Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಮುದಾಯದ ಸಮಸ್ಯೆಗಳನ್ನು ಬಗೆಹರಿಸಲು...

ಸಮುದಾಯದ ಸಮಸ್ಯೆಗಳನ್ನು ಬಗೆಹರಿಸಲು ಸಂಘಟಿತ ಪ್ರಯತ್ನ ಅಗತ್ಯ: ಮುಫ್ತಿ ಇಫ್ತಿಖಾರ್ ಅಹ್ಮದ್ ಖಾಸ್ಮಿ

ವಾರ್ತಾಭಾರತಿವಾರ್ತಾಭಾರತಿ23 Nov 2025 12:51 AM IST
share
ಸಮುದಾಯದ ಸಮಸ್ಯೆಗಳನ್ನು ಬಗೆಹರಿಸಲು ಸಂಘಟಿತ ಪ್ರಯತ್ನ ಅಗತ್ಯ: ಮುಫ್ತಿ ಇಫ್ತಿಖಾರ್ ಅಹ್ಮದ್ ಖಾಸ್ಮಿ

ಬೆಂಗಳೂರು: ಪ್ರಸಕ್ತ ಸನ್ನಿವೇಶದಲ್ಲಿ ಸಮುದಾಯವು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಸಂಘಟಿತ ಪ್ರಯತ್ನ ಅಗತ್ಯ ಎಂದು ಜಮೀಯತ್ ಉಲಮಾ ಹಿಂದ್ ರಾಜ್ಯಾಧ್ಯಕ್ಷ ಹಝ್ರತ್ ಮೌಲಾನಾ ಮುಫ್ತಿ ಇಫ್ತಿಖಾರ್ ಅಹ್ಮದ್ ಖಾಸ್ಮಿ ಕರೆ ನೀಡಿದರು.

ಶನಿವಾರ ಮಹದೇವಪುರ ಕ್ಷೇತ್ರದ ಕಾಡುಗುಡಿ ಈದ್ಗಾ ಮೈದಾನದಲ್ಲಿ ವೈಟ್‍ಫೀಲ್ಡ್, ಕೆ.ಆರ್.ಪುರ, ಆನೇಕಲ್, ವಿಜಯಪುರ ಸೇರಿದಂತೆ ಇನ್ನಿತರ ವಲಯಗಳ ಜಮೀಯತ್ ಉಲಮಾ ಹಿಂದ್‍ನ ಪದಾಧಿಕಾರಿಗಳು ಹಾಗೂ ಮಸೀದಿಗಳ ಮುಖ್ಯಸ್ಥರಿಗಾಗಿ ಆಯೋಜಿಸಿದ್ದ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಜಮೀಯತ್ ಉಲಮಾ ಹಿಂದ್ ಬೆಂಗಳೂರು ಜಿಲ್ಲೆಯ ಐದು ತಾಲೂಕುಗಳನ್ನು 20 ವಲಯಗಳಾಗಿ ವಿಂಗಡಿಸಿ ತನ್ನ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿದೆ. ಹೊಸದಾಗಿ ರಚನೆಯಾಗಿರುವ ವೈಟ್‍ಫೀಲ್ಡ್ ಸೇರಿದಂತೆ ಇನ್ನಿತರ ವಲಯಗಳ ಪದಾಧಿಕಾರಿಗಳು ಯಾವ ರೀತಿ ಕೆಲಸ ಕಾರ್ಯಗಳನ್ನು ನಡೆಸಬೇಕು ಎಂಬುದರ ಕುರಿತು ಈ ಕಾರ್ಯಾಗಾರದಲ್ಲಿ ತರಬೇತಿ ನೀಡಲಾಗುವುದು ಎಂದು ಅವರು ಹೇಳಿದರು.

ಜಮೀಯತ್ ಉಲಮಾ ಹಿಂದ್ ಸ್ವಾತಂತ್ರ್ಯ ಪೂರ್ವದಿಂದಲೂ ಸಮಾಜದ ಒಳಿತಿಗಾಗಿ ಕೆಲಸ ಮಾಡುತ್ತಿದೆ. ಮುಸ್ಲಿಮರ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಹಕ್ಕುಗಳ ರಕ್ಷಣೆ, ಸಮುದಾಯದಲ್ಲಿರುವ ಕೆಡಕುಗಳನ್ನು ನಿರ್ಮೂಲನೆ ಮಾಡುವುದು, ಶೈಕ್ಷಣಿಕ ರಂಗದಲ್ಲಿ ಸಮುದಾಯವನ್ನು ಮುಂದಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದು ಇಫ್ತಿಖಾರ್ ಅಹ್ಮದ್ ಖಾಸ್ಮಿ ತಿಳಿಸಿದರು.

ಸರಕಾರದ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸುವುದು, ಪ್ರಚಲಿತ ವಿಚಾರಗಳು, ಸವಾಲುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಸೇರಿದಂತೆ ಸುಮಾರು 30 ಅಂಶಗಳನ್ನು ಮುಂದಿಟ್ಟುಕೊಂಡು ನಾವು ಸಮಾಜದಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.

ಮದ್ರಸಾ ವಿದ್ಯಾರ್ಥಿಗಳಿಗೆ ಧಾರ್ಮಿಕ ಶಿಕ್ಷಣದ ಜೊತೆಗೆ ಲೌಕಿಕ ಶಿಕ್ಷಣ ನೀಡಲು, ನ್ಯಾಷನಲ್ ಇನ್ಸ್‍ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್(ಎನ್‍ಐಒಎಸ್) ಮೂಲಕ ಎಸೆಸೆಲ್ಸಿ ಪರೀಕ್ಷೆ ಬರೆಯಲು ತರಬೇತಿ ನೀಡಲಾಗುತ್ತಿದೆ. ಇಂದು ಸಾವಿರಾರು ಮದ್ರಸಾ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುತ್ತಿದ್ದಾರೆ ಎಂದು ಇಫ್ತಿಖಾರ್ ಅಹ್ಮದ್ ಖಾಸ್ಮಿ ತಿಳಿಸಿದರು.

