Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೋಗಿಲು ಲೇಔಟ್ ಧ್ವಂಸ ಕಾರ್ಯಾಚರಣೆ | 394...

ಕೋಗಿಲು ಲೇಔಟ್ ಧ್ವಂಸ ಕಾರ್ಯಾಚರಣೆ | 394 ಮಕ್ಕಳು ಸೇರಿ 1,007 ಜನ ಬಾಧಿತರು : ತಾಹಿರ್ ಹುಸೇನ್

ವಾರ್ತಾಭಾರತಿವಾರ್ತಾಭಾರತಿ29 Dec 2025 11:53 PM IST
share
ಕೋಗಿಲು ಲೇಔಟ್ ಧ್ವಂಸ ಕಾರ್ಯಾಚರಣೆ | 394 ಮಕ್ಕಳು ಸೇರಿ 1,007 ಜನ ಬಾಧಿತರು : ತಾಹಿರ್ ಹುಸೇನ್

ಬೆಂಗಳೂರು : ಕೋಗಿಲು ಬಳಿಯ ಫಕೀರ್ ಕಾಲನಿಯಲ್ಲಿ ನೂರಾರು ಮನೆಗಳನ್ನು ಧ್ವಂಸಗೊಳಿಸಿದ ಸರಕಾರದ ಕ್ರಮವನ್ನು ಖಂಡಿಸಿ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಉಪಾಧ್ಯಕ್ಷ ಅಬ್ದುಲ್ ಹಮೀದ್ ವಾಣಿಯಂಬಲಂ ಮತ್ತು ರಾಜ್ಯಾಧ್ಯಕ್ಷ ಅಡ್ವೋಕೇಟ್ ತಾಹಿರ್ ಹುಸೇನ್ ನೇತೃತ್ವದ ನಿಯೋಗವು ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದೆ.

ಈ ಪ್ರದೇಶದಲ್ಲಿ ಫಕೀರ್ ಕಾಲನಿ, ಫಕೀರ್ ಕಾಲನಿ (ನ್ಯೂ) ಹಾಗೂ ವಸೀಮ್ ಲೇಔಟ್ ಎಂಬ ಮೂರು ವಸತಿ ಪ್ರದೇಶಗಳಿದ್ದು, ಒಟ್ಟು 167 ಮನೆಗಳು ಧ್ವಂಸಗೊಂಡಿವೆ. ಈ ಕಾರ್ಯಾಚರಣೆಯಿಂದ 394 ಮಕ್ಕಳು ಸೇರಿ ಒಟ್ಟು 1,007 ಜನರು ಬಾಧಿತರಾಗಿದ್ದಾರೆ. ಫಕೀರ್ ಕಾಲನಿ ಕಳೆದ 30 ವರ್ಷಗಳಿಂದ ಅಸ್ತಿತ್ವದಲ್ಲಿರುವ ಅತ್ಯಂತ ಹಳೆಯ ವಸತಿ ಪ್ರದೇಶವಾಗಿದೆ ಎಂದು ತಾಹಿರ್ ಹುಸೇನ್ ತಿಳಿಸಿದ್ದಾರೆ.

