Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | 187ನೇ ವಿಶ್ವ ಛಾಯಾಗ್ರಹಣ...

Ballari | 187ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ27 Aug 2026 9:37 PM IST
share
Ballari | 187ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮ

ಸಂಡೂರು/ಬಳ್ಳಾರಿ: ಛಾಯಾಗ್ರಹಣ ಎನ್ನುವುದು ಕೇವಲ ಕ್ಯಾಮೆರಾದಿಂದ ಚಿತ್ರ ಸೆರೆಹಿಡಿಯುವುದಲ್ಲ; ಸೂಕ್ತ ದೃಷ್ಟಿಕೋನ, ಸಮಯಪ್ರಜ್ಞೆ ಹಾಗೂ ನಿಖರತೆಯಿಂದ ಕ್ಷಣಗಳನ್ನು ಶಾಶ್ವತವಾಗಿಸುವ ಕಲೆ ಎಂದು ಗಣ್ಯರು ಅಭಿಪ್ರಾಯಪಟ್ಟರು.

ಸಂಡೂರು ಫೋಟೋಗ್ರಾಫರ್ಸ್ ಮತ್ತು ವಿಡಿಯೋಗ್ರಾಫರ್ಸ್ ಸಂಘ (ರಿ.) ಆಶ್ರಯದಲ್ಲಿ ಪಟ್ಟಣದ ಆದರ್ಶ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದ 187ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, ಛಾಯಾಗ್ರಾಹಕರ ವೃತ್ತಿಯ ಮಹತ್ವ ಹಾಗೂ ಅವರ ಪರಿಶ್ರಮವನ್ನು ಶ್ಲಾಘಿಸಿದರು.

ಶ್ರೀಮನ್ ಮಹಾರಾಜ ನಿರಂಜನ ಜಗದ್ಗುರು ಫಕೀರಡಿಂಗಾಲೇಶ್ವರ ಮಹಾಸ್ವಾಮಿಗಳು ಹಾಗೂ ಶ್ರೀ ಮ.ನಿ.ಪ್ರ. ಪ್ರಭುಮಹಾಸ್ವಾಮಿಗಳ ದಿವ್ಯಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮವನ್ನು ಸಂಡೂರು ವಿಧಾನಸಭಾ ಕ್ಷೇತ್ರದ ಶಾಸಕಿ ಅನ್ನಪೂರ್ಣ ಈ. ತುಕಾರಾಮ್ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕ ಡಾ. ಪಿ.ಎಸ್. ಹರ್ಷ, ಐಪಿಎಸ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡಿದ್ದರು. ಸಂಡೂರು ಫೋಟೋಗ್ರಾಫರ್ಸ್ ಮತ್ತು ವಿಡಿಯೋಗ್ರಾಫರ್ಸ್ ಸಂಘದ ತಾಲೂಕು ಅಧ್ಯಕ್ಷ ವಿನಯಕುಮಾರ ಸಾರಂಗಮಠ ಅಧ್ಯಕ್ಷತೆ ವಹಿಸಿದ್ದರು.

ಕನ್ನಡ ಸಾಹಿತ್ಯ ಪರಿಷತ್ ಸಂಡೂರು ತಾಲೂಕು ಅಧ್ಯಕ್ಷ ಡಾ. ಬಿ. ನಾಗನಗೌಡ, ಕರ್ನಾಟಕ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಹೆಚ್.ಎಸ್. ನಾಗೇಶ್, ರಾಜ್ಯ ಕಾರ್ಯದರ್ಶಿ ನಾಗರಾಜ್, ಬಳ್ಳಾರಿ ಜಿಲ್ಲಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನಿಕಟಪೂರ್ವ ಜಿಲ್ಲಾಧ್ಯಕ್ಷ ನಾಡಗೌಡ ಚಂದ್ರಮೋಹನ್ ಹಾಗೂ ಕೆಎಫ್‌ಎ ಮಾಜಿ ನಿರ್ದೇಶಕ ಕೆ. ವೀರೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ವಿದ್ಯಾರ್ಥಿಗಳಿಗೆ ಸಮಯಪ್ರಜ್ಞೆ ಮತ್ತು ಗುರಿಯ ಪಾಠ :

ಕಾರ್ಯಕ್ರಮಕ್ಕೆ ಕೆಲ ಗಣ್ಯರು ತಡವಾಗಿ ಆಗಮಿಸಿದರೂ, ಶಾಲಾ-ಕಾಲೇಜು ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ಆಗಮಿಸಿ ಕಾಯುತ್ತಿದ್ದುದನ್ನು ಉಲ್ಲೇಖಿಸಿದ ಸ್ವಾಮೀಜಿಗಳು, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಸಮಯಪ್ರಜ್ಞೆ ಅತ್ಯಂತ ಮುಖ್ಯ ಎಂದು ಹೇಳಿದರು.

