Ballari | ಜನಾರ್ಧನ ರೆಡ್ಡಿ ಮನೆ ಸಮೀಪ ಎರಡು ಗುಂಪುಗಳ ನಡುವೆ ಘರ್ಷಣೆ; ಕಲ್ಲು ತೂರಾಟ

ಬಳ್ಳಾರಿ : ನಗರದ ಹವಂಬಾವಿ ಪ್ರದೇಶದಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿ ಅವರ ನಿವಾಸದ ಸಮೀಪ ಇಂದು(ಜ.1) ಸಂಜೆ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಜನಾರ್ಧನ ರೆಡ್ಡಿ ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗರ ನಡುವೆ ಪರಸ್ಪರ ಮಾತಿನ ಚಕಮಕಿ ನಡೆದು ಗಲಾಟೆ ಮಾಡಿಕೊಂಡಿರುವುದು ವರದಿಯಾಗಿದೆ.
ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿದೆ.
ಜನಾರ್ದನ ರೆಡ್ಡಿ ಮನೆಯ ಬಳಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ಸಂಭವಿಸಿತ್ತು. ಈ ವೇಳೆ ಇಬ್ಬರು ಶಾಸಕರ ಭದ್ರತಾ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎನ್ನಲಾಗುತ್ತಿದ್ದು, ಈ ವೇಳೆ ಗುಂಡು ತಗುಲಿ ಯುವಕನೊಬ್ಬ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಮೃತಪಟ್ಟಿರುವ ಯುವಕ ಕಾಂಗ್ರೆಸ್ ಕಾರ್ಯಕರ್ತ ಎಂದು ತಿಳಿದುಬಂದಿದೆ.
Next Story







