Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅನ್ಯಾಯಕ್ಕೆ ಒಳಗಾದವರಷ್ಟೇ ದುಖಿಃಸುವ...

ಅನ್ಯಾಯಕ್ಕೆ ಒಳಗಾದವರಷ್ಟೇ ದುಖಿಃಸುವ ಸಂವೇದನಶೀಲತೆಯನ್ನು ಯುವ ಲೇಖಕರು ಬೆಳೆಸಿಕೊಳ್ಳಲಿ: ಬಾನು ಮುಷ್ತಾಕ್

ವಾರ್ತಾಭಾರತಿವಾರ್ತಾಭಾರತಿ6 Aug 2025 12:00 AM IST
share
ಅನ್ಯಾಯಕ್ಕೆ ಒಳಗಾದವರಷ್ಟೇ ದುಖಿಃಸುವ ಸಂವೇದನಶೀಲತೆಯನ್ನು ಯುವ ಲೇಖಕರು ಬೆಳೆಸಿಕೊಳ್ಳಲಿ: ಬಾನು ಮುಷ್ತಾಕ್
Booker Banu Mushtaq‌

ಬೆಂಗಳೂರು: ಅನ್ಯಾಯಕ್ಕೆ ಒಳಗಾದವರಷ್ಟೇ ದುಖಿಃಸುವ ಸಂವೇದನಶೀಲತೆಯನ್ನು ಯುವ ಲೇಖಕರು ಬೆಳೆಸಿಕೊಳ್ಳಬೇಕು. ಹಾಗಿದ್ದರೆ ಮಾತ್ರ ಬರವಣಿಗೆಯಲ್ಲಿ ಬೆಳೆವಣಿಗೆ ಸಾಧ್ಯ ಎಂದು ಬೂಕರ್ ವಿಜೇತ ಲೇಖಕಿ ಬಾನು ಮುಷ್ತಾಕ್ ಅಭಿಪ್ರಾಯಪಟ್ಟಿದ್ದಾರೆ.

ಮಂಗಳವಾರ ಇಲ್ಲಿನ ನಯನ ಸಭಾಂಗಣದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಲೇಖಕಿಯರ ಸಂಘ ಆಯೋಜಿಸಿದ್ದ ‘ಬುಕರ್ ಬಾನು ಮುಷ್ತಾಕ್; ಉಪನ್ಯಾಸ-ಸಂವಾದ - ಅಭಿನಂದನೆ’ ಕಾರ್ಯಕ್ರಮದ ಸಂವಾದದಲ್ಲಿ ಅವರು ಮಾತನಾಡಿದರು.

ಯಾವಾಗ ಬರೆಯಬೇಕು ಎಂದು ನಿರ್ಧರಿಸಿದೆನೊ, ಆಗ ಉರ್ದುನಲ್ಲಿ ಬರಿಬೇಕಾ? ಕನ್ನಡದಲ್ಲಿ ಬರೀಬೇಕಾ ಎಂಬ ಪ್ರಶ್ನೆ ಎದುರಾಗಿತ್ತು. ಯಾವ ಸಂಸ್ಕೃತಿಕ ಹಿನ್ನೆಲೆಯಲ್ಲಿ ಬರೆಯಬೇಕು. ನನ್ನ ಓದುಗರು ಯಾರು ಎಂಬ ಪ್ರಶ್ನೆ ಕಾಡಿತ್ತು. ಇದನ್ನು ಬಂಡಾಯ ಸಾಹಿತ್ಯಗಳ ಶಿಬಿರಗಳ ಮೂಲಕ ಅರಿತುಕೊಳ್ಳಲು ಪ್ರಯತ್ನಿಸುತ್ತಿದ್ದೆ. ಹೀಗಾಗಿ ನನ್ನ ಮೊದಲ ಕಥೆಗಳು ಪ್ರಾಯೋಗಿಕವಾಗಿದ್ದವು ಎಂದು ಅವರು ವಿವರಿಸಿದರು.

