Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. Commonwealth Games 2026 | ಸಮಾರೋಪ...

Commonwealth Games 2026 | ಸಮಾರೋಪ ಸಮಾರಂಭದಲ್ಲಿ ಬೆಂಗಳೂರಿನ ರಿಚಾ ಜೋನಿತಾ ದಾಸ್‌ ರಿಂದ ಭರತನಾಟ್ಯ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ3 Aug 2026 11:28 PM IST
share
Commonwealth Games 2026 | ಸಮಾರೋಪ ಸಮಾರಂಭದಲ್ಲಿ ಬೆಂಗಳೂರಿನ ರಿಚಾ ಜೋನಿತಾ ದಾಸ್‌ ರಿಂದ ಭರತನಾಟ್ಯ ಪ್ರದರ್ಶನ

ಬೆಂಗಳೂರು: ಗ್ಲ್ಯಾಸ್ಗೋದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದ ಸಮಾರೋಪ ಸಮಾರಂಭದ ‘ಇಂಡಿಯಾ ಹ್ಯಾಂಡೋವರ್’ ಕಾರ್ಯಕ್ರಮದಲ್ಲಿ ಬೆಂಗಳೂರಿನ ಭರತನಾಟ್ಯ ಕಲಾವಿದೆ, 'ಕಲಾರ್ಪಣೆ' ಯ ಸಂಸ್ಥಾಪಕಿ ಹಾಗೂ ಕಲಾತ್ಮಕ ನಿರ್ದೇಶಕಿ ರಿಚಾ ಜೋನಿತಾ ದಾಸ್ ಭಾರತವನ್ನು ಪ್ರತಿನಿಧಿಸಿ ಭರತನಾಟ್ಯ ಪ್ರದರ್ಶನ ನೀಡಿದರು.

ಅಹಮದಾಬಾದ್‌ನಲ್ಲಿ ನಡೆಯಲಿರುವ ಶತಮಾನೋತ್ಸವದ ಕಾಮನ್‌ವೆಲ್ತ್ ಕ್ರೀಡಾಕೂಟದ ಅಂಗವಾಗಿ ಭಾರತದ ಸಾಂಸ್ಕೃತಿಕ ವೈವಿಧ್ಯವನ್ನು ಪರಿಚಯಿಸುವ ಉದ್ದೇಶದಿಂದ ಈ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಆಗಸ್ಟ್‌ 2ರಂದು ಗ್ಲ್ಯಾಸ್ಗೋದ OVO ಹೈಡ್ರೋದಲ್ಲಿ ನಡೆದ 20 ನಿಮಿಷಗಳ ‘ಇಂಡಿಯಾ ಹ್ಯಾಂಡೋವರ್’ ಕಾರ್ಯಕ್ರಮದಲ್ಲಿ ಭರತನಾಟ್ಯ, ಕುಚಿಪುಡಿ, ಕಥಕ್ ಹಾಗೂ ಭಾಂಗ್ರಾ ಸೇರಿದಂತೆ ಭಾರತದ ವಿವಿಧ ಶಾಸ್ತ್ರೀಯ ಮತ್ತು ಜಾನಪದ ನೃತ್ಯ ಪ್ರಕಾರಗಳನ್ನು ಪ್ರದರ್ಶಿಸಲಾಯಿತು. 120 ನೃತ್ಯಗಾರರ ತಂಡದಲ್ಲಿ ರಿಚಾ ಜೋನಿತಾ ದಾಸ್ ಕೂಡ ಒಬ್ಬರಾಗಿದ್ದು, ಶಿಯಾಮಕ್ ದಾವರ್ ನೃತ್ಯ ಅಕಾಡೆಮಿಯು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪ್ರದರ್ಶನ ನೀಡಲು ಬೆಂಗಳೂರಿನಿಂದ ಆಯ್ಕೆ ಮಾಡಿದ ಇಬ್ಬರು ಭರತನಾಟ್ಯ ಕಲಾವಿದರಲ್ಲಿ ಅವರೂ ಸೇರಿದ್ದರು.

