, ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನ ಪ್ರಮಾಣ ವಚನ ಸ್ವೀಕರಿಸಿದರು.

ಸಂಡೂರು ಕ್ಷೇತ್ರದಿಂದ ಆಯ್ಕೆಯಾದ ಅನ್ನಪೂರ್ಣ ತುಕಾರಾಂ, ಚನ್ನಪಟ್ಟಣ ಕ್ಷೇತ್ರದಿಂದ ಆಯ್ಕೆಯಾದ ಸಿ.ಪಿ.ಯೋಗೇಶ್ವರ್ ಹಾಗೂ ಶಿಗ್ಗಾಂವಿ ಕ್ಷೇತ್ರದಿಂದ ಆಯ್ಕೆಯಾದ ಯಾಸಿರ್ ಅಹಮದ್ ಖಾನ್ ಪ್ರಮಾಣ ವಚನ ಸ್ವೀಕರಿಸಿದರು. ಸಭಾಧ್ಯಕ್ಷ ಯು.ಟಿ.ಖಾದರ್ ನೂತನ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.

ವಿಧಾನ ಮಂಡಲದ ಉಭಯ ಸದನದಲ್ಲಿ ವಿವಿಧ ವಿಚಾರಗಳು ಚರ್ಚೆಯಾಗಲಿದ್ದು, ಆಡಳಿತ ಹಾಗೂ ವಿಪಕ್ಷಗಳ ನಡುವೆ ವಾಗ್ಯುದ್ಧವೇ ನಡೆಯುವ ಸಾಧ್ಯತೆ ಇದೆ. ಇಂದಿನಿಂದ ಡಿ.19 ರವರೆಗೂ ಬೆಳಗಾವಿಯ ಸುವರ್ಣಸೌಧದಲ್ಲಿ ಕಲಾಪ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X