Ballari | ಆಶಾ ಜ್ಯೋತಿ ಫೌಂಡೇಶನ್ನಿಂದ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ನೋಟ್ಬುಕ್ ವಿತರಣೆ

ಬಳ್ಳಾರಿ/ಕಂಪ್ಲಿ: ಆಶಾ ಜ್ಯೋತಿ ಫೌಂಡೇಶನ್ ವತಿಯಿಂದ ಶಾಲೆಯ 100 ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಹಾಗೂ ನೋಟ್ಪುಸ್ತಕಗಳನ್ನು ವಿತರಿಸುವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲಾ ಮುಖ್ಯಗುರು ಮಾಲಿಕ್, ಮಕ್ಕಳ ಶಿಕ್ಷಣಕ್ಕೆ ಪೋಷಕರು ಅಪಾರ ಕಷ್ಟಪಟ್ಟು ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತಾರೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳುವುದರ ಜೊತೆಗೆ, ಮುಂದೆ ಪೋಷಕರ ಆರೈಕೆ ಮಾಡಿ ಸಮಾಜಸೇವೆಯಲ್ಲೂ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಫೌಂಡೇಶನ್ ಪದಾಧಿಕಾರಿಗಳಾದ ಜವುಕು ಅರ್ಜುನ್ ಬಾಬು ಹಾಗೂ ಸಹದೇವ ಮಾತನಾಡಿ, ಕಳೆದ ಮೂರು ವರ್ಷಗಳಿಂದ ಶಾಲೆಯ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು, ಹೊಸ ವಿಷಯಗಳನ್ನು ಕಲಿಯಬೇಕು ಹಾಗೂ ಉದ್ಯೋಗಕ್ಕೆ ಪೂರಕವಾದ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ 100 ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಹಾಗೂ ಪ್ರತಿಯೊಬ್ಬರಿಗೂ ಆರು ನೋಟ್ಪುಸ್ತಕಗಳನ್ನು ವಿತರಿಸಲಾಯಿತು. ಸಮಾಜಸೇವೆಯಲ್ಲಿನ ಕೊಡುಗೆಗಾಗಿ ಆಶಾ ಜ್ಯೋತಿ ಫೌಂಡೇಶನ್ ಪದಾಧಿಕಾರಿಗಳನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಗೋಪಾಲ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪಂಪಾಪತಿ, ಸಹಶಿಕ್ಷಕಿ ಸುನೀತಾ, ಗ್ರಾಮದ ಗಣ್ಯರು, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