ಅನೇಕ ನಿವಾಸಿಗಳು ಸ್ಥಳೀಯ ರಾಜಕೀಯ ಮಧ್ಯವರ್ತಿಗಳಿಂದ 1-2 ಲಕ್ಷ ರೂ.ಪಾವತಿಸಿ ಜಮೀನು ಖರೀದಿಸಿದ್ದು, ಮನೆ ನಿರ್ಮಾಣಕ್ಕೆ 2-3 ಲಕ್ಷ ರೂ.ಹೂಡಿಕೆ ಮಾಡಿದ್ದಾರೆ. ಹಲವು ಕುಟುಂಬಗಳಿಗೆ ಸರಕಾರದಿಂದಲೆ ‘ಪ್ರೊ ವಿಷನಲ್ ಅಲಾಟ್‍ಮೆಂಟ್ ಲೆಟರ್ ಫಾರ್ ಸೈಟ್’ ನೀಡಲಾಗಿದ್ದು, ಅದೇ ವಿಳಾಸದಲ್ಲಿ ವಿದ್ಯುತ್ ಸಂಪರ್ಕ, ಆಧಾರ್ ಕಾರ್ಡ್ ಸೇರಿದಂತೆ ಇತರೆ ಅಧಿಕೃತ ದಾಖಲೆಗಳು ಒದಗಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಸರಕಾರ ಹೇಳುವಂತೆ ಇದು ಕಸದ ತ್ಯಾಜ್ಯ ಪ್ರದೇಶವಲ್ಲ ಎಂಬುದು ಪರಿಶೀಲನೆಯಲ್ಲಿ ಸ್ಪಷ್ಟವಾಗಿದೆ. ಧ್ವಂಸಕ್ಕೆ ಮೊದಲು ನಿವಾಸಿಗಳಿಗೆ ಯಾವುದೇ ನೋಟಿಸ್ ನೀಡಿಲ್ಲ. ಮನೆಯೊಳಗಿರುವ ವಸ್ತುಗಳನ್ನು ಎತ್ತಿಕೊಳ್ಳಲು ಅವಕಾಶ ನೀಡಿಲ್ಲ. ಧ್ವಂಸ ನಂತರವೂ ಸರಕಾರದಿಂದ ಯಾವುದೇ ಪರ್ಯಾಯ ವ್ಯವಸ್ಥೆ ಅಥವಾ ಪುನರ್ವಸತಿ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ದೂರಿದ್ದಾರೆ.

ಕೆಲ ಸ್ಥಳೀಯ ರಾಜಕೀಯ ಮುಖಂಡರು ಜನರನ್ನು ತಪ್ಪು ದಾರಿಗೆಳೆದು ಮೋಸಗೊಳಿಸಿರುವುದು ಕಂಡುಬಂದಿದೆ. ಈ ಪ್ರದೇಶದಲ್ಲಿ ಒಬ್ಬರೂ ಅಕ್ರಮ ವಲಸಿಗರು ಇಲ್ಲ. ಸರಕಾರ ಮಾನವೀಯ ದೃಷ್ಟಿಯಿಂದ ತಕ್ಷಣ ಮಧ್ಯಪ್ರವೇಶಿಸಿ ಸಂತ್ರಸ್ತರಿಗೆ ಸೂರು ಒದಗಿಸಬೇಕು, ಉಂಟಾದ ನಷ್ಟಕ್ಕೆ ತಕ್ಕ ಪರಿಹಾರ ನೀಡಬೇಕು, ದಾಖಲೆಗಳನ್ನು ಹೊಂದಿರುವವರಿಗೆ ಶಾಶ್ವತ ಮನೆಗಳನ್ನು ನಿರ್ಮಿಸಿಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ನಿಯೋಗದಲ್ಲಿ ರಾಜ್ಯ ಕಾರ್ಯದರ್ಶಿಗಳಾದ ರಿಯಾಝ್ ಅಹ್ಮದ್, ತಲತ್ ಯಾಸ್ಮೀನ್, ಎಸ್‍ಡಬ್ಲ್ಯುಸಿ ಸದಸ್ಯೆ ಅನ್ವಿ ಪ್ರಭಾಕರ್, ಬೆಂಗಳೂರು ದಕ್ಷಿಣ ಅಧ್ಯಕ್ಷ ಇಮ್ತಿಯಾಜ್ ಅಹ್ಮದ್, ಬೆಂಗಳೂರು ಉತ್ತರ ಉಪಾಧ್ಯಕ್ಷ ಅಬ್ದುಸ್ಸಮದ್, ಬೆಂಗಳೂರು ದಕ್ಷಿಣ ಪ್ರಧಾನ ಕಾರ್ಯದರ್ಶಿ ದಾವೂದ್ ಅಂಬರ್, ಹುಸೇನ್ ಸಾಹೇಬ್, ಪರ್ವೀನ್ ಶೇಖ್ ಸೇರಿದಂತೆ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X