Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಪ್ರಕೃತಿ, ಪರಿಸರ ನಾಶವಾದರೆ ಇಡೀ ಮನುಕುಲ...

ಪ್ರಕೃತಿ, ಪರಿಸರ ನಾಶವಾದರೆ ಇಡೀ ಮನುಕುಲ ನಾಶ : ಸಚಿವ ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ10 Oct 2025 7:22 PM IST
share
ಪ್ರಕೃತಿ, ಪರಿಸರ ನಾಶವಾದರೆ ಇಡೀ ಮನುಕುಲ ನಾಶ : ಸಚಿವ ಈಶ್ವರ್ ಖಂಡ್ರೆ
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50ನೇ ವರ್ಷದ ‘ಸುವರ್ಣ ಮಹೋತ್ಸವ’ ಕಾರ್ಯಕ್ರಮ

ಬಳ್ಳಾರಿ: ಇತ್ತೀಚಿನ ಪ್ರಕೃತಿ ವಿಕೋಪಗಳು ಮಾನವರಿಗೆ ಪರಿಸರದ ಅಗತ್ಯತೆಯನ್ನು ಹತ್ತಿರವಾಗಿ ತೋರಿಸುತ್ತಿವೆ. ಪ್ರಕೃತಿಗೆ ಮಾನವ ಅಗತ್ಯವಿಲ್ಲದಿರುವುದರಿಂದ ಪರಿಸರ ನಾಶವಾದರೆ ಮಾನವ ಕುಲದ ಉಳಿವಿಗೂ ಅಪಾಯವುಂಟಾಗುತ್ತದೆ ಎಂದು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ಅವರು ಬುಧವಾರ ನಗರದ ಡಾ.ರಾಜ್ ಕುಮಾರ್ ರಸ್ತೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ 50ನೇ ವರ್ಷದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ‘ಸುವರ್ಣ ಮಹೋತ್ಸವ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹವಾಮಾನ ವೈಪರಿತ್ಯಗಳಿಂದ ಸಂಭವಿಸುತ್ತಿರುವ ಬರ, ಸುನಾಮಿ, ಅತಿವೃಷ್ಟಿ, ಅನಾವೃಷ್ಟಿ ಸೇರಿದಂತೆ ವಿವಿಧ ಪರಿಸರ ಸಮಸ್ಯೆಗಳ ಬಗ್ಗೆ ಮಾತನಾಡಿದ ಅವರು, ಜಲ, ವಾಯು, ಶಬ್ದ ಮಾಲಿನ್ಯಗಳಿಂದ ಆಗುತ್ತಿರುವ ಹಾನಿಯ ಕುರಿತು ಹಿತೈಸಿ ಸಲಹೆ ನೀಡಿದರು. ಕೊರೋನಾ ಕಾಲದಲ್ಲಿ ಆಮ್ಲಜನಕ ಕೊರತೆಯಿಂದ ಹಲವರು ಮೃತಪಟ್ಟಿದ್ದು, ಗಿಡ–ಮರಗಳಿಂದ ಮಾತ್ರ ಆಮ್ಲಜನಕ ಉತ್ಪತ್ತಿಯಾಗುತ್ತದೆ. ರಾಜ್ಯಾದ್ಯಂತ ಈಗಾಗಲೇ 11 ಕೋಟಿ ಸಸಿಗಳನ್ನು ನೆಡುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.

ಮಾಜಿ ಪ್ರಧಾನಿ ಇಂದಿರಾ ಗಾಂಧಿ ದೇಶದಲ್ಲಿ ಮತ್ತು ಜಗತ್ತಿನಲ್ಲಿ ಮೊದಲ ಬಾರಿಗೆ ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣದ ಮಹತ್ವವನ್ನು ಉದ್ಧೇಶಿಸಿ ಮಾತನಾಡಿದ್ದರು. 1974ರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧೀನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ಸ್ಥಾಪಿಸಲಾಗಿತ್ತು. 50 ವರ್ಷಗಳನ್ನು ಪೂರೈಸಿದ ಈ ಸಂದರ್ಭದಲ್ಲಿ ಮಂಡಳಿಯ ಸಾಧನೆಗಳನ್ನು ಆಚರಿಸಲಾಯಿತು.

