Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಬಳ್ಳಾರಿ | ಕುವೆಂಪು ಸಾಹಿತ್ಯ ಲೋಕದ...

ಬಳ್ಳಾರಿ | ಕುವೆಂಪು ಸಾಹಿತ್ಯ ಲೋಕದ ಅದಮ್ಯ ಚೇತನ : ಮುಂಡರಗಿ ನಾಗರಾಜ

ವಾರ್ತಾಭಾರತಿವಾರ್ತಾಭಾರತಿ29 Dec 2025 7:48 PM IST
share
ಬಳ್ಳಾರಿ | ಕುವೆಂಪು ಸಾಹಿತ್ಯ ಲೋಕದ ಅದಮ್ಯ ಚೇತನ : ಮುಂಡರಗಿ ನಾಗರಾಜ
ರಾಷ್ಟ್ರಕವಿ ಕುವೆಂಪು ಜನ್ಮದಿನ: ವಿಶ್ವ ಮಾನವ ದಿನಾಚರಣೆ

ಬಳ್ಳಾರಿ,ಡಿ.29: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟ್ರಕವಿ ಕುವೆಂಪು ವಿಶ್ವ ಮಾನವ ಸಂದೇಶ ಸಾರುವ ಮೂಲಕ ಕನ್ನಡ ಸಾಹಿತ್ಯ ಲೋಕದ ಅದಮ್ಯ ಚೇತನವಾಗಿದ್ದರು ಎಂದು ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ರಾಷ್ಟ್ರಕವಿ ಕುವೆಂಪು ಜನ್ಮದಿನ ಅಂಗವಾಗಿ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕವಿಗಳು ಸುಂದರ ಪ್ರಕೃತಿಯ ಮೂಲಕ ಸೂರ್ಯೋದಯ ಮತ್ತು ಸೂರ್ಯಸ್ತದಲ್ಲಿ ಸಾಹಿತ್ಯ ಕೃತಿಗಳನ್ನು ಬರೆಯುತ್ತಿದ್ದರು. ಕುವೆಂಪು ಅವರು ಸಹ ಪ್ರಕೃತಿಯ ವರ್ಣನೆಯಿಂದ ಸಮಾಜ ಪರಿವರ್ತನೆ ಮಾಡಿದವರು ಎಂದು ತಿಳಿಸಿದರು.

ಕುವೆಂಪು ಅವರು 1904 ಡಿ.29 ರಂದು ವೆಂಕಟಪ್ಪ ಹಾಗೂ ಸೀತಮ್ಮ ಮಗನಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಜನಿಸಿದ್ದರು. ಕುವೆಂಪು ಅವರು ದೇಶದಲ್ಲಿ ಎಲ್ಲಾ ಧರ್ಮಗಳ ಜನರು ಸೌಹರ್ದತೆಯಿಂದ ಬಾಳಬೇಕು. ವಿಭಿನ್ನತೆಯಲ್ಲಿ ಏಕತೆ ಹೊಂದಿ ಧರ್ಮ, ಸಂಸ್ಕೃತಿ, ಆಚಾರ-ವಿಚಾರ, ಜಾತಿಗಳಿಂದ ದೂರವಿದ್ದು, ವಿಶ್ವ ಮಾನವನಾಗಬೇಕು ಎಂದು ಸಂದೇಶ ಸಾರಿದವರು ಎಂದರು.