ಜೀವನದಲ್ಲಿ ದೊಡ್ಡ ಗುರಿಗಳನ್ನು ಹೊಂದಿ, ಅವುಗಳ ಸಾಧನೆಗಾಗಿ ದೃಢ ಸಂಕಲ್ಪದಿಂದ ಮುನ್ನಡೆಯಬೇಕು. ಐಪಿಎಸ್, ತಹಸೀಲ್ದಾರ್, ಬಿಇಒ, ಪಿಎಸ್‌ಐ ಸೇರಿದಂತೆ ಉನ್ನತ ಹುದ್ದೆಗಳನ್ನು ಪಡೆಯುವ ಕನಸು ಕಾಣಬೇಕು. ಆ ಕನಸುಗಳಿಗೆ ತಕ್ಕಂತೆ ಪರಿಶ್ರಮ ಮತ್ತು ಶಿಸ್ತನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಣ್ಣುಗಳೇ ಭಗವಂತ ನೀಡಿದ ಅತ್ಯುತ್ತಮ ಕ್ಯಾಮೆರಾ :

ಮಾನವನ ಕಣ್ಣುಗಳೇ ಭಗವಂತ ನೀಡಿರುವ ಅತ್ಯುತ್ತಮ ಕ್ಯಾಮೆರಾಗಳು ಎಂದು ಗಣ್ಯರು ಬಣ್ಣಿಸಿದರು. ದುಬಾರಿ ಕ್ಯಾಮೆರಾ ಹೊಂದಿರುವುದಷ್ಟೇ ಸಾಕಾಗುವುದಿಲ್ಲ; ಸರಿಯಾದ ಆಂಗಲ್, ಸೂಕ್ತ ದೃಷ್ಟಿಕೋನ, ಸಂದರ್ಭದ ಅರಿವು ಹಾಗೂ ನಿಖರತೆಯೇ ಉತ್ತಮ ಛಾಯಾಚಿತ್ರದ ಜೀವಾಳ ಎಂದು ಹೇಳಿದರು.

ಒಂದು ಚಿತ್ರ ಸಂತೋಷವನ್ನು ನೀಡಬಹುದು; ಅದೇ ಚಿತ್ರ ತಪ್ಪು ಸಂದರ್ಭ ಅಥವಾ ದೃಷ್ಟಿಕೋನದಿಂದ ಸಮಸ್ಯೆಗೂ ಕಾರಣವಾಗಬಹುದು. ಆದ್ದರಿಂದ ಛಾಯಾಗ್ರಾಹಕರು ತಮ್ಮ ವೃತ್ತಿಯಲ್ಲಿ ಹೆಚ್ಚಿನ ಜವಾಬ್ದಾರಿ ಮತ್ತು ವಿವೇಚನೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು.

ಬಾಲ್ಯ, ಯೌವನ ಹಾಗೂ ವೃದ್ಧಾಪ್ಯ ಎಂಬ ಜೀವನದ ಮೂರು ಪ್ರಮುಖ ಹಂತಗಳಲ್ಲಿ ಪ್ರತಿಯೊಬ್ಬರೂ ಉತ್ತಮ ನಡವಳಿಕೆ, ಸತ್ಕಾರ್ಯ ಹಾಗೂ ಸ್ಪಷ್ಟ ಗುರಿಯನ್ನು ಹೊಂದಿರಬೇಕು ಎಂದು ತಿಳಿಸಿದರು.

ಕಾರ್ಯಕ್ರಮವನ್ನು ಬಳ್ಳಾರಿಯ ಖ್ಯಾತ ನಿರೂಪಕ ವಿನೋದ್ ಎಂ. ಅಚ್ಚುಕಟ್ಟಾಗಿ ನಿರೂಪಿಸಿದರು. ಸಂಘದ ಪದಾಧಿಕಾರಿಗಳು, ಛಾಯಾಗ್ರಾಹಕರು, ವಿಡಿಯೋಗ್ರಾಫರ್‌ಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Tags

World Photography DayBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X