Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಸಾರ್ವಜನಿಕರು ಡೆಂಗ್ಯೂ ಬಗ್ಗೆ...

ಸಾರ್ವಜನಿಕರು ಡೆಂಗ್ಯೂ ಬಗ್ಗೆ ಜಾಗೃತಿವಹಿಸಿ: ಡಾ. ಆರ್. ಅಬ್ದುಲ್ಲಾ

ವಾರ್ತಾಭಾರತಿವಾರ್ತಾಭಾರತಿ18 Oct 2025 11:59 PM IST
share
ಸಾರ್ವಜನಿಕರು ಡೆಂಗ್ಯೂ ಬಗ್ಗೆ ಜಾಗೃತಿವಹಿಸಿ: ಡಾ. ಆರ್. ಅಬ್ದುಲ್ಲಾ

ಬಳ್ಳಾರಿ: ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ನೀರು ನಿಲ್ಲುವುದರಿಂದ ಡೆಂಗ್ಯು ಹರಡುವ ಸೊಳ್ಳೆ ಸಂತತಿ ಹೆಚ್ಚಾಗುವ ಸಾಧ್ಯತೆ ಇದ್ದು, ಡೆಂಗ್ಯು ಪ್ರಕರಣಗಳು ಹೆಚ್ಚು ಕಂಡು ಬರುವುದರಿಂದ ನೀರು ನಿಲ್ಲದಂತೆ ನೋಡಿಕೊಂಡು ಡೆಂಗ್ಯೂ ಬಗ್ಗೆ ಜಾಗೃತಿವಹಿಸಿವಬೇಕು ಎಂದು ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಆರ್.ಅಬ್ದುಲ್ಲಾ ಅವರು ಹೇಳಿದರು.

ನಗರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಬ್ರೂಸ್‌ಪೇಟೆ ವ್ಯಾಪ್ತಿಯಲ್ಲಿ ಬರುವ ಕೋಟೆ ಪ್ರದೇಶದ 39ನೇ ವಾರ್ಡಿನಲ್ಲಿ ಡೆಂಗ್ಯೂ ಜ್ವರದ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುತ್ತಾ ಮಾತನಾಡಿದರು.

ನೀರು ತುಂಬುವ ಪರಿಕರಣಗಳನ್ಮು ವಾರಕ್ಕೊಮ್ಮೆ ಸ್ವಚ್ಚಗೊಳಿಸಿ ಮತ್ತು ಯಾರಿಗಾದರೂ ಒಂದೇ ದಿನಕ್ಕಿಂತ ಹೆಚ್ಚು ಬಾರಿ ಜ್ವರ ಕಂಡು ಬಂದರೆ ವೈದ್ಯರ ಬಳಿ ಪರೀಕ್ಷಿಸಿ ಅಗತ್ಯ ಚಿಕಿತ್ಸೆ ಪಡೆಯಬೇಕು. ಅದರಲ್ಲೂ ಚಿಕ್ಕ ಮಕ್ಕಳು, ಗರ್ಭಿಣಿಯರು, ವಯೋವೃದ್ದರ ಕಾಳಜಿ ತೆಗೆದುಕೊಂಡು ನಿರ್ಲಕ್ಷ ವಹಿಸಬೇಡಿ, ವೈದ್ಯರಿಂದ ಪರೀಕ್ಷಿಸಿಕೊಳ್ಳಬೇಕು ಎಂದು ಸಾರ್ವಜನಿಕರಿಗೆ ತಿಳಿಸಿದರು.