ಈಗಿನ ಪೀಳಿಗೆ ಆದರ್ಶ ವ್ಯಕ್ತಿಗಳ ಜೀವನಾಧಾರಿತ ಪುಸ್ತಕಗಳಿಂದ ಉತ್ತಮ ಆದರ್ಶ ಬೆಳೆಸಿಕೊಂಡು ಕುವೆಂಪು ಅವರಂತೆ ಹೆಸರು ಗಳಿಸುವ ಮೂಲಕ ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಮಾತನಾಡಿ, ಬುದ್ಧ, ಬಸವಣ್ಣರಂತಹ ವಿಶ್ವ ಮಾನವರ ಸಾಲಿನಲ್ಲಿ ಕುವೆಂಪು ಅವರೂ ಒಬ್ಬರು. ಅವರ ‘ಓ ನನ್ನ ಚೇತನ ಆಗು ನೀ ಅನಿಕೇತನ’ ಕವನದಲ್ಲಿ ಎಲ್ಲರೂ ವಿಶ್ವಮಾನವರಾಗಬೇಕು ಎಂಬ ತತ್ವ ಅಡಗಿತ್ತು. ಜಾತಿ, ಮತ, ಧರ್ಮ ಎಲ್ಲವನ್ನೂ ಮೀರಿ ಬದುಕಬೇಕು ಎಂದು ಕರೆ ನೀಡಿದವರು ಕುವೆಂಪು ಎಂದು ಹೇಳಿದರು.

ಆಕಾಶವಾಣಿ ಉದ್ಘೋಷಕ ಅಮಾತಿ ಬಸವರಾಜ್ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಸಾಂಸಾರಿಕ ಜೀವನದಲ್ಲಿ ಆಧ್ಯಾತ್ಮಿಕ ಗುರಿ ಸಾಧಿಸಿದವರು ಕುವೆಂಪು. ಕೌಟುಂಬಿಕ ಜೀವನಕ್ಕೆ ಮಹತ್ವ ಕೊಟ್ಟಿದ್ದರೂ ಅವರಿಗೆ ಅಧ್ಯಾತ್ಮದ ಬಗ್ಗೆ ಓಲವಿತ್ತು. ರಾಮಕೃಷ್ಣ ಪರಮಹಂ ಮತ್ತು ಸ್ವಾಮಿ ವಿವೇಕಾನಂದರ ಮಾರ್ಗದಲ್ಲಿ ಆಧ್ಯಾತ್ಮಿಕ ಯಶಸ್ಸು ಸಾಧಿಸಿದವರು ಎಂದು ಹೇಳಿದರು.

ಕುವೆಂಪು ಅವರ ಕನ್ನಡ ಸಾಹಿತ್ಯವನ್ನು ಗ್ರಹಿಸಲಾರದಷ್ಟು ಎತ್ತರಕ್ಕೆ ಬೆಳೆಸಿದ್ದಾರೆ. ಅನೇಕ ಚಳವಳಿಗಳಿಗೆ ಅವರೇ ಸ್ಫೂರ್ತಿಯಾಗಿದ್ದರು ಮತ್ತು ಅವರ ಮುಖ್ಯ ವಿಚಾರಧಾರೆಯಾದ ಮನುಜಮತ-ವಿಶ್ವಪಥ, ಸರ್ವೋದಯ-ಸಮನ್ವಯ ಪೂರ್ಣದೃಷ್ಟಿಯನ್ನು ಕುರಿತು ತಿಳಿಸಿಕೊಟ್ಟವರು ಎಂದರು.

ಕಾರ್ಯಕ್ರಮದಲ್ಲಿ ಬಳ್ಳಾರಿಯ ಜಡೇಶ್ ಎಮ್ಮಿಗನೂರು ಅವರಿಂದ ಸುಗಮ ಸಂಗೀತ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮ ಆರಂಭಕ್ಕೂ ಮುನ್ನ ಸಂವಿಧಾನ ಪೀಠಿಕೆ ಬೋಧಿಸಲಾಯಿತು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಜಿಲ್ಲಾ ಕಲಾವಿದರ ಸಂಘದ ಅಧ್ಯಕ್ಷ ಯಲ್ಲನಗೌಡ ಶಂಕರ ಬಂಡೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿವೃತ್ತ ಉಪನಿರ್ದೇಶಕ ಚೋರನೂರು ಕೊಟ್ರಪ್ಪ ಸೇರಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X