Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮುಂಬೈ ಡಿಸಿಪಿ ಸೋಗಿನಲ್ಲಿ ಬೆಂಗಳೂರಿನ...

ಮುಂಬೈ ಡಿಸಿಪಿ ಸೋಗಿನಲ್ಲಿ ಬೆಂಗಳೂರಿನ ಟೆಕ್ಕಿಗೆ 33.24 ಲಕ್ಷ ರೂ. ವಂಚನೆ: ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ2 July 2023 8:19 PM IST
share
ಮುಂಬೈ ಡಿಸಿಪಿ ಸೋಗಿನಲ್ಲಿ ಬೆಂಗಳೂರಿನ ಟೆಕ್ಕಿಗೆ 33.24 ಲಕ್ಷ ರೂ. ವಂಚನೆ: ಪ್ರಕರಣ ದಾಖಲು

ಬೆಂಗಳೂರು, ಜು.2: ಮುಂಬೈನಿಂದ ತೈವಾನ್ ದೇಶಕ್ಕೆ ಕೆಲವು ವಸ್ತುಗಳ ಅಕ್ರಮ ಪೂರೈಕೆಗೆ ಪಾಸ್‍ಪೋರ್ಟ್, ಆಧಾರ್ ಬಳಕೆಯಾಗಿದೆ ಎಂದು ಮುಂಬೈ ಪೊಲೀಸ್ ಡಿಸಿಪಿ ಹೆಸರಿನಲ್ಲಿ ಬೆಂಗಳೂರಿನ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರಿಗೆ ಸೈಬರ್ ವಂಚಕರು ಕರೆ ಮಾಡಿ, 33.24ಲಕ್ಷ ರೂ.ವಂಚಿಸಿರುವ ಘಟನೆ ವರದಿಯಾಗಿದೆ.

ನಾಗನಾಥಪುರದ ನಿವಾಸಿ ದಿನೇಶ್ ಪಾಟಕ್ (39) ವಂಚನೆಗೊಳಗಾದ ಸಾಫ್ಟ್ ವೇರ್ ಇಂಜಿನಿಯರ್. ಜೂ.27ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದಿನೇಶ್ ಪಾಟಕ್‍ಗೆ ಅಪರಿಚಿತ ಮೊಬೈಲ್ ನಂಬರ್‍ ನಿಂದ ಸುಮಾರು ಕರೆಗಳು ಬಂದಿವೆ.

ಈ ವೇಳೆ ತಾವು ಫೆಡೆಕ್ಸ್ ಕೊರಿಯರ್‍ನವರು ಎಂದು ಪರಿಚಯಿಸಿಕೊಂಡ ವಂಚಕರು, ‘ಮುಂಬೈನಿಂದ ತೈವಾನ್‍ಗೆ ಅಕ್ರಮವಾಗಿ ಎಂಡಿಎಂ, ಲ್ಯಾಪ್‍ಟಾಪ್, ಬಟ್ಟೆಗಳ ಪಾರ್ಸೆಲ್ ರವಾನಿಸಲು ನಿಮ್ಮ ಪಾಸ್‍ ಪೋರ್ಟ್ ಮತ್ತು ಆಧಾರ್ ಬಳಕೆಯಾಗಿದೆ’ ಎಂದು ನಂಬಿಸಿದ್ದಾರೆ. ಬಳಿಕ ನಿಮ್ಮ ಕರೆಯನ್ನು ಮುಂಬೈ ಪೊಲೀಸರಿಗೆ ವರ್ಗಾವಣೆ ಮಾಡುವುದಾಗಿ ತಿಳಿಸಿ ಅಪರಿಚಿತ ನಂಬರ್‍ಗೆ ಕರೆ ವರ್ಗಾಯಿಸಿದ್ದಾರೆ. ವಂಚಕರ ಮಾತನ್ನು ನಂಬಿ ದಿನೇಶ್ ಪಾಟಕ್ ಮಾತು ಮುಂದುವರಿಸಿದ್ದಾರೆ ಎನ್ನಲಾಗಿದೆ.