ನಿಂತ ನೀರಿನಿಂದ ಸೊಳ್ಳೆ ಉತ್ಪತ್ತಿಯಾಗುವ ಜೊತೆಗೆ ಡೆಂಗ್ಯೂ ಸೇರಿದಂತೆ ಸೊಳ್ಳೆಯ ಕಚ್ಚುವಿಕೆಯಿಂದ ಹರಡುವ ಚಿಕುನ್‌ಗುನ್ಯಾ, ಮಲೇರಿಯಾ, ಆನೇಕಾಲು ರೋಗ, ಮೆದುಳು ಜ್ವರ ಮುಂತಾದವುಗಳು ಕಂಡುಬರುವ ಸಾಧ್ಯತೆ ಇರುತ್ತದೆ. ಸಾಮಾನ್ಯವಾಗಿ ಜ್ವರವನ್ನು ನಾವು ನಿರ್ಲಕ್ಷಿಸುತ್ತೆವೆ, ಇಂತಹ ಸಂದರ್ಭಗಳಲ್ಲಿ ಡೆಂಗ್ಯು ಸಂಬಂಧಿತ ಜ್ವರವಾಗಿದ್ದರೆ ರೋಗಿಯು ಪ್ಲೇಟ್‌ಲೆಟ್ಸ್ಗಳ ಶೀಘ್ರ ಕುಸಿಯುವಿಕೆಯಿಂದ ಆರೋಗ್ಯ ಸಮಸ್ಯೆ ಎದುರಾಗಿ ರಕ್ತಸ್ರಾವದಂತಹ ಗಂಭಿರ ಸಮಸ್ಯೆ ಉಂಟಾಗಬಹುದು. ಯಾರಿಗಾದರೂ 3 ದಿನಗಳ ಕಡಿಮೆಯಾಗದ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಂಡಲ್ಲಿ ನಿರ್ಲಕ್ಷಿಸಿದೆ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಬೇಟಿ ನೀಡಿ ಅಗತ್ಯ ಪರೀಕ್ಷೆ ಮಾಡಿಸಿ ವೈದ್ಯರ ಸಲಹೆಯಂತೆ ಲಕ್ಷಣಗಳ ಆಧಾರದ ಮೇರೆಗೆ ಚಿಕಿತ್ಸೆ ಪಡೆಯಲು ತಿಳಿಸಿದರು.

ಡ್ರಮ್, ಬ್ಯಾರಲ್, ನೀರಿನ ತೊಟ್ಟಿ, ಕಲ್ಲಿನ ಡೋಣಿ, ಹೂವಿನ ಕುಂಡಲ ಮುಂತಾದ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಲು ಹಾಗೂ ಮುಚ್ಚಳ ಮುಚ್ಚಿ ಬಟ್ಟೆ ಕಟ್ಟಲು, ಬಳಕೆ ಮಾಡದ ನೀರು ಸಂಗ್ರಹಕಗಳಿಗೆ ಕೊಬ್ಬರಿ ಎಣ್ಣೆಯನ್ನು ಹಾಕುವ ಮೂಲಕ ಸೊಳ್ಳೆ ಉತ್ಪತ್ತಿ ತಡೆಯಬಹುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ 39 ನೇ ವಾರ್ಡಿನ ಕಾರ್ಪೋರೇಟರ್ ಶಶಿಕಲಾ ಜಗನ್ನಾಥ, ಆಡಳಿತ ವೈದ್ಯಾಧಿಕಾರಿ ಡಾ. ಸುರೇಖ, ಎನ್.ವಿ.ಬಿ.ಡಿ.ಸಿಪಿ ಸಲಹೆಗಾರ ಪ್ರತಾಪ್, ಜಿಲ್ಲಾ ನೋಡಲ್ ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ನಂದಿನಿ, ಹಿರಿಯ ಆರೋಗ್ಯ ನೀರಿಕ್ಷಣಾಧಿಕಾರಿ ನಾಗೇಂದ್ರಪ್ಪ, ಆರೋಗ್ಯ ನೀರಿಕ್ಷಣಾಧಿಕಾರಿಗಳಾದ ಮರಿ ಬಸವನಗೌಡ, ರವೀಂದ್ರ ಜಿನಗ, ನಾಗರಾಜ ಸೇರಿದಂತೆ ಬ್ರೂಸ್‌ಪೇಟೆ ಆಸ್ಪತ್ರೆಯ ಸಿಬ್ಬಂದಿಗಳು, ಆಶಾಕಾರ್ಯಕರ್ತೆಯರು, ಸಾರ್ವಜನಿಕರು ಉಪಸ್ಥಿತರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X