ಕಾರ್ಯಕ್ರಮವು ಮೂರು ಹಂತಗಳಲ್ಲಿ ನಡೆಯಿತು. ಮೊದಲ ಹಂತದಲ್ಲಿ ‘ವಂದೇ ಮಾತರಂ’ ಗೀತೆಯ 150 ವರ್ಷಗಳನ್ನು ಸ್ಮರಿಸುವ ನೃತ್ಯರೂಪಕವನ್ನು ನಟಿ ಹಾಗೂ ಮಾಜಿ ವಿಶ್ವಸುಂದರಿ ಮಾನುಷಿ ಚಿಲ್ಲರ್ ಮುನ್ನಡೆಸಿದರು. ಎರಡನೇ ಹಂತದಲ್ಲಿ ಭಾರತೀಯ ಸಿತಾರ್ ವಾದಕ ರಿಷಬ್ ರಿಖಿರಾಮ್ ಶರ್ಮಾ ಮತ್ತು ಸ್ಕಾಟ್ಲೆಂಡ್‌ನ ಪೈಪರ್ ರಾಸ್ ಐನ್ಸ್ಲೀ ಅವರ ಸಂಗೀತ ಪ್ರದರ್ಶನಗೊಂಡಿತು. ಕೊನೆಯ ಹಂತದಲ್ಲಿ ಶಂಕರ್ ಮಹಾದೇವನ್, ಸಿದ್ಧಾರ್ಥ್ ಮಹಾದೇವನ್, ಶಿವಂ ಮಹಾದೇವನ್ ಹಾಗೂ ಭೂಮಿ ತ್ರಿವೇದಿ ಅವರ ಗಾಯನದೊಂದಿಗೆ ಗುಜರಾತ್‌ ನ ಸಾಂಸ್ಕೃತಿಕ ವೈಭವ ಅನಾವರಣಗೊಂಡಿತು.

ಈ ಕುರಿತು ಪ್ರತಿಕ್ರಿಯಿಸಿದ ರಿಚಾ ಜೋನಿತಾ ದಾಸ್, ಕಾಮನ್‌ವೆಲ್ತ್ ಕ್ರೀಡಾಕೂಟದಂತಹ ಪ್ರತಿಷ್ಠಿತ ವೇದಿಕೆಯಲ್ಲಿ ಭಾರತ ಮತ್ತು ತಮ್ಮ ತವರು ಬೆಂಗಳೂರನ್ನು ಪ್ರತಿನಿಧಿಸಿರುವುದು ಜೀವನದ ಅತ್ಯಂತ ಸ್ಮರಣೀಯ ಕ್ಷಣ ಎಂದು ಹೇಳಿದರು.

‘ಭಾರತದ ವಿವಿಧ ನೃತ್ಯ ಸಂಪ್ರದಾಯಗಳನ್ನು ಪ್ರತಿನಿಧಿಸಿದ 120ಕ್ಕೂ ಹೆಚ್ಚು ಕಲಾವಿದರೊಂದಿಗೆ ವೇದಿಕೆ ಹಂಚಿಕೊಳ್ಳುವುದು ಹಾಗೂ ಭರತನಾಟ್ಯವನ್ನು ಜಾಗತಿಕ ಪ್ರೇಕ್ಷಕರಿಗೆ ಪರಿಚಯಿಸುವ ಅವಕಾಶ ದೊರೆತಿರುವುದು ಹೆಮ್ಮೆಯ ಸಂಗತಿ. ಇದು 'ಕಲಾರ್ಪಣ' ಪ್ರತಿನಿಧಿಸುವ ಕಲಾ ಪರಂಪರೆಗೆ ಸಂದ ಗೌರವವೂ ಆಗಿದೆ’ ಎಂದು ಹೇಳಿದರು.