ಡಿವೈಎಸ್ ಸರ್ವೀಸ್ ಫಾರ್ ಎವರ್ ಫೌಂಡೇಶನ್(ಡಿಎಸ್‍ಎಫ್) ಸಂಸ್ಥಾಪಕ ಡಾ.ಸೈಯದ್ ಮುಝಮ್ಮಿಲ್ ಅಹ್ಮದ್ ಮಾತನಾಡಿ, ಜಮೀಯತ್ ಉಲಮಾ ಹಿಂದ್ ಸಂಘಟನೆಯ ಮೂಲಕ ಹೊಸ ಹೆಜ್ಜೆ ಇಡಲು ನಾವು ಮುಂದಾಗಿದ್ದೇವೆ. ಪ್ರಮುಖವಾಗಿ ಮೂರು ಕಾರ್ಯಕ್ರಮಗಳ ಮೂಲಕ ಕಾರ್ಯಾರಂಭ ಮಾಡಲು ಬಯಸಿದ್ದೇವೆ ಎಂದು ಹೇಳಿದರು.

ಡಿ.25ರಂದು ಸೀರತ್ ಉನ್ ನಬಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗುವುದು. ಇದರಲ್ಲಿ ಸರ್ವ ಧರ್ಮದ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಪಿಸಲಾಗುವುದು. ಪ್ರಥಮ ಬಹುಮಾನವಾಗಿ 10 ಸಾವಿರ ರೂ.ನಗದು, ಅದೇ ರೀತಿ ದ್ವಿತಿಯ, ತೃತೀಯ ಸ್ಥಾನ ಪಡೆದವರಿಗೂ ಡಿಎಸ್‍ಎಫ್ ಮೂಲಕ ನಗದು ಬಹುಮಾನಗಳನ್ನು ನೀಡಲಾಗುವುದು ಎಂದು ಅವರು ತಿಳಿಸಿದರು.

ಬಹುತೇಕ ಚಾಲಕರು ಎಸೆಸೆಲ್ಸಿವರೆಗೆ ಶಿಕ್ಷಣ ಪಡೆದಿರುವುದಿಲ್ಲ. ಚಾಲನಾ ಪರವಾನಿಗಿ, ಪಾಸ್‍ಪೋರ್ಟ್ ಸೇರಿದಂತೆ ಇನ್ನಿತರ ಸರಕಾರಿ ದಾಖಲೆಗಳಿಗೆ ಎಸೆಸೆಲ್ಸಿ ಕಡ್ಡಾಯವಾಗಿದೆ. ಆದುದರಿಂದ, ಎನ್‍ಐಒಎಸ್ ಮೂಲಕ ಆಟೋಚಾಲಕರು, ಕ್ಯಾಬ್ ಚಾಲಕರಿಗೆ ಎಸೆಸೆಲ್ಸಿ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ತರಬೇತಿ ನೀಡಲಾಗುವುದು ಎಂದು ಮುಝಮ್ಮಿಲ್ ಅಹ್ಮದ್ ಹೇಳಿದರು.

ವಿವಾಹ ಪೂರ್ವ ಕೌನ್ಸಿಲಿಂಗ್:

ಸಮಾಜದಲ್ಲಿ ಇಂದು ಕೌಟುಂಬಿಕ ಸಮಸ್ಯೆಗಳು, ವಿವಾಹ ವಿಚ್ಛೇಧನ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲೂ ವಿದ್ಯಾವಂತರೇ ಇಂತಹ ಸಮಸ್ಯೆಗಳಿಗೆ ಗುರಿಯಾಗುತ್ತಿರುವುದು ಆತಂಕಕಾರಿ. ಆದುದರಿಂದ, ಜಮೀಯತ್ ಉಲಮಾ ಹಿಂದ್ ಹಾಗೂ ಡಿಎಸ್‍ಎಫ್ ಮೂಲಕ ಯುವಕ, ಯುವತಿಯರಿಗೆ ವಿವಾಹ ಪೂರ್ವ ಕೌನ್ಸಿಲಿಂಗ್ ನಡೆಸಿ ಅವರಿಗೆ ಅಗತ್ಯ ಮಾರ್ಗದರ್ಶನ ನೀಡಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.

ಕಾರ್ಯಾಗಾರದಲ್ಲಿ ಮೌಲಾನಾ ಝಫರ್ ಇಮಾಮ್ ಸಾಬ್ ಮಿಫ್ತಾಹಿ, ಮೌಲಾನಾ ಮುಹಮ್ಮದ್ ಶೈಖ್ ನದ್ವಿ, ಡಿಎಸ್‍ಎಫ್ ರಾಷ್ಟ್ರೀಯ ಅಧ್ಯಕ್ಷ ಮುಹಮ್ಮದ್ ತಬ್ರೇಝ್, ಕಾಡುಗುಡಿ ವಾರ್ಡ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಇಬ್ರಾಹೀಂ ಯಾನೆ ಚಾಂದ್ ಭಾಯ್, ಫಿರೋಝ್ ಅಹ್ಮದ್ ಸೇರಿದಂತೆ ಸುಮಾರು 150ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X