Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಕೇಂದ್ರ ಸರಕಾರ ಜಾರಿಗೊಳಿಸಿದ...

ಬೆಂಗಳೂರು: ಕೇಂದ್ರ ಸರಕಾರ ಜಾರಿಗೊಳಿಸಿದ ನಾಲ್ಕು ಕಾರ್ಮಿಕ ಸಂಹಿತೆಗಳ ವಿರೋಧಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ23 Nov 2025 12:36 AM IST
share
ಬೆಂಗಳೂರು: ಕೇಂದ್ರ ಸರಕಾರ ಜಾರಿಗೊಳಿಸಿದ ನಾಲ್ಕು ಕಾರ್ಮಿಕ ಸಂಹಿತೆಗಳ ವಿರೋಧಿಸಿ ಪ್ರತಿಭಟನೆ

ಬೆಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ, ಆಲ್ ಇಂಡಿಯಾ ಯುನೈಡೆಟ್ ಟ್ರೇಡ್ ಯೂನಿಯನ್ ಸೆಂಟರ್ ವತಿಯಿಂದ ಶನಿವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಸರಕಾರ ಜಾರಿಗೊಳಿಸಿದ 4 ಹೊಸ ಕಾರ್ಮಿಕ ಸಂಹಿತೆಗಳು ವ್ಯವಹಾರವನ್ನು ಸುಲಭಗೊಳಿಸುವ ಹೆಸರಿನಲ್ಲಿ, ಕಾರ್ಮಿಕರ ಹಕ್ಕುಗಳನ್ನು ಮತ್ತು ರಕ್ಷಣೆಯನ್ನು ಮೊಟಕುಗೊಳಿಸುವ ಮೂಲಕ, ಬಂಡವಾಳಶಾಹಿ ಮತ್ತು ಉದ್ಯಮದ ಪರವಾಗಿವೆ. ಇದು ಪ್ರಗತಿಪರ ಸುಧಾರಣೆಯಲ್ಲ, ಬದಲಿಗೆ ಕಾರ್ಮಿಕ ವಿರೋಧಿ ನಡೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.

ಕೈಗಾರಿಕಾ ಸಂಬಂಧಗಳ ಸಂಹಿತೆ ಅಡಿಯಲ್ಲಿ, ಉದ್ಯೋಗಿಗಳನ್ನು ವಜಾ ಮಾಡಲು ಅಥವಾ ಕಾರ್ಖಾನೆಗಳನ್ನು ಮುಚ್ಚಲು ಸರಕಾರದ ಅನುಮತಿಯ ಅಗತ್ಯವಿರುವ ಸಂಸ್ಥೆಗಳ ಗಾತ್ರವನ್ನು ಹೆಚ್ಚಿಸಲಾಗಿದೆ. ಉದಾಹರಣೆಗೆ, ಕೆಲವು ರಾಜ್ಯಗಳಲ್ಲಿ 300 ಕಾರ್ಮಿಕರನ್ನು ಹೊಂದಿರುವ ಸಂಸ್ಥೆಗಳಿಗೆ ಈ ಮಿತಿ ವಿಸ್ತರಿಸಲಾಗಿದೆ. ಇದರಿಂದಾಗಿ ಸಣ್ಣ ಮತ್ತು ಮಧ್ಯಮ ಗಾತ್ರದ ಸಂಸ್ಥೆಗಳು ಸುಲಭವಾಗಿ ಕಾರ್ಮಿಕರನ್ನು ತೆಗೆದುಹಾಕಲು ಸಾಧ್ಯವಾಗುತ್ತದೆ. ಇದು ಉದ್ಯೋಗ ಭದ್ರತೆಯನ್ನು ಕಡಿಮೆ ಮಾಡುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೈಗಾರಿಕಾ ಸಂಬಂಧಗಳ ಸಂಹಿತೆಯು ಮುಷ್ಕರ ಎಂಬ ಪದದ ವ್ಯಾಖ್ಯೆಯನ್ನು ವಿಸ್ತರಿಸಿದೆ. ಮುಷ್ಕರಕ್ಕೆ ಹೋಗುವ ಮೊದಲು 14-ದಿನಗಳ ನೋಟಿಸ್ ಕಡ್ಡಾಯಗೊಳಿಸಿದೆ. ಇದು ಮುಷ್ಕರ ನಡೆಸುವುದನ್ನು ಕಷ್ಟಕರವಾಗಿಸುತ್ತದೆ ಮತ್ತು ಕಾರ್ಮಿಕರ ಸಂಘಟಿತ ಶಕ್ತಿಯನ್ನು ದುರ್ಬಲಗೊಳಿಸುತ್ತದೆ. ಕಾರ್ಮಿಕ ಕಾಯಿದೆಗಳನ್ನು ಕೇಂದ್ರೀಕರಿಸುವುದರಿಂದ, ಸಂಸ್ಥೆಗಳು ಮತ್ತು ಮಾಲಕರು ಕಡಿಮೆ ನಿಯಂತ್ರಣ ಮತ್ತು ಪರಿಶೀಲನೆಗೆ ಒಳಪಟ್ಟಿರುತ್ತಾರೆ. ಸಂಹಿತೆಗಳು ಅನುಸರಣೆಯನ್ನು ಸರಳಗೊಳಿಸುವುದಾಗಿ ಹೇಳಿದರೂ, ಇದು ವಾಸ್ತವವಾಗಿ ದುರ್ಬಲ ಕಾರ್ಮಿಕ ಶ್ರಮ ಪರಿಶೀಲನಾ ವ್ಯವಸ್ಥೆಗೆ ಕಾರಣವಾಗಬಹುದು ಆತಂಕ ವ್ಯಕ್ತಪಡಿಸಿದರು.

