Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಬಳ್ಳಾರಿ | ರೈತರ ಆದಾಯ ಹೆಚ್ಚಳಕ್ಕೆ ಕೃಷಿ...

ಬಳ್ಳಾರಿ | ರೈತರ ಆದಾಯ ಹೆಚ್ಚಳಕ್ಕೆ ಕೃಷಿ ಪರಿಕರ ಮಾರಾಟಗಾರರ ಸಹಕಾರ ಅಗತ್ಯ : ಡಾ.ಮಂಜುನಾಥ್ ಎಂ.ವಿ.

ವಾರ್ತಾಭಾರತಿವಾರ್ತಾಭಾರತಿ15 Oct 2025 6:29 PM IST
share
ಬಳ್ಳಾರಿ | ರೈತರ ಆದಾಯ ಹೆಚ್ಚಳಕ್ಕೆ ಕೃಷಿ ಪರಿಕರ ಮಾರಾಟಗಾರರ ಸಹಕಾರ ಅಗತ್ಯ : ಡಾ.ಮಂಜುನಾಥ್ ಎಂ.ವಿ.

ಬಳ್ಳಾರಿ: ಕೃಷಿ ಕ್ಷೇತ್ರದಲ್ಲಿ ರೈತರ ಕೈಹಿಡಿದ ಸಲಹೆಗಾರರಾಗಿ ಕೃಷಿ ಪರಿಕರ ಮಾರಾಟಗಾರರು ಬೆಳೆದು, ರೈತರ ಆದಾಯ ವೃದ್ಧಿಗೆ ಪ್ರಮುಖ ಪಾತ್ರವಹಿಸಬೇಕು ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ. ಮಂಜುನಾಥ್ ಎಂ.ವಿ ಅವರು ತಿಳಿಸಿದ್ದಾರೆ.

ಬುಧವಾರ ಹಗರಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ (ರಾಯಚೂರು), ಮ್ಯಾನೇಜ್ಮೆಂಟ್ ಹೈದರಾಬಾದ್, ಸಮೇತಿ (ಉತ್ತರ) ಕೃಷಿ ವಿಶ್ವವಿದ್ಯಾಲಯ ಧಾರವಾಡ, ಕೃಷಿ ಇಲಾಖೆ ಬಳ್ಳಾರಿ, ಕೃಷಿ ತಂತ್ರಜ್ಞಾನ ಸಂಸ್ಥೆ ಬಳ್ಳಾರಿ ಘಟಕ ಮತ್ತು ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ ಹಗರಿ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಕೃಷಿ ವಿಸ್ತರಣಾ ಸೇವೆಗಳ ಡಿಪ್ಲೋಮೋ” ಕೋರ್ಸ್‌ನ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ.ಅಮರೇಗೌಡ ಎ. ಅವರು ಮಾತನಾಡಿ, ಕೃಷಿ ಪರಿಕರ ವ್ಯಾಪಾರಿಗಳು ತಾಂತ್ರಿಕ ಜ್ಞಾನ ಪಡೆದು ರೈತರಿಗೆ ವಿಶ್ವಾಸಾರ್ಹ ಸಲಹೆಗಾರರಾಗಿ ಪರಿಣತಿ ಪಡೆಯಬೇಕು ಎಂದು ಹೇಳಿದರು.

ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಕೆ.ಎಂ ಅವರು ಮಾತನಾಡಿ, ಕೃಷಿ ಪರಿಕರ ಮಾರಾಟಗಾರರು ತಾಂತ್ರಿಕ ಮಾರ್ಗದರ್ಶನ ನೀಡುವುದರಿಂದ ರೈತರಿಗೆ ಉತ್ಪಾದಕತೆ ಹೆಚ್ಚಿಸಲು ನೆರವಾಗಬಹುದು. ಈ ಕೋರ್ಸ್‌ನಿಂದ ಸ್ಥಳೀಯ ಮಟ್ಟದಲ್ಲಿ ನೈಪುಣ್ಯಯುತ ಸೇವೆಗಳು ಬೆಳೆಯಲಿವೆ ಎಂದು ಅಭಿಪ್ರಾಯಪಟ್ಟರು.

ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಸುಮಾರು 80 ಕೃಷಿ ಪರಿಕರ ಮಾರಾಟಗಾರರು ಭಾಗವಹಿಸಿ, ಕೋರ್ಸ್‌ನ ಉದ್ದೇಶ ಹಾಗೂ ಪ್ರಯೋಜನಗಳ ಬಗ್ಗೆ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಸಮೇತಿ (ಉತ್ತರ) ಧಾರವಾಡ ಡಿಎಇಎಸ್‌ಐ ನ ರಾಜ್ಯ ನೋಡೆಲ್ ಅಧಿಕಾರಿ ಡಾ.ಜಾಧವಎಸ್.ಎನ್., ಹಗರಿಯ ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಹಿರಿಯ ವಿಜ್ಞಾನಿ ಡಾ.ಪಾಲಯ್ಯ.ಪಿ., ಹಗರಿ ಕೃಷಿ ಮಹಾವಿದ್ಯಾಲಯದ ಪ್ರಭಾರಿ ಅಧಿಕಾರಿ ಡಾ.ರವಿಶಂಕರ್.ಜಿ, ಪ್ರಾಧ್ಯಾಪಕ (ಪಶು ವಿಜ್ಞಾನ) ಡಾ.ರಮೇಶ್ ಬಿ.ಕೆ., ಹಿರಿಯ ವಿಜ್ಞಾನಿ (ಮಣ್ಣು ವಿಜ್ಞಾನ) ಡಾ.ರವಿ.ಎಸ್., ವಿಜ್ಞಾನಿ (ಕೃಷಿ ವಿಸ್ತರಣೆ) ಡಾ.ನವೀನ್‌ಕುಮಾರ್.ಪಿ., ವಿಜ್ಞಾನಿ (ಗೃಹ ವಿಜ್ಞಾನ) ಡಾ.ರಾಜೇಶ್ವರಿ ಆರ್., ಕೃಷಿ ತಂತ್ರಜ್ಞಾನ ಸಂಸ್ಥೆಯ ಕಾರ್ಯದರ್ಶಿ ಗುರು ಬಸವರಾಜ್‌ಟಿ.ಎಮ್ ಸೇರಿದಂತೆ ಇತರರು ಭಾಗವಹಿಸಿದ್ದರು.

Tags

Bellary
share
ವಾರ್ತಾಭಾರತಿ
ವಾರ್ತಾಭಾರತಿ
Next Story
X