Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ʼಗೃಹಲಕ್ಷ್ಮಿʼ ಯೋಜನೆ ಜಾರಿ ನಿಜಕ್ಕೂ...

ʼಗೃಹಲಕ್ಷ್ಮಿʼ ಯೋಜನೆ ಜಾರಿ ನಿಜಕ್ಕೂ ಸಾರ್ಥಕ : ಲಕ್ಷ್ಮಿ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ18 Dec 2024 4:27 PM IST
share
ʼಗೃಹಲಕ್ಷ್ಮಿʼ ಯೋಜನೆ ಜಾರಿ ನಿಜಕ್ಕೂ ಸಾರ್ಥಕ : ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ (ಸುವರ್ಣ ವಿಧಾನಸೌಧ) : ಮನೆಯ ಯಜಮಾನಿಗೆ ಮಾಸಿಕ 2ಸಾವಿರ ರೂ.ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ ಯೋಜನೆ’ ಅನೇಕ ರೂಪದಲ್ಲಿ ಬಡ ಮಹಿಳೆಯರಿಗೆ ಸಹಾಯವಾಗುತ್ತಿದೆ. ಈ ಯೋಜನೆ ಜಾರಿಗೆ ತಂದಿದ್ದಕ್ಕೂ ಸಾರ್ಥಕ ಎನಿಸುತ್ತದೆ’ ಎಂದು ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬಣ್ಣಿಸಿದ್ದಾರೆ.

ಬುಧವಾರ ಗೃಹಲಕ್ಷ್ಮೀ ಯೋಜನೆಯ ಆಯ್ದ ಫಲಾನುಭವಿಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದರು. ಈ ವೇಳೆ ಮಾತನಾಡಿದ ಅವರು, ಗೃಹಲಕ್ಷ್ಮೀಯರ ಜೊತೆಗೆ ತೃತೀಯ ಲಿಂಗಿಯರಿಗೂ ಗೃಹಲಕ್ಷ್ಮೀ ಯೋಜನೆಯ ಹಣ ತಲುಪಿಸುವ ಕೆಲಸ ಆಗುತ್ತಿದೆ. ನಮ್ಮ ಸರಕಾರದ ಐದು ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ತಲುಪಬೇಕೆಂಬುದೇ ನಮ್ಮ ಆಶಯ ಎಂದರು.

ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ, ಎಲ್ಲರಿಗೂ ಯೋಜನೆಗಳನ್ನು ತಲುಪಿಸುವುದೇ ನಮ್ಮ ಉದ್ದೇಶ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರಕಾರದ ಯೋಜನೆಗಳು ತಲುಪವಂತಾಗಬೇಕು. ಗೃಹಲಕ್ಷ್ಮೀ ಯೋಜನೆ ಮೂಲಕ ಪ್ರತಿ ತಿಂಗಳು ಸಿಗುವ 2ಸಾವಿರ ರೂ.ಲಕ್ಷಾಂತರ ಹೆಣ್ಣುಮಕ್ಕಳಿಗೆ ಸಹಾಯವಾಗಿದೆ. ಒಬ್ಬರು ಗೃಹಲಕ್ಷ್ಮಿ ಯೋಜನೆಯ ಹಣದಿಂದ ಗ್ರಂಥಾಲಯ ತೆರೆದರೆ, ಗದಗ ಗಜೇಂದ್ರದಢದ ಅತ್ತೆ-ಸೊಸೆ ಸೇರಿ ತಮ್ಮ ಜಮೀನಿನಲ್ಲಿ ಕೊಳವೆಬಾವಿ ಕೊರೆಸಿದ್ದಾರೆ. ಕಣ್ಣಿನ ಶಸ್ತ್ರಚಿಕಿತ್ಸೆ, ವೈದ್ಯಕೀಯ ಖರ್ಚು ವೆಚ್ಚಗಳು, ಮಕ್ಕಳಿಗೆ ಶಾಲಾ ಶುಲ್ಕ ಪಾವತಿ, ತಮ್ಮ ಮಕ್ಕಳಿಗೆ ದ್ವಿಚಕ್ರ ವಾಹನ ಕೊಡಿಸಿದ್ದು ಸೇರಿದಂತೆ ಹಲವು ರೀತಿಯಲ್ಲಿ ಸದ್ಬಳಕೆ ಆಗುತ್ತಿದೆ ಎಂದು ಅವರು ತಿಳಿಸಿದರು.

ದೃಷ್ಟಿ ತೆಗೆದ ಮಂಗಳಮುಖಿಯರು :

ಮಂಗಳಮುಖಿಯರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ದೃಷ್ಟಿ ತೆಗೆದು ಶುಭ ಹಾರೈಸಿದರು. ‘ನಿಮ್ಮಿಂದ ನಮಗೆ ಪ್ರತಿ ತಿಂಗಳು ಎರಡು ಸಾವಿರ ರೂ.ಸಿಗುತ್ತಿದೆ. ನಿಮಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು ಎಂದು ಸಚಿವೆ ಹೆಬ್ಬಾಳ್ಕರ್ ಅವರಿಗೆ ಕೈಮುಗಿದ ಧನ್ಯವಾದ ಅರ್ಪಿಸಿದರು.

ಹೊಸ ಬೈಕ್ ದರ್ಶನ :

‘ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಬಾಗವ್ವ ಸಣ್ಣಕ್ಕಿ ಗೃಹಲಕ್ಷ್ಮಿ ಯೋಜನೆಯ ಹಣ ಕೂಡಿಟ್ಟು, ತಮ್ಮ ಮಗನಿಗೆ ದ್ವಿಚಕ್ರ ವಾಹನ ಕೊಡಿಸಲು ನೀಡಿರುವ ಹಿನ್ನೆಲೆಯಲ್ಲಿ ಅವರ ಮಗ ಬೆಳಗಾವಿಯ ಸಚಿವರ ನಿವಾಸಕ್ಕೆ ಆಗಮಿಸಿ, ಬೈಕ್ ತೋರಿಸಿ, ಖುಷಿ ಹಂಚಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X