Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ʼಅನುಭವ ಮಂಟಪ ಕಲಾಕೃತಿʼ ಮೇಲ್ಮನೆಯಲ್ಲಿ...

ʼಅನುಭವ ಮಂಟಪ ಕಲಾಕೃತಿʼ ಮೇಲ್ಮನೆಯಲ್ಲಿ ಚರ್ಚೆಗೆ ನಕಾರ : ಶಶೀಲ್ ನಮೋಶಿ ಬೇಸರ

ವಾರ್ತಾಭಾರತಿವಾರ್ತಾಭಾರತಿ17 Dec 2024 11:35 PM IST
share
ʼಅನುಭವ ಮಂಟಪ ಕಲಾಕೃತಿʼ ಮೇಲ್ಮನೆಯಲ್ಲಿ ಚರ್ಚೆಗೆ ನಕಾರ : ಶಶೀಲ್ ನಮೋಶಿ ಬೇಸರ

ಬೆಳಗಾವಿ : ಸುವರ್ಣ ಸೌಧದಲ್ಲಿ ಅಳವಡಿಸಲಾಗಿರುವ ಅನುಭವ ಮಂಟಪದ ಮೂಲ ಕಲಾಕೃತಿ ವಿಷಯವಾಗಿ ಚರ್ಚೆಗೆ ಸಭಾಪತಿ ಬಸವರಾಜ ಹೊರಟ್ಟಿ ನಿರಾಕರಿಸಿದರು.

ಮೂಲ ಕಲಾಕೃತಿ ರಚಿಸಿದವರಿಗೆ ಅಗೌರವ ಮಾಡಲಾಗಿದೆ ಎಂದು ಬಿಜೆಪಿ ಸದಸ್ಯ ಶಶೀಲ್ ನಮೋಶಿ ಶೂನ್ಯವೇಳೆಯಲ್ಲಿ ಈ ವಿಷಯವಾಗಿ ಚರ್ಚೆಗೆ ಅವಕಾಶ ಕೋರಿದ್ದರು. ಚರ್ಚೆಯ ಪಟ್ಟಿಯಲ್ಲಿ ಅಡಕವಾಗಿ, ಈ ವಿಷಯ ಪ್ರಸ್ತಾಪಿಸಲು ನಮೋಶಿ ಅಣಿಯಾಗುತ್ತಿದ್ದಂತೆ, ಸಭಾಪತಿ ಬಸವರಾಜ ಹೊರಟ್ಟಿ ಅವರು, ಈ ಬಗ್ಗೆ ಚರ್ಚೆ ಬೇಡ, ಕೆಳಮನೆಯ ವಿಷಯವಾಗಿ ಇಲ್ಲಿ ಚರ್ಚಿಸುವುದು ಸೂಕ್ತವಲ್ಲ, ಮುಖ್ಯಮಂತ್ರಿಗಳೊಂದಿಗೆ ನಿಮ್ಮ ಸಮ್ಮುಖದಲ್ಲಿ ಮಾತನಾಡೋಣ ಎಂದರು.

ಆಗ ನಮೋಶಿ, ಈಗಾಗಲೇ ಪಟ್ಟಿಯಲ್ಲಿ ಸ್ವೀಕರಿಸಿದ್ದೀರಿ, ವಿಷಯ ಪ್ರಸ್ತಾಪಿಸುವೆ, ಸರಕಾರದ ನಿಲುವಾದರೂ ಗೊತ್ತಾಗುತ್ತದೆ ಚರ್ಚೆಗೆ ಅವಕಾಶ ಕೊಡಿ ಎಂದು ಕೋರಿದರು. ಆದರೆ ಈ ವಿಷಯವಾಗಿ ಸಭಾಪತಿ ಹೊರಟ್ಟಿ ಅವಕಾಶ ನೀಡಲಿಲ್ಲ.

ನಂತರ ಲಿಖಿತವಾಗಿ ಈ ಬಗ್ಗೆ ಬೇಸರ ಹೊರಹಾಕಿರುವ ಸದಸ್ಯ ಶಶೀಲ್ ನಮೋಶಿ, ಅನುಭವ ಮಂಟಪದ ಮೂಲ ಕಲಾಕೃತಿ ರಚಿಸುವ ಕಲಾವಿದರಿಗೆ ಗೌರವ ದೊರಕಬೇಕು, ಕಲಬುರ್ಗಿ ಜಿಲ್ಲೆಯ ಜೆ.ಎಸ್.ಖಂಡೇರಾವ್ ಅವರು ಮೂಲ ಕಲಾಕೃತಿ ರಚಿಸಿದ್ದಾರೆ, ಆದರೆ, ಅವರ ಅನುಮತಿ ಇಲ್ಲದೇ ಅವರ ಗಮನಕ್ಕೂ ತಾರದೇ ನಕಲಿ ಕಲಾಕೃತಿಯನ್ನು ಅಳವಡಿಕೆ ಮಾಡಿರುವುದು ನೋವಿನ ಸಂಗತಿ, ಈ ವಿಷಯವಾಗಿಯೇ ನಾನು ಮಾತನಾಡಲು ಬಯಸಿದ್ದೆ, ಆದರೆ ಸಭಾಪತಿಗಳು ವ್ಯಾಪ್ತಿಗೆ ಬರುವುದಿಲ್ಲ ಎಂದು ಚರ್ಚೆಗೆ ಅವಕಾಶ ನೀಡದಿರುವುದು ಸಹ ನೋವು ತರಿಸಿದೆ, ಈ ನಡೆಯಿಂದಾಗಿ ನನಗೆ, ಮೂಲ ಕಲಾಕೃತಿ ರಚಿಸಿದ ಕಲಾವಿದರಿಗೆ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜನತೆ ಅನ್ಯಾಯವಾದಂತಾಗಿದೆ ಎಂದು ನಮೋಶಿ ಬೇಸರ ಹೊರಹಾಕಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X