Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಹಳೆಯ ವಿದ್ಯಾರ್ಥಿಗಳಿಂದ...

Ballari | ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ17 May 2026 7:39 PM IST
share
Ballari | ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

ಬಳ್ಳಾರಿ / ಕಂಪ್ಲಿ : 2002-03ನೇ ಸಾಲಿನ 7ನೇ ತರಗತಿ ಹಳೆಯ ವಿದ್ಯಾರ್ಥಿಗಳು ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ಶಿಸ್ತಿನಿಂದ ಆಚರಿಸಿದರು.

ತಾಲೂಕಿನ ರಾಮಸಾಗರ ಸಮೀಪದ ಪಂಪ ವಿದ್ಯಾಪೀಠದ ಹತ್ತಿರ ಇರುವ ತುಂಗಭದ್ರಾ ರಿವರ್ ವ್ಯೂ ರೆಸಾರ್ಟ್‌ನಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ಹೂಮಳೆಯ ಮೂಲಕ ಆತ್ಮೀಯವಾಗಿ ಸ್ವಾಗತಿಸಿದರು.

ಈ ವೇಳೆ ಮಾತನಾಡಿದ ಶಿಕ್ಷಕ ವಿ. ರಾಮಚಂದ್ರರಾವ್, ಗುರುಗಳ ಮಾರ್ಗದರ್ಶನ ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು. ತಮ್ಮ ಬಾಲ್ಯದ ದಿನಗಳು ಹಾಗೂ ಶಿಕ್ಷಕ ಜೀವನದ ನೆನಪುಗಳನ್ನು ಹಂಚಿಕೊಂಡ ಅವರು, ವಿದ್ಯಾರ್ಥಿಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಂಡ ಶಿಸ್ತು ಮತ್ತು ಸಮಯಪಾಲನೆಗೆ ಸಂತಸ ವ್ಯಕ್ತಪಡಿಸಿದರು.

“ಎಲ್ಲಾ ಪ್ರಶಸ್ತಿಗಳಿಗಿಂತ ಶಿಷ್ಯರಿಂದ ದೊರೆಯುವ ಈ ಸನ್ಮಾನ ನನಗೆ ಅತ್ಯಂತ ಅಮೂಲ್ಯ. ವರ್ಷಗಳು ಕಳೆದರೂ ವಿದ್ಯಾರ್ಥಿಗಳು ಎಂದಿಗೂ ಶಿಕ್ಷಕರಿಂದ ದೂರವಾಗುವುದಿಲ್ಲ. ಇಂತಹ ಭಾವನಾತ್ಮಕ ಕ್ಷಣಗಳು ನಮಗೆ ಸಂತೋಷ ತಂದಿವೆ” ಎಂದು ಹೇಳಿದರು.

ಶಿಕ್ಷಕ ಕೆ. ರಮೇಶ್ ಮಾತನಾಡಿ, “ನಿಮ್ಮಂತೆ ನಿಮ್ಮ ಮಕ್ಕಳಿಗೂ ಉತ್ತಮ ಶಿಕ್ಷಣ ನೀಡಿ ವಿದ್ಯಾವಂತರನ್ನಾಗಿ ಮಾಡಬೇಕು” ಎಂದು ಸಲಹೆ ನೀಡಿದರು. ವಿದ್ಯಾರ್ಥಿ ಜೀವನದ ಅನೇಕ ನೆನಪುಗಳನ್ನು ಮೆಲುಕು ಹಾಕಿದರು.

ಪದ್ಮ ಶಿಕ್ಷಕರು ಹಳೆಯ ವಿದ್ಯಾರ್ಥಿಗಳ ವಿಧೇಯತೆಯನ್ನು ಶ್ಲಾಘಿಸಿದರು. ಜಯಲಕ್ಷ್ಮಿ ಶಿಕ್ಷಕರು ಗುರು-ಶಿಷ್ಯರ ಸಂಬಂಧದ ಮಹತ್ವವನ್ನು ತಮ್ಮ ಜೀವನದ ಘಟನೆಯೊಂದರ ಮೂಲಕ ವಿವರಿಸಿದರು.

ಶಾಂತಾ ಶಿಕ್ಷಕರು ಮಾತನಾಡಿ, “ನಾವು ಕೇವಲ ಶಿಕ್ಷಕರಲ್ಲ, ನಿಮ್ಮ ಮಾರ್ಗದರ್ಶಕರು. ನಿಮ್ಮ ಪರಿಶ್ರಮದಿಂದ ಉತ್ತಮ ಜೀವನ ರೂಪಿಸಿಕೊಂಡಿರುವುದು ಹೆಮ್ಮೆಯ ಸಂಗತಿ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು, ಶಿಕ್ಷಕರೊಂದಿಗೆ ಕಳೆದ ದಿನಗಳ ಸವಿನೆನಪುಗಳನ್ನು ಸ್ಮರಿಸಿದರು. ಶಿಕ್ಷಕರಿಗೆ ಸನ್ಮಾನಿಸಿ ಗೌರವ ಸಲ್ಲಿಸಲಾಯಿತು.

ವಿದ್ಯಾರ್ಥಿಗಳು ಶಿಕ್ಷಕರ ಕುರಿತು ಭಾವನಾತ್ಮಕ ಮಾತುಗಳು, ಕವನಗಳು ಹಾಗೂ ನೆನಪುಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಕೆ. ಶ್ವೇತಾ, ಜೆ.ಬಿ. ವಿನಾಯಕ, ನವೀನ್, ಧನಪಾಲ್, ಕಿರಣ್, ಸಾಗರ್, ಎನ್. ಮಂಜುನಾಥ, ದೀಪಾಶ್ರೀ, ದೀಪಾ, ಕೆ.ಎಂ.ಜಿ. ರೇಖಾ, ಯು. ವನಜಾಕ್ಷಿ, ಕೆ. ತುಳಸಿ, ವೀರನಗೌಡ, ಎನ್. ಪ್ರೀತಿ, ಸಂತೋಷ, ಈ. ನಾಗರಾಜ, ಶ್ರುತಿ, ಈಶ್ವರಿ, ಸಿ.ಕೆ. ಮಂಜುನಾಥ, ಸಂದೀಪ್ ಬಿ., ಲಿಂಗರಾಜ್, ವಿನಾಯಕ, ಬಿ. ವೆಂಕಟೇಶ, ಎಸ್. ಉಮೇಶ್, ರೇಖಾ ಎಂ., ರಘು, ಮಂಜು ಎಂ. ಹಾಗೂ ರಾಘವೇಂದ್ರ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X