ದೂರವಾಣಿ ಕರೆಯಲ್ಲಿ ಮಾತನಾಡಿದ್ದ ಅಪರಿಚಿತ ವ್ಯಕ್ತಿಯೊಬ್ಬ ತಾವು ಮುಂಬೈ ಪೊಲೀಸ್ ಡಿಸಿಪಿ ಎಂದು ಹೇಳಿಕೊಂಡು ಮಾತನಾಡಿದ್ದಾರೆ. ‘ನಿಮ್ಮ ಹೆಸರಲ್ಲಿ ಅಕ್ರಮವಾಗಿ ವಸ್ತುಗಳು ರವಾನೆಯಾಗಿವೆ. ಆದ್ದರಿಂದ ನಿಮ್ಮ ವಿರುದ್ಧ ಮನಿ ಲಾಂಡರಿಂಗ್ ಕೇಸ್ ದಾಖಲಾಗುತ್ತದೆ’ ಎಂದು ಬೆದರಿಸಿ ಮೊಬೈಲ್‍ನಲ್ಲಿ ಸ್ಕೈಪ್ ಆ್ಯಪ್ ಡೌನ್‍ಲೋಡ್ ಮಾಡಲು ಸೂಚಿಸಿದ್ದಾರೆ. ವಂಚಕರ ಮಾತು ಕೇಳಿ ಹೆದರಿದ ಟೆಕ್ಕಿ, ಸ್ಕೈಪ್ ಡೌನ್‍ಲೋಡ್ ಮಾಡಿದ್ದಾರೆ. ಬಳಿಕ ಸ್ಕೈಪ್‍ನಲ್ಲಿ ಕರೆ ಮಾಡಿದ ವಂಚಕರು, ವೆರಿಫಿಕೇಶನ್ ಮಾಡಬೇಕಾಗಿದೆ ಎಂದು ಹೇಳಿದ್ದಾರೆ. ನಿಜವೆಂದು ನಂಬಿದ ದಿನೇಶ್ ಪಾಟಕ್, ವೆರಿಫಿಕೇಷನ್ ಎಂದು ತಮ್ಮ ಆಧಾರ್ ಕಾರ್ಡ್ ನಂಬರ್, ಫೋಟೊ, ಬ್ಯಾಂಕ್ ದಾಖಲೆಗಳನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಬಳಿಕ ವಂಚಕರು ತಾವು ಸೂಚಿಸುವ ಖಾತೆಗೆ ಹಣ ಹಾಕುವಂತೆ ತಿಳಿಸಿ, ನೀವು ಜಮೆ ಮಾಡುವ ಹಣ ನಿಮ್ಮ ಖಾತೆಗೆ ಮರುಪಾವತಿಸುವುದಾಗಿ ಹೇಳಿ ಹಂತ, ಹಂತವಾಗಿ ವಿವಿಧ ಬ್ಯಾಂಕ್ ಖಾತೆಗಳಿಗೆ 33.24 ಲಕ್ಷ ರೂ. ಜಮೆ ಮಾಡಿಸಿಕೊಂಡಿದ್ದಾರೆ. ನಂತರ ಸಂಪರ್ಕಕ್ಕೆ ಸಿಗದೇ, ಹಣವನ್ನೂ ಮರುಪಾವತಿಸಿದೇ ವಂಚಿಸಿದ್ದಾರೆ. ಪರಿಶೀಲಿಸಿದಾಗ ಇದು ಸೈಬರ್ ವಂಚಕರ ಕೈ ಚಳಕ ಎಂಬುದು ಖಚಿತವಾಗಿದ್ದು, ಸದ್ಯ ದಿನೇಶ್ ಪಾಟಕ್ ನಗರದ ಆಗ್ನೇಯ ವಿಭಾಗದ ಸೈಬರ್ ಕ್ರೈ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X