Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ವಿಶ್ವ ಆದಿವಾಸಿ...

Ballari | ವಿಶ್ವ ಆದಿವಾಸಿ ದಿನಾಚರಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ: ಶಿಕಾರಿ ರಾಮು ಕರೆ

ವಾರ್ತಾಭಾರತಿವಾರ್ತಾಭಾರತಿ6 Aug 2026 8:11 PM IST
share
Ballari | ವಿಶ್ವ ಆದಿವಾಸಿ ದಿನಾಚರಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ: ಶಿಕಾರಿ ರಾಮು ಕರೆ
ಆ.9ರಂದು ಹುಬ್ಬಳ್ಳಿ–ಧಾರವಾಡದಲ್ಲಿ 32ನೇ ವಿಶ್ವ ಆದಿವಾಸಿ ದಿನಾಚರಣೆ

ಬಳ್ಳಾರಿ/ಕಂಪ್ಲಿ: ಆ. 9ರಂದು ಹುಬ್ಬಳ್ಳಿ–ಧಾರವಾಡದ ನೆಹರು ಕ್ರೀಡಾಂಗಣದಲ್ಲಿ ನಡೆಯಲಿರುವ 32ನೇ ವಿಶ್ವ ಆದಿವಾಸಿ ದಿನಾಚರಣೆಯಲ್ಲಿ ಆದಿವಾಸಿ ಬುಡಕಟ್ಟು ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ರಾಜ್ಯ ಸಂಘಟನಾ ಕಾರ್ಯದರ್ಶಿ ಹೆಚ್.ಪಿ. ಶಿಕಾರಿ ರಾಮು ಕರೆ ನೀಡಿದರು.

ಪಟ್ಟಣದ ಶಿಕಾರಿ ಕಾಲೋನಿಯ ತುಳಜಾ ಭವಾನಿ ದೇವಸ್ಥಾನದಲ್ಲಿ ಗುರುವಾರ ನಡೆದ ಸಂಘಟನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಶ್ವಸಂಸ್ಥೆಯ ಪ್ರೇರಣೆಯಿಂದ 1995ರಿಂದ ವಿಶ್ವ ಆದಿವಾಸಿ ದಿನಾಚರಣೆ ಆಚರಿಸಲಾಗುತ್ತಿದ್ದು, ಕಳೆದ 15 ವರ್ಷಗಳಿಂದ ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ರಾಜ್ಯದ ವಿವಿಧೆಡೆ ಅರ್ಥಪೂರ್ಣವಾಗಿ ದಿನಾಚರಣೆ ನಡೆಸಿಕೊಂಡು ಬರುತ್ತಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಸುಮಾರು 50 ಬುಡಕಟ್ಟು ಸಮುದಾಯಗಳಿದ್ದು, 2011ರ ಜನಗಣತಿ ಪ್ರಕಾರ ಅವರ ಜನಸಂಖ್ಯೆ 42,48,987ರಷ್ಟಿದೆ. ಡುಂಗ್ರಿ ಗರಾಸಿಯ, ಹಕ್ಕಿಪಿಕ್ಕಿ, ಕಾತಕರಿ, ಪಾರ್ಧಿ, ಅಡ್ಡಿಚಿಂಚೇರ್, ಹರಣ ಶಿಕಾರಿ, ರಾಜಗೊಂಡ ಸೇರಿದಂತೆ ಹಲವು ಬುಡಕಟ್ಟು ಸಮುದಾಯಗಳು ಇಂದಿಗೂ ಬದುಕಿಗಾಗಿ ಅಲೆಮಾರಿ ಜೀವನ ನಡೆಸುತ್ತಿರುವುದು ವಿಷಾದನೀಯವಾಗಿದೆ ಎಂದು ಹೇಳಿದರು.

ಬುಡಕಟ್ಟು ಸಮುದಾಯಗಳ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆ, ಶಿಕ್ಷಣ, ಕೌಶಲಾಭಿವೃದ್ಧಿ, ಉದ್ಯೋಗ, ಮಹಿಳಾ ಮತ್ತು ಯುವ ಸಬಲೀಕರಣ, ಆರೋಗ್ಯ ಜಾಗೃತಿ ಹಾಗೂ ಸರ್ಕಾರಿ ಕಲ್ಯಾಣ ಯೋಜನೆಗಳ ಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ತು ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.

ಈ ಬಾರಿಯ ವಿಶ್ವ ಆದಿವಾಸಿ ದಿನಾಚರಣೆಯಲ್ಲಿ ಸಚಿವರು, ಶಾಸಕರು, ಚಿಂತಕರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಬುಡಕಟ್ಟು ಸಮುದಾಯದವರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಬಳ್ಳಾರಿ ಜಿಲ್ಲಾ ಹಕ್ಕಿಪಿಕ್ಕಿ ಅಭಿವೃದ್ಧಿ ಸಂಘದ ಅಧ್ಯಕ್ಷ ಹೆಚ್.ಪಿ. ಶ್ರೀಕಾಂತ, ಉಪಾಧ್ಯಕ್ಷ ಶಿಕಾರಿ ಬಾಬು, ಜಿಲ್ಲಾ ಹಕ್ಕಿಪಿಕ್ಕಿ–ಪಾರ್ಧಿ–ಹರಣ ಶಿಕಾರಿ ಮಹಿಳಾ ಜಾಗೃತಿ ಸಂಘದ ಅಧ್ಯಕ್ಷೆ ಜಾನಕಿ, ಕಂಪ್ಲಿ ಹಕ್ಕಿಪಿಕ್ಕಿ ಯುವಕರ ಸಂಘದ ಅಧ್ಯಕ್ಷ ಹರಿ ಕೃಷ್ಣ, ಮುಖಂಡರಾದ ಗೋಪಿ, ಈರಣ್ಣ, ಹೆಚ್.ಪಿ. ಸೋಮ, ಗೋವಿಂದಪ್ಪ, ಅಂಜಿನಿ, ಗನ್ನುಸಿಂಗ್, ಗಂಗಪ್ಪ, ರಾಮು ಬಳ್ಳಾರಿ, ಈರಮ್ಮ ಬಳ್ಳಾರಿ, ಶಾರದಮ್ಮ, ರೇಣುಕಮ್ಮ, ಅಮೀನ್ ಕಟ್ಟಿಮನಿ, ಮೀನಾಕ್ಷಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X