ಉರ್ದು ಹಿನ್ನೆಲೆಯಿಂದ ಬಂದ ನನಗೆ ಕನ್ನಡದ ಓದು, ಕನ್ನಡ ಸಾಂಸ್ಕೃತಿಕ ಲೋಕದ ಪ್ರಭಾವದಿಂದಲೇ ಬದುಕು ರೂಪುಗೊಳ್ಳಲು ಸಾಧ್ಯವಾಯಿತು. ನಾನು ಉರ್ದು ಭಾಷೆಯನ್ನೇ ಓದಿದ್ದರೆ, ಬಹುಶಃ ನನ್ನ ವ್ಯಕ್ತಿತ್ವ ಈ ರೀತಿಯಲ್ಲಿ ರೂಪುಗೊಳ್ಳಲು ಸಾಧ್ಯ ಆಗುತ್ತಿರಲಿಲ್ಲ. ಜೊತೆಗೆ ಈ ರೀತಿಯ ಬರವಣಿಗೆಯೂ ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಕನ್ನಡದ ಓದುವಿಕೆ ನನ್ನ ಮೇಲೆ ಆಗಾಧ ಪರಿಣಾಮ ಬೀರಿತು ಎಂದು ಅವರು ಹೇಳಿದರು.

ಎಲ್ಲ ಗಡಿ ದಾಟಿ ಇಡೀ ಪ್ರಪಂಚದಾದ್ಯಂತ ಎಲ್ಲಿಲ್ಲಿ ಹೆಣ್ಣಿಗೆ ಅಸಮಾನತೆ ಇದೆಯೋ, ಪಿತೃಪ್ರಧಾನತೆ, ಹಿಂಸೆ ಕೌಟುಂಬಿಕ ಸಂಬಂಧದ ಭಾಗವಾಗಿದೆಯೋ ಅಲ್ಲೆಲ್ಲ ನಾನು ಬರೆದ ಕೃತಿ ಅನ್ವಯವಾಗುತ್ತಿತ್ತು. ಜ್ಯೂರಿಗಳು ಬೂಕರ್ ಗೆ ನನ್ನ ಕೃತಿ ಆಯ್ಕೆ ಮಾಡಲು ಇದು ಒಂದು ಕಾರಣವಾಗಿದೆ ಎಂದು ಬಾನು ಮುಷ್ತಾಕ್ ಹೇಳಿದರು.

ವಿಮರ್ಷಕಿ ಡಾ.ಎಂ.ಎಸ್. ಆಶಾದೇವಿ ಮಾತನಾಡಿ, ಬಾನು ಅವರಿಗೆ ಬಂದ ಬೂಕರ್ ಪ್ರಶಸ್ತಿಯು, ಹೆಣ್ಣನ್ನು ಕಟ್ಟಿಹಾಕಿ ಆಕೆಯ ಬೆಳವಣಿಗೆಯನ್ನು ಕುಗ್ಗಿಸುವ ಹಾಗೂ ಹೆಣ್ಣನ್ನು ದೇವಿಯ ಹೆಸರಲ್ಲಿ ಸೀಮಿತಗೊಳಿಸುವ ಇಬ್ಬರಿಗೂ ಕಪಾಳ ಮೋಕ್ಷವನ್ನು ಕೊಟ್ಟಿದೆ. ಸ್ವತಂತ್ರ ಚಿಂತನೆಗೆ ಈ ಪ್ರಶಸ್ತಿಯು ಪ್ರೇರಣೆಯಾಗಿದೆ ಎಂದು ಹೇಳಿದರು.

ವಿದ್ವಾಂಸ ಹಂಪ ನಾಗರಾಜಯ್ಯ, ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರತಿಭಾ ನಂದಕುಮಾರ್, ಡಾ.ವಸುಂಧರಾ ಭೂಪತಿ, ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್ ಮುಕುಂದರಾಜ್ ಸೇರಿ ಇತರರು ಬಾನು ಮುಷ್ತಾಕ್ ಅವರನ್ನು ಅಭಿನಂದಿಸಿದರು. ಸಾಹಿತಿ ಜಿ.ಎನ್.ಮೋಹನ್, ವಿನಯ ಒಕ್ಕುಂದ ಸೇರಿದಂತೆ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X