ಪ್ರದರ್ಶನದ ವೇಳೆ ಉಂಟಾದ ಭಾವನಾತ್ಮಕ ಅನುಭವವನ್ನೂ ಅವರು ಹಂಚಿಕೊಂಡರು. ‘ಮೂರನೇ ಹಂತದಲ್ಲಿ “ಲೆಹ್ರಾ ದೋ” ಹಾಡು ಆರಂಭವಾಗುತ್ತಿದ್ದಂತೆ ಮೈ ನಡುಗಿತು. ವಿವಿಧ ದೇಶಗಳ ಕ್ರೀಡಾಪಟುಗಳ ಎದುರು ಪ್ರದರ್ಶನ ನೀಡುವುದು ಅಪರೂಪದ ಅನುಭವ. ಅವರನ್ನು ಸಮೀಪದಲ್ಲೇ ಪ್ರೇಕ್ಷಕರಾಗಿ ಕಾಣುವುದು ಮತ್ತಷ್ಟು ವಿಶೇಷವಾಗಿತ್ತು’ ಎಂದರು.

ಪ್ರದರ್ಶನದ ಸಿದ್ಧತೆ ಕುರಿತು ಮಾತನಾಡಿದ ಅವರು, ‘ಸಿದ್ಧತೆಯ ಪ್ರಕ್ರಿಯೆ ತುಂಬಾ ಆನಂದದಾಯಕವಾಗಿತ್ತು. ಶಿಯಾಮಕ್ ದಾವರ್ ಅವರ ಮಾರ್ಗದರ್ಶನದಿಂದ ಉತ್ತಮ ನಾಯಕತ್ವದ ಗುಣಗಳನ್ನು ಕಲಿಯುವ ಅವಕಾಶ ಸಿಕ್ಕಿತು. ಪ್ರದರ್ಶನ ವ್ಯವಸ್ಥಾಪಕರು ಹಾಗೂ ಬೋಧಕರಾದ ಪ್ರಶಾಂತ್ ಮತ್ತು ತೇಜಸ್ ಅವರ ಸಹಕಾರದಿಂದ ಸಿದ್ಧತೆ ಸುಗಮವಾಗಿ ನಡೆಯಿತು’ ಎಂದು ಹೇಳಿದರು.

ರಿಚಾ ಜೋನಿತಾ ದಾಸ್ ಅವರು ಬೆಂಗಳೂರು ಮೂಲದ ‘ಕಲಾರ್ಪಣೆ’ ಸಂಸ್ಥೆಯ ಸಂಸ್ಥಾಪಕಿ ಹಾಗೂ ಕಲಾತ್ಮಕ ನಿರ್ದೇಶಕರಾಗಿದ್ದು, ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ನೃತ್ಯಗಾರರಿಗೆ ತರಬೇತಿ ಹಾಗೂ ಮಾರ್ಗದರ್ಶನ ನೀಡುತ್ತಿದ್ದಾರೆ. ಗುರುಗಳಾದ ಪಾರ್ಶ್ವನಾಥ್ ಉಪಾಧ್ಯೆ, ಶ್ರುತಿ ಗೋಪಾಲ್ ಮತ್ತು ಆದಿತ್ಯ ಪಿ.ವಿ. ಅವರ ಮಾರ್ಗದರ್ಶನದಲ್ಲಿ ಉಪಾಧ್ಯೆ ನೃತ್ಯ ಶಾಲೆಯಲ್ಲಿ 15 ವರ್ಷಗಳಿಗೂ ಹೆಚ್ಚು ಕಾಲ ಭರತನಾಟ್ಯ ಅಭ್ಯಾಸ ಮಾಡಿದ್ದಾರೆ.

ಪುರುಷರ ಹಾಕಿ ವಿಶ್ವಕಪ್ ಉದ್ಘಾಟನಾ ಸಮಾರಂಭ, ಇಟಲಿಯ ಸಾಂಸ್ಕೃತಿಕ ಪ್ರವಾಸ ಸೇರಿದಂತೆ ಭಾರತ ಮತ್ತು ವಿದೇಶಗಳ ಹಲವು ವೇದಿಕೆಗಳಲ್ಲಿ ಅವರು ಪ್ರದರ್ಶನ ನೀಡಿದ್ದಾರೆ. 2021–22ನೇ ಸಾಲಿನ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವಿದ್ಯಾರ್ಥಿವೇತನಕ್ಕೂ ಅವರು ಭಾಜನರಾಗಿದ್ದಾರೆ.




Tags

Commonwealth Games
share
ವಾರ್ತಾಭಾರತಿ
ವಾರ್ತಾಭಾರತಿ
Next Story
X