Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಮಹಿಳಾ ಸಬಲೀಕರಣಕ್ಕೆ 4 ಲಕ್ಷ...

Ballari | ಮಹಿಳಾ ಸಬಲೀಕರಣಕ್ಕೆ 4 ಲಕ್ಷ ರೂ. ಸುತ್ತು ನಿಧಿ, 20 ಹೊಗೆರಹಿತ ಒಲೆ ವಿತರಣೆ

ವಾರ್ತಾಭಾರತಿವಾರ್ತಾಭಾರತಿ11 Aug 2026 6:12 PM IST
share
Ballari | ಮಹಿಳಾ ಸಬಲೀಕರಣಕ್ಕೆ 4 ಲಕ್ಷ ರೂ. ಸುತ್ತು ನಿಧಿ, 20 ಹೊಗೆರಹಿತ ಒಲೆ ವಿತರಣೆ
ಸೋಮಲಾಪುರದಲ್ಲಿ ಬಲ್ಡೋಟಾ ಮಹಿಳಾ ಸಬಲೀಕರಣ–ಪರಿಸರ ಸುಸ್ಥಿರತಾ ಕಾರ್ಯಕ್ರಮ

ಸಂಡೂರು/ಬಳ್ಳಾರಿ: ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಉತ್ತೇಜನ ನೀಡುವುದರ ಜತೆಗೆ ಗ್ರಾಮೀಣ ಕುಟುಂಬಗಳಲ್ಲಿ ಸ್ವಚ್ಛ ಇಂಧನ ಬಳಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಬಲ್ಡೋಟಾ ಸಂಸ್ಥೆಯ ವತಿಯಿಂದ ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ಮಹಿಳಾ ಸಬಲೀಕರಣ ಹಾಗೂ ಪರಿಸರ ಸುಸ್ಥಿರತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಬಲ್ಡೋಟಾ ಮಹಿಳಾ ಸಬಲೀಕರಣ ಯೋಜನೆ ಹಾಗೂ ಪರಿಸರ ಸುಸ್ಥಿರತಾ ಕಾರ್ಯಕ್ರಮ 2026–27ರ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಸ್ವಸಹಾಯ ಸಂಘಗಳ ಸದಸ್ಯರಿಗೆ 4 ಲಕ್ಷ ರೂ. ಸುತ್ತು ನಿಧಿ ಹಾಗೂ 20 ಹೊಗೆರಹಿತ ಒಲೆಗಳನ್ನು ವಿತರಿಸಲಾಯಿತು.

ಒಟ್ಟು ಆರು ಸ್ವಸಹಾಯ ಸಂಘಗಳಿಗೆ ಸುತ್ತು ನಿಧಿ ವಿತರಿಸಲಾಗಿದ್ದು, ಬೊಮ್ಮಲಿಂಗೇಶ್ವರ, ಜೈಭಾರತಿ, ಮುರಾರಿ, ಮಹಾಲಕ್ಷ್ಮೀ ಹಾಗೂ ಅನ್ನಪೂರ್ಣೇಶ್ವರಿ ಸ್ವಸಹಾಯ ಸಂಘಗಳಿಗೆ ತಲಾ 60 ಸಾವಿರ ರೂ. ಹಾಗೂ ದುರ್ಗಮ್ಮ ಸ್ವಸಹಾಯ ಸಂಘಕ್ಕೆ 1 ಲಕ್ಷ ರೂ. ನೀಡಲಾಯಿತು.

ಸುತ್ತು ನಿಧಿಯು ಸ್ವಸಹಾಯ ಸಂಘಗಳ ಆಂತರಿಕ ಸಾಲ ವಿತರಣೆ, ಜೀವನೋಪಾಯ ಚಟುವಟಿಕೆಗಳು ಹಾಗೂ ಸಣ್ಣ ಉದ್ಯಮಗಳಿಗೆ ಆರ್ಥಿಕ ನೆರವು ಒದಗಿಸುವ ಮೂಲಕ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸಹಕಾರಿಯಾಗಲಿದೆ ಎಂದು ತಿಳಿಸಲಾಯಿತು.

20 ಹೊಗೆರಹಿತ ಒಲೆ ವಿತರಣೆ :

ಪರಿಸರ ಸುಸ್ಥಿರತಾ ಕಾರ್ಯಕ್ರಮದಡಿ ಸ್ವಸಹಾಯ ಸಂಘಗಳ ಸದಸ್ಯರಿಗೆ 20 ಹೊಗೆರಹಿತ ಒಲೆಗಳನ್ನು ವಿತರಿಸಲಾಯಿತು. ಇವುಗಳ ಬಳಕೆಯಿಂದ ಗ್ರಾಮೀಣ ಮನೆಗಳಲ್ಲಿ ಸ್ವಚ್ಛ ಇಂಧನ ಬಳಕೆಗೆ ಉತ್ತೇಜನ ದೊರೆಯುವುದರ ಜತೆಗೆ ಒಳಾಂಗಣ ವಾಯುಮಾಲಿನ್ಯ ಕಡಿಮೆಯಾಗಿ ಮಹಿಳೆಯರು ಹಾಗೂ ಕುಟುಂಬ ಸದಸ್ಯರ ಆರೋಗ್ಯ ರಕ್ಷಣೆಗೆ ಸಹಕಾರಿಯಾಗಲಿದೆ ಎಂದು ತಿಳಿಸಲಾಯಿತು.

ಮಹಿಳೆಯರ ಆರ್ಥಿಕ ಸಬಲೀಕರಣದ ಜತೆಗೆ ಪರಿಸರ ಸಂರಕ್ಷಣೆ ಮತ್ತು ಆರೋಗ್ಯಕರ ಜೀವನಶೈಲಿಗೆ ಉತ್ತೇಜನ ನೀಡುವ ಇಂತಹ ಕಾರ್ಯಕ್ರಮಗಳು ಗ್ರಾಮೀಣ ಸಮುದಾಯದ ಸುಸ್ಥಿರ ಅಭಿವೃದ್ಧಿಗೆ ಪೂರಕವಾಗಿವೆ ಎಂದು ಅಭಿಪ್ರಾಯ ವ್ಯಕ್ತವಾಯಿತು.

ಕಾರ್ಯಕ್ರಮದಲ್ಲಿ ಪಿಪಿ-2 ಘಟಕದ ಪ್ಲಾಂಟ್ ಹೆಡ್ ಮದ್ದುಕುರಿ ಭರತ ಚಂದ್ರ ಸಿಂಹ, ಜಿಎಂ-ಎಚ್‌ಆರ್ ವೀರೇಶ್ ಸಾಮಂತ್ರೀ, ಜಿಎಂ-ಸಿಎಸ್‌ಆರ್ ರಾಮಬಾಬು, ಸಿಸಿ ವಿಭಾಗದ ತಿಪ್ಪೇಸ್ವಾಮಿ ಹಾಗೂ ಧನುಷ್, ಸಿಎಸ್‌ಆರ್ ವಿಭಾಗದ ವಿಜಯಕುಮಾರ ಪಿ.ಎಂ. ಸೇರಿದಂತೆ ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X