ರಾಜ್ಯದಲ್ಲಿ ಅರಣ್ಯ ಪ್ರದೇಶ ಶೇ.21 ಇದ್ದರೆ, ಜಾಗತಿಕ ತಜ್ಞರು ಶೇ.33 ಅರಣ್ಯ ಪ್ರದೇಶ ಅಗತ್ಯವಿರುವುದಾಗಿ ಸೂಚಿಸಿದ್ದಾರೆ. ರಾಜ್ಯದಲ್ಲಿ 5 ರಾಷ್ಟ್ರೀಯ ಉದ್ಯಾನವನ, 5 ಹುಲಿ ಸಂರಕ್ಷಿತ ಪ್ರದೇಶ, 37 ವನ್ಯಜೀವಿ ಧಾಮ, 19 ಮೀಸಲು ಪ್ರದೇಶಗಳಿವೆ. ಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದ್ದು, ಹುಲಿಗಳಲ್ಲಿ ಎರಡನೇ ಸ್ಥಾನದಲ್ಲಿದೆ. ಪರಿಸರ ಸಂರಕ್ಷಣೆಗೆ ಮಾಲಿನ್ಯ ನಿಯಂತ್ರಣ ಮಂಡಳಿ ಜಲ ಮತ್ತು ವಾಯು ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುತ್ತಿದೆ. ಕೈಗಾರಿಕೆಗಳಿಂದ ಉಂಟಾಗುವ ತ್ಯಾಜ್ಯ, ಧೂಳು, ಹಾನಿಕರ ವಸ್ತುಗಳು ಪರಿಸರಕ್ಕೆ ಹಾನಿ ಮಾಡುತ್ತಿರುವುದರಿಂದ ಪ್ರಭಾವಿತ ಪ್ರದೇಶಗಳಲ್ಲಿ ನಿಯಮಿತ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

ಬಳ್ಳಾರಿಯಲ್ಲಿ 29 ಸ್ಪಾಂಜ್ ಐರನ್ ಘಟಕಗಳು ಮತ್ತು 42 ಕಬ್ಬಿಣದ ಗಣಿಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ ಉನ್ನತೀಕರಿಸಿದ ವಾಯು ಮಾಲಿನ್ಯ ನಿಯಂತ್ರಣ ಉಪಕರಣಗಳನ್ನು ಅಳವಡಿಸಲಾಗಿದೆ. ಜನರಿಗೆ ಪರಿಸರ ಸ್ನೇಹಿ ಹಬ್ಬ ಆಚರಿಸುವಂತೆ, ಹಸಿರು ಪಟಾಕಿಗಳನ್ನು ಬಳಸಲು ಜಾಗೃತಿ ಮೂಡಿಸಲಾಗಿದೆ. ವಿದ್ಯಾರ್ಥಿಗಳಿಗೆ ‘ಪರಿಸರದ ಬಗ್ಗೆ ರಿಲ್ಸ್ ಮಾಡಿ ಬಹುಮಾನ ಗೆಲ್ಲಿ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಬಳ್ಳಾರಿ ಸಂಸದ ಈ. ತುಕಾರಾಮ್, ಸಂಡೂರು ಶಾಸಕರಾದ ಈ. ಅನ್ನಪೂರ್ಣ, ವಿವಿಧ ಅಧಿಕಾರಿಗಳು ಮತ್ತು ನಾಗರಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಜಿಲ್ಲೆಯ ಪರಿಸರ ಸಂರಕ್ಷಣೆಗೆ ಮಹನೀಯರಿಗೆ ಹಾಗೂ ಸಂಘಗಳಿಗೆ ‘ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಶಾಲಾ-ಕಾಲೇಜುಗಳಲ್ಲಿ ಆಯೋಜಿತ ಪ್ರಬಂಧ ಸ್ಪರ್ಧೆ, ಗೋಡೆ ಬಹರ ಹಾಗೂ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ಮತ್ತು ಪ್ರಮಾಣಪತ್ರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್, ಉಪಮೇಯರ್ ಡಿ.ಸುಕುಂ, ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ ಎಸ್.ಎಸ್.ಲಿಂಗರಾಜ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಬಳ್ಳಾರಿ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ, ಉಪವಿಭಾಗಾಧಿಕಾರಿ ಪಿ.ಪ್ರಮೋದ್, ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್.ಮಂಜುನಾಥ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಟಿ.ಎಂ.ಸಿದ್ದೇಶ್ವರ ಬಾಬು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಪಾಲಿಕೆ ಸದಸ್ಯರು, ಜಿಲ್ಲೆಯ ವಿವಿಧ ಕೈಗಾರಿಕೆಗಳ ಕೈಗಾರಿಕೋದ್ಯಮಿಗಳು, ಕಾರ್ಮಿಕರು, ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X