Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ನಿಡುಗುರ್ತಿ ಶಾಲೆಯಲ್ಲಿ...

Ballari | ನಿಡುಗುರ್ತಿ ಶಾಲೆಯಲ್ಲಿ ಬ್ಯಾಗ್ ರಹಿತ ದಿನ ಆಚರಣೆ

ವಾರ್ತಾಭಾರತಿವಾರ್ತಾಭಾರತಿ22 Aug 2026 5:33 PM IST
share
Ballari | ನಿಡುಗುರ್ತಿ ಶಾಲೆಯಲ್ಲಿ ಬ್ಯಾಗ್ ರಹಿತ ದಿನ ಆಚರಣೆ

ಸಂಡೂರು/ಬಳ್ಳಾರಿ: ತಾಲೂಕಿನ ನಿಡುಗುರ್ತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಬ್ಯಾಗ್ ರಹಿತ ದಿನವನ್ನು ವಿಶೇಷವಾಗಿ ಆಚರಿಸಲಾಯಿತು. ಪಠ್ಯಪುಸ್ತಕದ ಹೊರೆ ಇಲ್ಲದೆ ಮಕ್ಕಳಿಗೆ ಜೀವನಾಧಾರಿತ ಹಾಗೂ ಅನುಭವಾಧಾರಿತ ಕಲಿಕೆಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

‘ಅರಿವು–ಅನುಭವ–ಅವಲೋಕನ’ ಎಂಬ ಆಶಯದಡಿ ಚಟುವಟಿಕೆಗಳನ್ನು ರೂಪಿಸಲಾಗಿದ್ದು, ಅಂತರ್ಜಾಲ, ಮೊಬೈಲ್, ಸಾಮಾಜಿಕ ಮಾಧ್ಯಮ ಹಾಗೂ ವಿವಿಧ ಮಾಧ್ಯಮಗಳಲ್ಲಿ ಲಭ್ಯವಾಗುವ ಮಾಹಿತಿಯನ್ನು ಜವಾಬ್ದಾರಿಯುತವಾಗಿ ಬಳಸುವ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.

ಮೊಬೈಲ್ ಹಾಗೂ ಅಂತರ್ಜಾಲ ಬಳಕೆಯ ಸಂದರ್ಭದಲ್ಲಿ ವೈಯಕ್ತಿಕ ಮಾಹಿತಿ, ಫೋಟೋ, ಪಾಸ್‌ವರ್ಡ್ ಸೇರಿದಂತೆ ಖಾಸಗಿ ವಿವರಗಳನ್ನು ಅಪರಿಚಿತರೊಂದಿಗೆ ಹಂಚಿಕೊಳ್ಳಬಾರದು. ಅಪರಿಚಿತರಿಂದ ಬರುವ ಸಂದೇಶಗಳು, ಲಿಂಕ್‌ಗಳು ಹಾಗೂ ಆನ್‌ಲೈನ್ ಆಮಿಷಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ದೊರೆಯುವ ಪ್ರತಿಯೊಂದು ಮಾಹಿತಿಯನ್ನೂ ಸತ್ಯವೆಂದು ನಂಬದೆ, ಅದರ ಮೂಲ ಹಾಗೂ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು ಎಂದು ತಿಳಿಸಲಾಯಿತು.

ವಿದ್ಯಾರ್ಥಿಗಳನ್ನು ಗುಂಪುಗಳಾಗಿ ವಿಂಗಡಿಸಿ ವಿವಿಧ ಸಂದರ್ಭಗಳ ಕುರಿತು ಚರ್ಚೆ, ಪ್ರಶ್ನೋತ್ತರ ಹಾಗೂ ಅಭಿಪ್ರಾಯ ಹಂಚಿಕೆ ಮೂಲಕ ಅನುಭವಾಧಾರಿತ ಕಲಿಕೆಗೆ ಅವಕಾಶ ಕಲ್ಪಿಸಲಾಯಿತು. ಮೊಬೈಲ್ ಅಥವಾ ಅಂತರ್ಜಾಲದಲ್ಲಿ ಎದುರಾಗಬಹುದಾದ ಸಂದರ್ಭಗಳನ್ನು ಉದಾಹರಣೆಯಾಗಿ ನೀಡಲಾಗಿದ್ದು, ಸುರಕ್ಷಿತ ಹಾಗೂ ಜವಾಬ್ದಾರಿಯುತವಾಗಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ವಿದ್ಯಾರ್ಥಿಗಳೇ ಚರ್ಚಿಸಿದರು.

ಇದರೊಂದಿಗೆ ಸೃಜನಶೀಲತೆ, ಸಂವಹನ ಕೌಶಲ್ಯ, ಸಮಸ್ಯೆ ಗುರುತಿಸುವ ಸಾಮರ್ಥ್ಯ ಹಾಗೂ ಸ್ವತಂತ್ರವಾಗಿ ಆಲೋಚಿಸುವ ಮನೋಭಾವ ಬೆಳೆಸುವ ಚಟುವಟಿಕೆಗಳಿಗೂ ಆದ್ಯತೆ ನೀಡಲಾಯಿತು. ವಿವಿಧ ಮಾಧ್ಯಮಗಳಲ್ಲಿ ಕಾಣುವ ಮಾಹಿತಿಯನ್ನು ಹೇಗೆ ಸ್ವೀಕರಿಸಬೇಕು, ಯಾವುದನ್ನು ನಂಬಬೇಕು ಮತ್ತು ಯಾವುದನ್ನು ಪರಿಶೀಲಿಸಬೇಕು ಎಂಬ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಾಯಿತು.

ರಾಷ್ಟ್ರೀಯ ಶಿಕ್ಷಣ ನೀತಿ–2020ರ ಆಶಯದಂತೆ ವಿದ್ಯಾರ್ಥಿಗಳ ಕಲಿಕೆಯನ್ನು ಅನುಭವಾಧಾರಿತ ಹಾಗೂ ಸಂತಸದಾಯಕವಾಗಿಸುವ ನಿಟ್ಟಿನಲ್ಲಿ ಬ್ಯಾಗ್ ರಹಿತ ದಿನಗಳನ್ನು ಉತ್ತೇಜಿಸಲಾಗುತ್ತಿದೆ. ಕೇಂದ್ರ ಶಿಕ್ಷಣ ಸಚಿವಾಲಯದ ‘10 Bagless Days’ ಮಾರ್ಗಸೂಚಿಗಳಲ್ಲಿಯೂ ಕಲೆ, ಕ್ವಿಜ್, ಕ್ರೀಡೆ, ಕೌಶಲ್ಯಾಧಾರಿತ ಚಟುವಟಿಕೆಗಳು ಹಾಗೂ ತರಗತಿಯ ಹೊರಗಿನ ಅನುಭವಗಳಿಗೆ ಅವಕಾಶ ಕಲ್ಪಿಸುವಂತೆ ಸೂಚಿಸಲಾಗಿದೆ.

ಶಾಲೆಯ ಮುಖ್ಯಗುರು ಎ. ಯರ್ರಿಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಹ ಶಿಕ್ಷಕರಾದ ಶಶಿಧರ ಬಿ.ಎಂ., ಕಿರಣ್ ಕುಮಾರ್, ವೆಂಕಟೇಶ್, ಮಲ್ಲಿಕಾರ್ಜುನ್, ದೇವಿಶ್ರೀ, ಶೃತಿ, ಪಿರುಮ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Tags

schoolBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X