Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಮಾರಾಟ...

ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಮಾರಾಟ ಜಾಲ ಪತ್ತೆ; 8 ಮಂದಿ ವಿದೇಶಿ ಡ್ರಗ್ಸ್ ಪೆಡ್ಲರ್, 39 ಮಂದಿ ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ10 Aug 2026 6:35 PM IST
share
ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಮಾರಾಟ ಜಾಲ ಪತ್ತೆ; 8 ಮಂದಿ ವಿದೇಶಿ ಡ್ರಗ್ಸ್ ಪೆಡ್ಲರ್, 39 ಮಂದಿ ಆರೋಪಿಗಳ ಬಂಧನ
200 ಕೆಜಿಗೂ ಅಧಿಕ ಮಾದಕ ವಸ್ತು ಜಪ್ತಿ

ಬೆಂಗಳೂರು : ನಗರದಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಬೃಹತ್ ಜಾಲ ಪತ್ತೆಯಾಗಿದ್ದು, ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ಹಾಗೂ ನಗರ ಪೊಲೀಸರು, 8 ಮಂದಿ ವಿದೇಶಿ ಡ್ರಗ್ಸ್ ಪೆಡ್ಲರ್, 21 ಹೊರ ರಾಜ್ಯದ ಹಾಗೂ 10 ಸ್ಥಳೀಯ ವ್ಯಕ್ತಿಗಳು ಸೇರಿದಂತೆ ಒಟ್ಟು 39 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ ಒಟ್ಟು 28.07 ಕೋಟಿ ರೂ. ಮೌಲ್ಯದ 200 ಕೆಜಿಗೂ ಅಧಿಕ ಮಾದಕ ವಸ್ತುವನ್ನು ಜಪ್ತಿ ಮಾಡಲಾಗಿದೆ. ಅಮೃತಹಳ್ಳಿ, ಗಿರಿನಗರ, ಯಶವಂತಪುರ, ಯಲಹಂಕ, ಹೆಬ್ಬಾಳ, ನಂದಿನಿ ಲೇಔಟ್, ಕಾಡುಗೋಡಿ, ಮಲ್ಲೇಶ್ವರಂ, ಗೋವಿಂದಪುರ, ಬಾಗಲೂರು, ಮಹದೇವಪುರ, ಮಹಾಲಕ್ಷ್ಮೀ ಲೇಔಟ್, ಬೇಗೂರು ಹಾಗೂ ಕೊತ್ತನೂರು ಠಾಣಾ ಪೊಲೀಸರು ಪ್ರತ್ಯೇಕವಾಗಿ ಕಾರ್ಯಾಚರಣೆ ನಡೆಸಿ, ಆರೋಪಿಗಳಿಂದ ನಿಷೇಧಿತ ಮಾದಕ ವಸ್ತುಗಳಾದ 21.64 ಕೆಜಿ ಎಂಡಿಎಂಎ, 738 ಗ್ರಾಂ ಕೋಕೇನ್, 4.49 ಕೆಜಿ ಗ್ರಾಂ ಹೈಡೋಗಾಂಜಾ, 184.62 ಕೆಜಿ ಗಾಂಜಾ, 1.65 ಕೆಜಿ ಅಫೀಮು, 25 ಗ್ರಾಂ ಮಾರ್ಫಿನ್, 17 ಲಕ್ಷ ರೂ. ನಗದು, 22 ಮೊಬೈಲ್ ಫೋನ್‍ಗಳು ಹಾಗೂ 5 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಇವುಗಳ ಒಟ್ಟು ಆರಂಭಿಕ ಮೌಲ್ಯ 28.07 ಕೋಟಿ ರೂ. ಆಗಿದ್ದು, ಮಾರುಕಟ್ಟೆ ಮೌಲ್ಯವು 55.80 ಕೋಟಿ ರೂ.ಗೆ ಏರಿಕೆಯಾಗಲಿದೆ.

ಹೊಸದಿಲ್ಲಿಯಲ್ಲಿ ಮಾದಕವಸ್ತು ತಯಾರಿಸಿ, ರಾಜ್ಯದ ಕಾಲೇಜಿನ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ, ಆಮ್ನೀ ಸಿಂಗ್ ಮತ್ತು ನೈಜೀರಿಯಾದ ಓಬಮ್ ಎಂಬ ಆರೋಪಿಗಳನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದು, 14.44 ಕೋಟಿ ರೂ. ಮೌಲ್ಯದ 14.43 ಕೆ.ಜಿ. ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಗಿರಿನಗರ ಪೊಲೀಸರು 5.18 ಕೋಟಿ ಮೌಲ್ಯದ 5.179 ಕೆ.ಜಿ. ಎಂಡಿಎಂಎ, 1 ಮೊಬೈಲ್, ಸಿಸಿಬಿಯಿಂದ 4.44 ಕೋಟಿ ರೂ.ಮೌಲ್ಯದ 738 ಗ್ರಾಂ ಕೋಕೇನ್, 336 ಗ್ರಾಂ ಎಂಡಿಎಂಎ, 82.305 ಕೆ.ಜಿ. ಗಾಂಜಾ, 2 ದ್ವಿಚಕ್ರ ವಾಹನ, 3 ಮೊಬೈಲ್ ಅನ್ನು ವಶಕ್ಕೆ ಪಡೆದಿದ್ದಾರೆ.

