Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲಾಲ್‍ಬಾಗ್ ಮಾದರಿ ಮೂರು ಉದ್ಯಾನ...

ಲಾಲ್‍ಬಾಗ್ ಮಾದರಿ ಮೂರು ಉದ್ಯಾನ ನಿರ್ಮಾಣಕ್ಕೆ ಚಿಂತನೆ: ಸಿಎಂ ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ6 Aug 2026 8:40 PM IST
share
ಲಾಲ್‍ಬಾಗ್ ಮಾದರಿ ಮೂರು ಉದ್ಯಾನ ನಿರ್ಮಾಣಕ್ಕೆ ಚಿಂತನೆ: ಸಿಎಂ ಡಿ.ಕೆ. ಶಿವಕುಮಾರ್
ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದಲ್ಲಿ ಲಾಲ್‍ಬಾಗ್ ಮಾದರಿಯ ಮೂರು ಉದ್ಯಾನ ವನಗಳನ್ನು ನಿರ್ಮಾಣ ಮಾಡಲು ನಮ್ಮ ಸರಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಗುರುವಾರ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಗರದ ಲಾಲ್‍ಬಾಗ್‍ನಲ್ಲಿ ಆಯೋಜಿಸಿರುವ ‘ಗಂಗ ಸಾಮ್ರಾಜ್ಯ ವೈಭವ’ ಪರಿಕಲ್ಪನೆಯ 220ನೇ ಫಲಪುಷ್ಪ ಪ್ರದರ್ಶನಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.

ಬೆಂಗಳೂರಿನಲ್ಲಿರುವ ರಕ್ಷಣಾ ಇಲಾಖೆ ಜಾಗದಲ್ಲಿ ಉದ್ಯಾನ ನಿರ್ಮಾಣ ಮಾಡುವ ಉದ್ದೇಶವಿದೆ. ಈ ಭೂಮಿ ರಕ್ಷಣಾ ಇಲಾಖೆ ವಶದಲ್ಲೇ ಇರುತ್ತದೆ. ಆದರೆ ಅಲ್ಲಿ ಉದ್ಯಾನ ನಿರ್ಮಿಸಲು ಅನುಮತಿ ಬೇಕು ಎಂದು ಪತ್ರ ಬರೆದಿದ್ದು, ಸಧ್ಯದಲ್ಲೇ ರಕ್ಷಣಾ ಸಚಿವರನ್ನು ಭೇಟಿ ಮಾಡುತ್ತೇನೆ. ವಾರಣಾಸಿಯಲ್ಲಿ ರಕ್ಷಣಾ ಇಲಾಖೆ ಜಾಗದಲ್ಲಿ ಉದ್ಯಾನ ನಿರ್ಮಿಸಲು ಪ್ರಧಾನಮಂತ್ರಿಗಳು ಅನುಮತಿ ನೀಡಿದ್ದಾರೆ. ಇದರ ಜೊತೆಗೆ ಬೆಂಗಳೂರು ನಗರದೊಳಗೆ ಇರುವ ಅರಣ್ಯ ಜಾಗದಲ್ಲಿ ಉದ್ಯಾನವನ ನಿರ್ಮಿಸಲು ತೀರ್ಮಾನಿಸಲಾಗಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಜಿಬಿಎ, ಬಿಡಿಎ, ತೋಟಗಾರಿಕೆ ಇಲಾಖೆ ಸೇರಿದಂತೆ ಇತರ ಇಲಾಖೆಗಳಿಗೆ ಜವಾಬ್ದಾರಿ ವಹಿಸಿ ಉದ್ಯಾನ ನಿರ್ಮಿಸಲು ಆಲೋಚಿಸಿದ್ದೇವೆ. ನಮ್ಮ ಕಾಲದಲ್ಲಿ ನಗರದ ಹಸಿರು ಕಾಪಾಡಿ, ಸಾರ್ವಜನಿಕರ ಬದುಕಿಗೆ ಅನುಕೂಲ ಮಾಡಿಕೊಡಲು ಮುಂದಾಗಿದ್ದೇವೆ ಎಂದು ತಿಳಿಸಿದರು.

ಲಾಲ್‍ಬಾಗ್ ಕೇವಲ ಉದ್ಯಾನವನ ಮಾತ್ರವಲ್ಲ. ಇದೊಂದು ಇತಿಹಾಸ. ಗಂಗ ಸಾಮ್ರಾಜ್ಯದಲ್ಲಿ ಕೃಷಿಕರು, ರೈತರ ಇತಿಹಾಸವನ್ನು ಇಟ್ಟುಕೊಂಡು ಫಲಪುಷ್ಟ ಪ್ರದರ್ಶನವನ್ನು ರೂಪಿಸಲಾಗಿದೆ. ಗಂಗರು ಆಗಿನ ಕಾಲದಲ್ಲಿ ಕಟ್ಟಿದ್ದ ಕೆರೆಗಳು ಇಂದಿಗೂ ಉಳಿದಿವೆ. ಕಷ್ಟಕಾಲದಲ್ಲಿ ಆ ಕೆರೆಗಳು ರಕ್ಷಣೆ ಮಾಡಿವೆ. ಗಂಗರ ಇತಿಹಾಸ ಸಮಾನತೆ, ಕೃಷಿಕರ ಬದುಕು, ಹೋರಾಟವನ್ನು ಹೊಂದಿದೆ ಎಂದು ಹೇಳಿದರು.

ರಾಜ್ಯದಲ್ಲಿ ಹಸಿರು ಹೆಚ್ಚಿಸಿ ರೈತರ ಬದುಕು ಕಾಪಾಡುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಿದ್ದೇವೆ. ಇದು ರೈತರು ಹಾಗೂ ಸರಕಾರದ ನಡುವಿನ ಪಾಲುದಾರಿಕೆಯ ಕಾರ್ಯಕ್ರಮವಾಗಿದೆ. ಇದನ್ನು ಆ. 15ರಂದು ಪ್ರಕಟಿಸುತ್ತೇವೆ. ಸರಕಾರದ 100 ದಿನಗಳ ಕಾರ್ಯಕ್ರಮ ರೂಪಿಸಲಾಗಿದ್ದು, ರೈತರ ಬದುಕಿಗೆ ಯಾವ ರೀತಿ ಶಕ್ತಿ ತುಂಬಬೇಕು ಎಂದು ಆಲೋಚಿಸಿ ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ತೋಟಗಾರಿಕೆ ಇಲಾಖೆ (ಉದ್ಯಾನವನ, ಪುಷ್ಪಾಭಿವೃದ್ಧಿ) ಅಪರ ನಿರ್ದೇಶಕ ಡಾ.ಎಂ.ಜಗದೀಶ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags

D.K. ShivakumarLalbagh
share
ವಾರ್ತಾಭಾರತಿ
ವಾರ್ತಾಭಾರತಿ
Next Story
X