ಸಾಮಾಜಿಕ ಭದ್ರತಾ ಸಂಹಿತೆ, ಗುತ್ತಿಗೆ ಕಾರ್ಮಿಕರು ಮತ್ತು ಗಿಗ್ ವರ್ಕರ್ಸ್ ಬಗ್ಗೆ ಮಾತನಾಡಿದರೂ, ಎಲ್ಲಾ ಕಾರ್ಮಿಕರಿಗೆ ಸಮಗ್ರ ಮತ್ತು ಕಡ್ಡಾಯ ಸಾಮಾಜಿಕ ಭದ್ರತೆಯನ್ನು ಖಚಿತಪಡಿಸುವುದಿಲ್ಲ. ವೇತನ ಸಂಹಿತೆಯಲ್ಲಿ ಕೆಲಸದ ಸಮಯಕ್ಕೆ ಸಂಬಂಧಿಸಿದ ನಿಯಮಗಳಲ್ಲಿನ ಬದಲಾವಣೆಗಳು, ಕೆಲವೊಮ್ಮೆ, ಕೆಲಸದ ಸಮಯವನ್ನು 8 ಗಂಟೆಗಳಿಂದ 12 ಗಂಟೆಗಳವರೆಗೆ ಹೆಚ್ಚಿಸಲು ಸಂಸ್ಥೆಗಳಿಗೆ ಅವಕಾಶ ನೀಡಬಹುದು ಎಂಬ ಆತಂಕವಿದೆ. ಇದು ಕಾರ್ಮಿಕರ ಮೇಲೆ ಒತ್ತಡವನ್ನು ಹೆಚ್ಚಿಸುತ್ತದೆ ಎಂದರು.

ಈ ಹೊಸ ಕಾರ್ಮಿಕ ಸಂಹಿತೆಗಳ ಬಗ್ಗೆ ಕೇಂದ್ರ ಸರಕಾರವು ಸ್ವಾತಂತ್ರ್ಯದ ನಂತರದ ಅತ್ಯಂತ ಸಮಗ್ರ ಮತ್ತು ಪ್ರಗತಿಪರ ಸುಧಾರಣೆಗಳು ಎಂದು ಬಣ್ಣಿಸಿದ್ದರೂ, ಅವು ವಾಸ್ತವದಲ್ಲಿ ಬಂಡವಾಳಶಾಹಿಗಳ ಪರವಾಗಿವೆ. ದಶಕಗಳಿಂದ ಗಳಿಸಿದ ಕಾರ್ಮಿಕ ಹಕ್ಕುಗಳನ್ನು ಕಸಿದುಕೊಳ್ಳುವಂತಿವೆ ಪ್ರತಿಭಟನಾನಿರತ ಕಾರ್ಮಿಕರು ಆಕ್ಷೇಪ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಆಲ್ ಇಂಡಿಯಾ ಯುನೈಡೆಟ್ ಟ್ರೇಡ್ ಯೂನಿಯನ್ ಸೆಂಟರ್ ರಾಜ್ಯಾಧ್ಯಕ್ಷ ಕೆ.ಸೋಮಶೇಖರ್, ಉಪಾಧ್ಯಕ್ಷ ಕೆ.ವಿ.ಭಟ್, ದೇವದಾಸ್ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X