Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ...

Ballari | ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಗಾರ : ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಗಮನ ಹರಿಸಲು ಕರೆ

ವಾರ್ತಾಭಾರತಿವಾರ್ತಾಭಾರತಿ29 July 2026 8:22 PM IST
share
Ballari | ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಗಾರ : ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಗಮನ ಹರಿಸಲು ಕರೆ
ಐಎಎಸ್–ಐಪಿಎಸ್ ಗುರಿಯೊಂದಿಗೆ ಅಧ್ಯಯನಕ್ಕೆ ಮಾರ್ಗದರ್ಶನ

ಸಂಡೂರು/ಬಳ್ಳಾರಿ: ಶಾಲಾ ಶಿಕ್ಷಣ ಇಲಾಖೆ ಸಂಡೂರು, ಜೀವನ ಸಂಗೀತ ಟ್ರಸ್ಟ್ (ವಿದ್ಯಾನಗರ) ಹಾಗೂ ಸರ್ಕಾರಿ ಪ್ರೌಢಶಾಲೆ ಎಂ. ತುಂಬರಗುದ್ದಿ ಇವರ ಸಂಯುಕ್ತಾಶ್ರಯದಲ್ಲಿ ಎಸೆಸೆಲ್ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಆಸಕ್ತಿ ಬೆಳೆಸುವ ಉದ್ದೇಶದಿಂದ ಪ್ರೇರಣಾ ಕಾರ್ಯಗಾರವನ್ನು ಸರ್ಕಾರಿ ಪ್ರೌಢಶಾಲೆ ಎಂ. ತುಂಬರಗುದ್ದಿಯಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಐ.ಆರ್. ಅಕ್ಕಿ, ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸುವುದರೊಂದಿಗೆ ವಿದ್ಯಾರ್ಥಿಗಳು ಐಎಎಸ್, ಐಪಿಎಸ್ ಸೇರಿದಂತೆ ವಿವಿಧ ಆಡಳಿತಾತ್ಮಕ ಸೇವೆಗಳ ಗುರಿ ಹೊಂದಬೇಕು ಎಂದು ಕರೆ ನೀಡಿದರು. ಇಂತಹ ಕಾರ್ಯಗಾರಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಬೆಳೆಸುವುದರ ಜೊತೆಗೆ ಅವರ ಭವಿಷ್ಯದ ಗುರಿಯನ್ನು ಸ್ಪಷ್ಟಗೊಳಿಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು.

ಜೀವನ ಸಂಗೀತ ಟ್ರಸ್ಟ್ ಅಧ್ಯಕ್ಷೆ ಗೀತಾ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಮಾರ್ಗದರ್ಶನ ನೀಡುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಸರ್ಕಾರಿ ಪ್ರೌಢಶಾಲೆ ಎಂ. ತುಂಬರಗುದ್ದಿಯ ಶಿಸ್ತು, ವ್ಯವಸ್ಥೆ ಹಾಗೂ ಸುಂದರ ಪರಿಸರ ಖಾಸಗಿ ಶಾಲೆಗಳಿಗೂ ಮಾದರಿಯಾಗಿದೆ. ವಿದ್ಯಾರ್ಥಿಗಳು ಲಭ್ಯವಿರುವ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಟ್ರಿಕ್ಸ್ ಅಕಾಡೆಮಿಯ ತುಳಸಿದಾಸ್ ಅವರು ಸುಮಾರು ಮೂರು ಗಂಟೆಗಳ ಕಾಲ ವಿದ್ಯಾರ್ಥಿಗಳಿಗೆ ಕ್ರಿಯಾತ್ಮಕ ತರಬೇತಿ ನೀಡಿದರು. ಐಎಎಸ್–ಐಪಿಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ಅಗತ್ಯವಾದ ಅಧ್ಯಯನ ವಿಧಾನಗಳು, ನೆನಪಿನ ಶಕ್ತಿ ವೃದ್ಧಿಸುವ ತಂತ್ರಗಳು, ಪರಿಣಾಮಕಾರಿ ಕಲಿಕಾ ವಿಧಾನಗಳು ಹಾಗೂ ಭಾರತದ ವಿವಿಧ ರಾಜ್ಯಗಳ ವೈಶಿಷ್ಟ್ಯಗಳನ್ನು ನಕ್ಷೆಯ ಮೂಲಕ ಸುಲಭವಾಗಿ ನೆನಪಿಡುವ ವಿಧಾನಗಳನ್ನು ವಿವರಿಸಿದರು.

ಡಯಟ್ ಬಳ್ಳಾರಿಯ ಉಪನ್ಯಾಸಕ ಕಾಶಿನಾಥ ಶಾಸ್ತ್ರಿ ಅವರು ಎಸೆಸೆಲ್ಸಿ ವಿಜ್ಞಾನ ವಿಷಯದ ಚಿತ್ರಗಳನ್ನು ಸುಲಭವಾಗಿ ಬಿಡಿಸುವ ಪ್ರಾಯೋಗಿಕ ವಿಧಾನಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

ತುಂಬರಗುದ್ದಿ, ಬೊಮ್ಮಘಟ್ಟ, ಚೋರನೂರು, ಸೋವೆನಹಳ್ಳಿ ಹಾಗೂ ಗೊಲ್ಲಲಿಂಗಮ್ಮನಹಳ್ಳಿ ಸೇರಿದಂತೆ ವಿವಿಧ ಸರ್ಕಾರಿ ಪ್ರೌಢಶಾಲೆಗಳ 350ರಿಂದ 400 ವಿದ್ಯಾರ್ಥಿಗಳು ಕಾರ್ಯಗಾರದಲ್ಲಿ ಭಾಗವಹಿಸಿ ಮಾರ್ಗದರ್ಶನದ ಪ್ರಯೋಜನ ಪಡೆದರು.

ಶಾಲೆಯ ಮುಖ್ಯ ಶಿಕ್ಷಕ ಅಮರೇಶ ಸೊನ್ನದ ಸ್ವಾಗತಿಸಿದರು. ಇಸಿಒ ಗುಳಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಹನುಮಂತಪ್ಪ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಂಗಿ ನಾಗರಾಜ್, ಬಡ್ತಿ ಶಿಕ್ಷಕರ ಸಂಘದ ಅಧ್ಯಕ್ಷ ಮಹೇಶ್ವರಪ್ಪ, ತಾಳೂರು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಸವರಾಜ್, ಮಾನವ ಹಕ್ಕುಗಳ ಸಮಿತಿಯ ಓಬಳೇಶ್, ನಿವೃತ್ತ ಉಪನ್ಯಾಸಕ ತಿಪ್ಪೇಸ್ವಾಮಿ, ಪ್ರಭಾರಿ ಟಿಪಿಒ ಜಗದೀಶ್, ವಿವಿಧ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಯರಯ್ಯನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ವಿವಿಧ ಶಾಲೆಗಳ ಶಿಕ್ಷಕರು ಉಪಸ್ಥಿತರಿದ್ದರು.

Tags

studentsSSLCBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X