ಕೆಐಎ ಪೊಲೀಸರು 1.5 ಕೋಟಿ ರೂ. ಮೌಲ್ಯದ 4.27 ಕೆ.ಜಿ. ಹೈಡ್ರೋ ಗಾಂಜಾ, ಯಶವಂತಪುರ 82.72 ಲಕ್ಷ ರೂ.ಮೌಲ್ಯದ 650 ಗ್ರಾಂ ಎಂಡಿಎಂಎ, 41.446 ಕೆ.ಜಿ. ಗಾಂಜಾ, 1 ದ್ವಿಚಕ್ರ ವಾಹನ, 3 ಮೊಬೈಲ್, ಯಲಹಂಕ 79.40 ಲಕ್ಷ ರೂ. ಮೌಲ್ಯದ 794 ಗ್ರಾಂ ಎಂಡಿಎಂಎ, 2 ಮೊಬೈಲ್ ಜಪ್ತಿ ಮಾಡಿದ್ದಾರೆ. ಹೆಬ್ಬಾಳ ಪೊಲೀಸರು 9.60 ಲಕ್ಷ ಮೌಲ್ಯದ 96 ಗ್ರಾಂ ಎಂಡಿಎಂಎ, 17 ಲಕ್ಷ ರೂ. ನಗದು, 2 ಮೊಬೈಲ್ ಜಪ್ತಿ ಮಾಡಿದ್ದರೆ, ನಂದಿನಿ ಲೇಔಟ್ ಪೊಲೀಸರು 15 ಲಕ್ಷ ಮೌಲ್ಯದ 150 ಗ್ರಾಂ ಎಂಡಿಎಂಎ, 8 ಮೊಬೈಲ್, ಒಂದು ದ್ವಿಚಕ್ರ ವಾಹನ, ಕಾಡುಗೋಡಿ ಪೊಲೀಸರು 7.90 ಲಕ್ಷ ರೂ. ಮೌಲ್ಯದ 15.80 ಕೆ.ಜಿ ಗಾಂಜಾ, ಮಲ್ಲೇ ಶ್ವರಂ ಪೊಲೀಸರು 7.53 ಲಕ್ಷ ರೂ. ಮೌಲ್ಯದ 215 ಗ್ರಾಂ ಹೈಡ್ರೋ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಗೋವಿಂದಪುರ ಪೊಲೀಸರು 5.64 ಲಕ್ಷ ರೂ. ಮೌಲ್ಯದ 11.27 ಕೆ.ಜಿ ಗಾಂಜಾ, ಬಾಗಲೂರು ಪೊಲೀಸರು 5.39 ಲಕ್ಷ ರೂ. ಮೌಲ್ಯದ 25 ಗ್ರಾಂ ಮಫಿನ್ಸ್‌ ಹಾಗೂ 5.780 ಕೆ.ಜಿ, ಮಹದೇವಪುರ 5.29 ಲಕ್ಷ ರೂ. ಮೌಲ್ಯದ 10.57 ಕೆ.ಜಿ ಗಾಂಜಾ, ಮಹಾಲಕ್ಷ್ಮಿಲೇಔಟ್‍ನಲ್ಲಿ 5.33 ಲಕ್ಷ ರೂ. ಮೌಲ್ಯದ 1.65 ಕೆ.ಜಿ ಅಫೀಮು, ಒಂದು ದ್ವಿಚಕ್ರ ವಾಹನ, 2 ಮೊಬೈಲ್, ಬೇಗೂರು 5 ಕ್ಷರೂ. ಮೌಲ್ಯದ 10 ಕೆಜಿ ಗಾಂಜಾ, ಕೊತ್ತನೂರು ಪೊಲೀಸರು 7.44 ಲಕ್ಷ ರೂ. ಮೌಲ್ಯದ 7.44 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಹೆಚ್ಚಿನ ಹಣಗಳಿಸುವ ಉದ್ದೇಶದಿಂದ ವಿದೇಶ, ಹೊರ ರಾಜ್ಯ ಹಾಗೂ ರಾಜ್ಯದ ಅಪರಿಚಿತ ವ್ಯಕ್ತಿಗಳಿಂದ ನಿಷೇಧಿತ ಮಾದಕ ವಸ್ತುಗಳನ್ನು ಕಡಿಮೆ ಬೆಲೆಗೆ ಖರೀದಿಸಿಕೊಂಡು ಬಂದು ಸಾರ್ವಜನಿಕರಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ಒಪ್ಪಿಕೊಂಡಿದ್ದಾರೆ. ಇನ್ನು ಈ ಆರೋಪಿಗಳಿಗೆ ನಿಷೇಧಿತ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಅಪರಿಚಿತ ವ್ಯಕ್ತಿಗಳ ಪತ್ತೆ ಕಾರ್ಯ ಮುಂದುವರೆದಿದ್ದು, ಪ್ರಕರಣಗಳು ಪ್ರಗತಿಯಲ್ಲಿವೆ.

-ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಪೊಲೀಸ್ ಆಯುಕ್ತ

Tags

Drug traffickingBengaluruDrug Peddlers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X