Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಸೋಮಲಾಪುರ ಸರ್ಕಾರಿ ಶಾಲೆಯ...

Ballari | ಸೋಮಲಾಪುರ ಸರ್ಕಾರಿ ಶಾಲೆಯ ವಿದ್ಯುತ್ ಸಮಸ್ಯೆಗೆ ಕೊನೆಗೂ ಮುಕ್ತಿ : ಕಂಬ, ತಂತಿ ಅಳವಡಿಸಿ ಶಾಶ್ವತ ವಿದ್ಯುತ್ ಸಂಪರ್ಕ ಕಲ್ಪಿಸಿದ ಜೆಸ್ಕಾಂ

ವಾರ್ತಾಭಾರತಿವಾರ್ತಾಭಾರತಿ19 Aug 2026 9:34 PM IST
share
Ballari | ಸೋಮಲಾಪುರ ಸರ್ಕಾರಿ ಶಾಲೆಯ ವಿದ್ಯುತ್ ಸಮಸ್ಯೆಗೆ ಕೊನೆಗೂ ಮುಕ್ತಿ : ಕಂಬ, ತಂತಿ ಅಳವಡಿಸಿ ಶಾಶ್ವತ ವಿದ್ಯುತ್ ಸಂಪರ್ಕ ಕಲ್ಪಿಸಿದ ಜೆಸ್ಕಾಂ

ಬಳ್ಳಾರಿ/ಕಂಪ್ಲಿ: ತಾಲೂಕಿನ ದೇವಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಮಲಾಪುರ ಗ್ರಾಮದ ಗುಡ್ಡದ ಬಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭದಿಂದಲೂ ಕಾಡುತ್ತಿದ್ದ ವಿದ್ಯುತ್ ಸರಬರಾಜಿನ ಸಮಸ್ಯೆಗೆ ಕೊನೆಗೂ ಮುಕ್ತಿ ದೊರೆತಿದೆ ಎಂದು ಸಿಆರ್‌ಪಿ ಎ.ಎಸ್. ಭೂಮೇಶ್ವರ ಹೇಳಿದರು.

ಶಾಲೆಯಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಿದ ಜೆಸ್ಕಾಂ ಲೈನ್‌ಮನ್ ಹೊನ್ನೂರಸ್ವಾಮಿ ಅವರನ್ನು ಬುಧವಾರ ಸನ್ಮಾನಿಸಿ ಮಾತನಾಡಿದ ಅವರು, ಗ್ರಾಮದ ಹಳೆಯ ಶಾಲೆಯನ್ನು ಗುಡ್ಡದ ಬಳಿಯಲ್ಲಿ ನಿರ್ಮಿಸಲಾದ ನೂತನ ಕಟ್ಟಡಕ್ಕೆ 2023ರಲ್ಲಿ ಸ್ಥಳಾಂತರಿಸಲಾಗಿತ್ತು. ಸುಸಜ್ಜಿತ ಕೊಠಡಿಗಳು ಹಾಗೂ ಅಗತ್ಯ ಮೂಲಸೌಕರ್ಯಗಳಿದ್ದರೂ ವಿದ್ಯುತ್ ಸಂಪರ್ಕದ ಕೊರತೆಯಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ತೊಂದರೆ ಅನುಭವಿಸುತ್ತಿದ್ದರು ಎಂದರು.

ವಿದ್ಯುತ್ ಸಮಸ್ಯೆಯಿಂದ ಕಂಪ್ಯೂಟರ್ ಬಳಕೆ, ಬೆಳಕಿನ ವ್ಯವಸ್ಥೆ ಹಾಗೂ ನೀರು ಪೂರೈಕೆಯಲ್ಲಿಯೂ ತೊಂದರೆಯಾಗಿತ್ತು. ಹೀಗಾಗಿ ತಾತ್ಕಾಲಿಕವಾಗಿ ಕಟ್ಟಿಗೆಯ ಕಂಬಗಳ ಮೂಲಕ ವಿದ್ಯುತ್ ತಂತಿಗಳನ್ನು ಅಳವಡಿಸಿಕೊಂಡು ಸರಬರಾಜು ಮಾಡಲಾಗುತ್ತಿತ್ತು. ಶಾಲೆಗೆ ಶಾಶ್ವತ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು, ಮುಖಂಡರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಗಮನಕ್ಕೆ ಮನವಿ ಸಲ್ಲಿಸಲಾಗಿತ್ತು ಎಂದು ತಿಳಿಸಿದರು.

ನಿರಂತರ ಮನವಿಯ ಹಿನ್ನೆಲೆಯಲ್ಲಿ ಜೆಸ್ಕಾಂ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ವಿದ್ಯುತ್ ಕಂಬಗಳನ್ನು ಅಳವಡಿಸಿ, ತಂತಿ ಎಳೆದು ಶಾಲೆಗೆ ಶಾಶ್ವತ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ. ಇದಕ್ಕೆ ಶಾಸಕ ಜೆ.ಎನ್. ಗಣೇಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಕೆ. ಶ್ರೀನಿವಾಸರಾವ್, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಧಲಿಂಗಮೂರ್ತಿ, ಎಇಇ ಶ್ರೀನಿವಾಸ ಪ್ರಸಾದ್, ಜೆಇ ಶಮಿಉಲ್ಲಾ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರ ಸಹಕಾರ ಶ್ಲಾಘನೀಯವಾಗಿದೆ ಎಂದರು.

ನಂತರ ಬಡ್ತಿ ಮುಖ್ಯಶಿಕ್ಷಕ ಎಸ್. ಚಂದ್ರಪ್ಪ ಅವರನ್ನೂ ಸನ್ಮಾನಿಸಲಾಯಿತು. ಶಾಲೆಯ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅಗತ್ಯ ಸಹಕಾರ ನೀಡುವಂತೆ ಭೂಮೇಶ್ವರ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಹ ಶಿಕ್ಷಕರಾದ ಕೆ. ಮಲ್ಲಯ್ಯ, ಹೆಚ್. ರಾಜಪ್ಪ, ಅತಿಥಿ ಶಿಕ್ಷಕಿ ಶೃತಿ ಹಾಗೂ ಸಹಾಯಕ ಸಿಬ್ಬಂದಿ ಪೀರಾಂಬೀ ಉಪಸ್ಥಿತರಿದ್ದರು.

Tags

GESCOMschoolBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X