ಬಳ್ಳಾರಿ | ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಗಳಲ್ಲೂ ಆಸಕ್ತಿ ವಹಿಸಬೇಕು : ಸಂತೋಷ ರೆಡ್ಡಿ ಆರ್.

ಬಳ್ಳಾರಿ, ಡಿ.26: ವಿದ್ಯಾರ್ಥಿಗಳು ಕೇವಲ ಪಾಠಪುಸ್ತಕಗಳಿಗೆ ಸೀಮಿತರಾಗದೆ, ಕ್ರೀಡೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಬೇಕು. ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸದೃಢವಾಗುತ್ತದೆ ಎಂದು ಕಲಬುರಗಿಯ ಕಲ್ಯಾಣ ಕರ್ನಾಟಕ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಸಂತೋಷ ರೆಡ್ಡಿ ಆರ್. ಅವರು ಹೇಳಿದರು.
ಕೇಂದ್ರ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ಮೇರಾ ಯುವ ಭಾರತ ಬಳ್ಳಾರಿ ಕಚೇರಿ ವತಿಯಿಂದ ಲಿಯಾ ಯೂತ್ ಅಸೋಸಿಯೇಷನ್ ಹಾಗೂ ಐಡಿಪಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ನಗರದಲ್ಲಿರುವ ಐಡಿಪಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಐಡಿಪಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಜಯಚಂದ್ರ ರೆಡ್ಡಿ ಇ. ಅವರು ಮಾತನಾಡಿ, ವಿದ್ಯಾರ್ಥಿಗಳು ಕ್ರೀಡಾ ಮನೋಭಾವದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ಕ್ರೀಡಾಕೂಟದಲ್ಲಿ ವಾಲಿಬಾಲ್, ಖೋಖೋ, 100 ಮೀಟರ್ ಓಟ, ಗುಂಡು ಎಸೆತ, ಹಗ್ಗಜಗ್ಗಾಟ, ಬ್ಯಾಡ್ಮಿಂಟನ್ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ವಿವಿಧ ಸ್ಪರ್ಧೆಗಳ ವಿಜೇತರು:
100 ಮೀ. ಓಟ ಸ್ಪರ್ಧೆಯಲ್ಲಿ ಪ್ರಥಮವಾಗಿ ಪೂಜ, ಪ್ರಜ್ವಲ್, ದ್ವಿತೀಯ ಸ್ಪಂದನ, ಟಿ.ಗಣೇಶ, ತೃತೀಯ ಗಾಯಿತ್ರಿ, ರವಿ.
ಕಬ್ಬಡಿ ಸ್ಪರ್ಧೆಯಲ್ಲಿ ಪ್ರಥಮ ಶ್ರಯನ್, ಪೂಜ, ದ್ವಿತೀಯ ಜಗನ್, ಉಮ್ಮಿ ಅರನಿ.
ವಾಲಿಬಾಲ್ ಸ್ಪರ್ಧೆಯಲ್ಲಿ ಪ್ರಥಮ ಶ್ರೀಕಾಂತ, ಉಮ್ಮಿಅರನಿ, ದ್ವಿತೀಯ ಕುಮಾರ, ರುಷಿಕ್.
ಥ್ರೋ ಬಾಲ್ ಸ್ಪರ್ಧೆಯಲ್ಲಿ ಪ್ರಥಮ ಗಾಯಿತ್ರಿ, ದ್ವಿತೀಯ ರಿಷಿಕ್.
ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ವಿನಾಯಕ, ದ್ವಿತೀಯ ಶಶಿ.
ಶಾಟ್ ಪುಟ್ ಸ್ಪರ್ಧೆಯಲ್ಲಿ ಪ್ರಥಮ ಕುಮಾರ, ದ್ವಿತೀಯ ಪುಷ್ಪಲತಾ.
ಬಾಸ್ಕೇಟ್ ಬಾಲ್ ಸ್ಪರ್ಧೆಯಲ್ಲಿ ಪ್ರಥಮ ಕಿರಣ, ದ್ವಿತೀಯ ಪ್ರಜ್ವಲ್.
ಕ್ರೀಡಾಕೂಟದ ವಿವಿಧ ಸ್ಪರ್ಧೆಯ ವಿಜೇತರಿಗೆ ಗಣ್ಯರು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಸ್ವತಂತ್ರ ಕಾಲೇಜಿನ ಸಿಇಒ ಕೆ. ವೇಣುಗೋಪಾಲ, ಎಜಿಎಂ ವೆಂಕಟಕೃಷ್ಣ, ಪ್ರಾಂಶುಪಾಲ ತಿಪ್ಪಾರೆಡ್ಡಿ ಪಿ., ಎನ್.ಐ.ಎಫ್.ಎ.ಎ ಸಂಸ್ಥಾಪಕ ಅಧ್ಯಕ್ಷ ಆರ್.ಕೆ. ಅಬ್ರಹಾಂ ಸೇರಿದಂತೆ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.







