Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಧರ್ಮದ ಕಾಲಂನಲ್ಲಿ ಲಿಂಗಾಯತರೆಂದು ಬರೆಸಿ...

ಧರ್ಮದ ಕಾಲಂನಲ್ಲಿ ಲಿಂಗಾಯತರೆಂದು ಬರೆಸಿ : ಲಿಂಗಾಯತ ಮಠಾಧೀಶರ ಒಕ್ಕೂಟ ಮನವಿ

ವಾರ್ತಾಭಾರತಿವಾರ್ತಾಭಾರತಿ17 Sept 2025 11:19 PM IST
share
ಧರ್ಮದ ಕಾಲಂನಲ್ಲಿ ಲಿಂಗಾಯತರೆಂದು ಬರೆಸಿ : ಲಿಂಗಾಯತ ಮಠಾಧೀಶರ ಒಕ್ಕೂಟ ಮನವಿ

ಬೆಂಗಳೂರು, ಸೆ.17: ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆ.22ರಿಂದ ಅ.7ರ ವರೆಗೆ ನಡೆಸಲಿದ್ದು, ಈ ವೇಳೆಯಲ್ಲಿ ಲಿಂಗಾಯತ ಸಮುದಾಯವರು ಧರ್ಮದ ಕಾಲಂನಲ್ಲಿ ‘ಲಿಂಗಾಯತ’ ಎಂದು ಉಪಜಾತಿಯ ಕಾಲಂನಲ್ಲಿ ತಮ್ಮ ತಮ್ಮ ಉಪಜಾತಿಯನ್ನು ಬರೆಸಬೇಕು ಎಂದು ಲಿಂಗಾಯತ ಮಠಾಧೀಶರ ಒಕ್ಕೂಟದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದೇವರು ಮನವಿ ಮಾಡಿದ್ದಾರೆ.

ಬುಧವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತವು ಪ್ರತ್ಯೇಕ ಸ್ವತಂತ್ರ ಧರ್ಮವಾದರೂ, ಅದರೊಳಗೆ 97 ಬೇರೆ-ಬೇರೆ ಹೆಸರಿನ ಜಾತಿ (ಒಳಪಂಗಡ)ಗಳಿವೆ. ಈವರೆಗೆ ನಡೆದ ಜನಗಣತಿಗಳಲ್ಲಿ ಬಹುತೇಕ ಲಿಂಗಾಯತರು ತಮ್ಮ ಧರ್ಮವನ್ನು ‘ಹಿಂದೂ’ ಎಂದು ಬರೆಸಿದ್ದು ಕಂಡುಬರುತ್ತದೆ. ಅದು ತಮ್ಮ ಧರ್ಮದ ಬಗ್ಗೆ ಲಿಂಗಾಯತರಲ್ಲಿದ್ದ ಅರಿವಿನ ಕೊರತೆಯ ಸಂಕೇತವಾಗಿದೆ ಎಂದರು.

ಜನಗಣತಿಯಲ್ಲಿ ಕೆಲವು ಲಿಂಗಾಯತ ವಿರೋಧಿ ಸಂಸ್ಥೆಗಳು, ಎಲ್ಲ ಲಿಂಗಾಯತರು ಹಿಂದೂ ಎಂದು ಬರೆಸಬೇಕೆಂದು ಹೇಳುತ್ತಾ, ಲಿಂಗಾಯತರನ್ನು ದಾರಿ ತಪ್ಪಿಸುತ್ತಿವೆ. 2023ರ ಡಿಸೆಂಬರ್‌ನಲ್ಲಿ ಅಖಿಲ ಭಾರತ ವೀರಶೈವ ಮಹಾಸಭೆಯು ಲಿಂಗಾಯತರು ಹಿಂದೂಗಳಲ್ಲವೆಂದು ಸ್ಪಷ್ಟವಾಗಿ ನಿರ್ಣಯ ಮಾಡಿದೆ. ಜಾತಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರ 2002ರಲ್ಲಿ ಹೊರಡಿಸಿದ ಆದೇಶದಲ್ಲಿ ಅನ್ಯಾಯವಾಗಿ ಸತ್ಯಕ್ಕೆ ವಿರುದ್ಧವಾಗಿ ಕೆಲವು ಗುಂಪುಗಳ ಒತ್ತಡಕ್ಕೆ ಮಣಿದು ಲಿಂಗಾಯತರನ್ನು ‘ವೀರಶೈವ ಲಿಂಗಾಯತ’ರೆಂದು ಅಧಿಸೂಚನೆ ಹೊರಡಿಸಿದ್ದು ತಪ್ಪಾಗಿದೆ ಎಂದು ಅವರು ತಿಳಿಸಿದರು.

ಲಿಂಗಾಯತದಲ್ಲಿರುವ 97 ಉಪಜಾತಿಗಳಲ್ಲಿ ವೀರಶೈವ ಒಂದು ಜಾತಿ ಮಾತ್ರ. ಲಿಂಗಾಯತದಲ್ಲಿ ವೀರಶೈವವಿದೆ, ಆದರೆ ವೀರಶೈವದಲ್ಲಿ ಲಿಂಗಾಯತವಿಲ್ಲ. ಆದುದರಿಂದ ‘ವೀರಶೈವ ಲಿಂಗಾಯತ’ ಎನ್ನುವುದು ಸಂಪೂರ್ಣವಾಗಿ ತಪ್ಪು. ಇದೇ ತಪ್ಪನ್ನು ಅಖಿಲ ಭಾರತ ವೀರಶೈವ ಮಹಾಸಭೆಯು ಮುಂದುವರಿಸುತ್ತಿದೆ. ಇದರಲ್ಲಿ ಆ ಸಂಘಟನೆಗಳ ಪದಾಧಿಕಾರಿಗಳ ರಾಜಕೀಯ ಹಿತಾಸಕ್ತಿ ಅಡಗಿದೆ. ಇಂತಹ ರಾಜಕಾರಣಿಗಳ ಮಾತನ್ನು ಲಿಂಗಾಯತರು ಕೇಳಬಾರದು ಎಂದು ಡಾ.ಬಸವಲಿಂಗ ಪಟ್ಟದೇವರು ಸೂಚನೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಲಿಂಗಾಯತ ಮಠಾಧೀಶರ ಒಕ್ಕೂಟದ ತೋಂಟದ ಸಿದ್ದರಾಮ ಸ್ವಾಮಿ, ಮಹಾಂತ ದೇವರು, ಬೆಳ್ಳಿಮಠ ಶಿವರುದ್ರ ಸ್ವಾಮಿ ಬೇಲಿಮಠ, ಸಿದ್ದಲಿಂಗ ಮಹಾಸ್ವಾಮಿ, ಅಲ್ಲಮಪ್ರಭು ಮಹಾಸ್ವಾಮಿ, ಗಂಗಾಮಾತಾಜಿ, ಬಸವಲಿಂಗ ಸ್ವಾಮಿ, ಚನ್ನಬಸವ ಸ್ವಾಮಿ, ನಂಜುಂಡಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X